Tel: 7676775624 | Mail: info@yellowandred.in

Language: EN KAN

    Follow us :


ಸಮಸ್ಯೆಗಳನ್ನು ಆದ್ಯತೆ ಮೇಲೆ ಪರಿಹರಿಸಲಾಗುವುದು: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ

Posted date: 20 Mar, 2021

Powered by:     Yellow and Red

ಸಮಸ್ಯೆಗಳನ್ನು ಆದ್ಯತೆ ಮೇಲೆ ಪರಿಹರಿಸಲಾಗುವುದು: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ

ಕನ್ನಮಂಗಲ ಗ್ರಾಮದಲ್ಲಿ ಬಹಳಷ್ಟು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸಲು ಈ ಬಾರಿ ಸದರಿ ಗ್ರಾಮವನ್ನು ಆಯ್ಕೆ ಮಾಡಲಾಗಿದ್ದು, ಆದ್ಯತೆ ಮೇರೆಗೆ ಸಮಸ್ಯೆಗಳನ್ನು  ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.


ಅವರು ಇಂದು ಆಯೋಜಿಸಲಾಗಿದ್ದ, *ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ* ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಬಹಳಷ್ಟು ಸಮಸ್ಯೆಗಳನ್ನು ಆನ್‌ಲೈನ್ ನಲ್ಲಿ ಪರಿಹರಿಸಬೇಕಿರುತ್ತದೆ. ಇದಕ್ಕೆ ಸಮಯಾವಕಾಶ ಬೇಕಿರುತ್ತದೆ ಎಂದರು.


*ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಿ:* ಚರ್ಚೆಯಿಂದ ಪ್ರಯೋಜನವಿಲ್ಲ. ಜಿಲ್ಲಾಧಿಕಾರಿಗಳು ಬಂದರೂ ಹೋದರು ಎನ್ನುವ ರೀತಿಯಾಗಬಾರದು‌. ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಿ ಅದರ ಆಧಾರದ ಮೇಲೆ ಅಧಿಕಾರಿಗಳು ಕೈಗೊಳ್ಳುವ ಕ್ರಮದ ಬಗ್ಗೆ ಆದೇಶಿಸಲಾಗುವುದು ಎಂದರು.


*ಇಂಡಿಕರಣ ಹಾಗೂ ಪೋಡಿಗೆ ಸ್ಥಳದಲ್ಲೇ ಕಚೇರಿ ಮಾಡಿದ ಜಿಲ್ಲಾಧಿಕಾರಿಗಳು:* ಗ್ರಾಮದಲ್ಲಿ ಬಹಳಷ್ಟು ಜನರು ಪೌತಿ ಖಾತೆ ಸಮಸ್ಯೆಯನ್ನು ಪರಿಹರಿಸಿಕೊಡುವಂತೆ ಮನವಿ ಸಲ್ಲಿಸಿದರು. ದೊಡ್ಡಮಣ್ಣುಗುಡ್ಡೆ ಸರ್ವೆ ನಂ 1 ಕ್ಕೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆಯಿಂದ ಯಾವುದೇ ವಿವಾದವಿಲ್ಲ. ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಸ್ಥಳ ಹಸ್ತಾಂತರ ಮಾಡಲು ಕಡತವನ್ನು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಕಡತ ಬಂದ ನಂತರ ಡಿನೊಟೀಫಿಕೇಷನ್ ಮಾಡಿ ಕಂದಾಯ ದಾಖಲೆಗಳಲ್ಲಿ ದುರಸ್ತಿ ಮಾಡುವುದು, ಖಾತೆಗೆ ಹೆಸರು ಸೇರಿಸುವ ಕೆಲಸ ಮಾಡಲಾಗುವುದು ಎಂದರು.


 ಈ ಹಿನ್ನಲೆಯಲ್ಲಿ ರೈತರಿಂದ ಸರ್ಕಾರ ವಿಧಿಸಿರುವ ಮಾನದಂಡದಂತೆ ರಾಮನಗರ ತಹಶೀಲ್ದಾರ್  ಕಚೇರಿ ಸಿಬ್ಬಂದಿಗಳು ದಾಖಲೆ ಸಂಗ್ರಹಿಸಲು ಇಂದಿನಿಂದಲೇ ಪ್ರತಿ ರೈತರಿಗೆ ಪ್ರತ್ಯೇಕ ಕಡತ ತೆರೆಯುವಂತೆ ತಿಳಿಸಿ‌, ಹೊಸ ಕಡತವನ್ನು ಸ್ಥಳಕ್ಕೆ ತರಿಸಿದರು. ರೈತರಿಗೆ ತಮ್ಮ ಬಳಿ ಇರುವ ಸಾಗುವಳಿ ಚೀಟಿ ಹಾಗೂ ಇತರೆ ದಾಖಲೆಗಳ ಮೂಲ ಪ್ರತಿಯನ್ನು ನೀಡಬಾರದು. ಜೆರಾಕ್ಸ್ ಪ್ರತಿಯನ್ನು ನೀಡುವಂತೆ ಸೂಚನೆ ನೀಡಿದರು.

ದಾಖಲೆಗಳನ್ನು ಸಂಗ್ರಹಿಸಿ ನೈಜತೆಯನ್ನು ಪರಿಶೀಲಿಸಿ ಸಿದ್ದಪಡಿಸಿ ಇಟ್ಟಿಕೊಂಡರೆ. ಡಿ ನೋಟಿಫಿಕೇಷನ್ ಆದ ತಕ್ಷಣ ಕ್ರಮವಹಿಸಬಹುದು ಎಂದು ತಹಶೀಲ್ದಾರ್ ಗೆ ತಿಳಿಸಿದರು.


*ಕಂದಾಯ ಗ್ರಾಮ:* ಗ್ರಾಮದಲ್ಲಿ 100 ಕುಟುಂಬವಿದ್ದು, 250 ಕ್ಕೂ ಹೆಚ್ಚಿನ ಜನಸಂಖ್ಯೆಯಿದ್ದು, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಪರಿಹಾರವಾದ ತಕ್ಷಣ ಕಂದಾಯ ಗ್ರಾಮವಾಗಿ ಪರಿವರ್ತಿಸಲಾಗುವುದು.   ಇ-ಖಾತೆ ಒದಗಿಸಲಾಗುವುದು. ಗ್ರಾಮದಲ್ಲಿ, ಶಾಲೆ, ಡೈರಿ, ಸಮುದಾಯಭವನ ಮತ್ತಿತರ ಅವಶ್ಯಕತೆ ಯ ಬಗ್ಗೆ ಚರ್ಚೆ ನಡೆಸಿ ಯೋಜನೆ ಸಿದ್ದಪಡಿಸಿಕೊಳ್ಳುವಂತೆ ತಿಳಿಸಿದರು.


*ಅರ್ಜಿ ನೀಡಲು ಬಂದವರಿಗೆ ಲಸಿಕೆ ಜಾಗೃತಿ:* ಅರ್ಜಿ ಸಲ್ಲಿಸಲು ಬಂದ ಬಹಳಷ್ಟು ಗ್ರಾಮಸ್ಥರು ವಯಸ್ಸಾದವರಾಗಿದ್ದು, ಅವರಿಗೆ ಅರ್ಜಿ ಸಲ್ಲಿಸಲು ಬಂದ ಸಂದರ್ಭದಲ್ಲಿ ಕುಳಿತುಕೊಳ್ಳಲು ಕುರ್ಚಿಯ ವ್ಯವಸ್ಥೆ ಮಾಡಿ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಯಸ್ಸಿನ ಹಾಗೂ  ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ವಿಚಾರಿಸಿ, ಪಡೆಯದಿದ್ದಲಿ, ಪಡೆದುಕೊಳ್ಳುವಂತೆ ಪ್ರೇರೇಪಿಸುತ್ತಿದ್ದು, ವಿಶೇಷವಾಗಿತ್ತು‌ 


*ರಸ್ತೆಗಾಗಿ ಅರ್ಜಿ:* ಗ್ರಾಮದ ವಿವಿಧ ಭಾಗದಲ್ಲಿ ಕಾಂಕ್ರೀಟ್  ರಸ್ತೆ ಮಾಡಿಕೊಡುವಂತೆ ಗ್ರಾಮಸ್ಥರು ಅರ್ಜಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಮನರೇಗಾ ಯೋಜನೆಯಡಿ ಗ್ರಾಮದ ಒಳಭಾಗದಲ್ಲಿರುವ ರಸ್ತೆಯನ್ನು ಹಂತ ಹಂತವಾಗಿ ಮಾಡಿಕೊಡುವುದಾಗಿ ತಿಳಿಸಿದರು.


*ನಳ ಸಂಪರ್ಕ:* ಗ್ರಾಮ ಸಭೆ ನಡೆಸಿ ನಳ ಒದಗಿಸುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕಳುಹಿಸಿದರೆ  ಜಲಜೀವನ್‌ ಮಿಷನ್ ಎರಡನೇ ಹಂತದಲ್ಲಿ ಕನ್ನಮಂಗಲ ಗ್ರಾಮವನ್ನು ಆಯ್ಕೆ ಮಾಡಿ  ನಳ ಒದಗಿಸಲಾಗುವುದು ಎಂದರು.


*ಆಧಾರ್ ತಿದ್ದುಪಡಿ:* ಶಿವಲಿಂಗಮ್ಮ ಎಂಬುವವರು ತಮಗೆ 63 ವರ್ಷವಾಗಿದ್ದು,  ಆಧಾರ್ ಕಾರ್ಡಿನಲ್ಲಿ ವಯೋಮಿತಿ ಸರಿಯಾಗಿ ನಮೂದಾಗಿಲ್ಲದ ಕಾರಣ ವೃದ್ಧಾಪ್ಯದ ವೇತನ ದೊರಕುತ್ತಿಲ್ಲ ಎಂದು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ವೈದ್ಯರು ಪರಿಶೀಲಿಸಿ ಅವರ ವಯಸ್ಸಿನ ದೃಢೀಕರಣ ಪತ್ರ ನೀಡುವಂತೆ ನಂತರ ಆಧಾರ್ ನಲ್ಲಿ ತಿದ್ದುಪಡಿ ಮಾಡುವಂತೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಡಿ.ಡಿ.ಎಲ್ ಆರ್. ಸಂತೋಷ್ ಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑