Tel: 7676775624 | Mail: info@yellowandred.in

Language: EN KAN

    Follow us :


ಒತ್ತಡದ ಕೆಲಸ ನಡುವೆಯೂ ಮಡದಿ ಮಕ್ಕಳಿಗೆ ಸಮಯ ನೀಡಿ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್

Posted date: 27 Mar, 2021

Powered by:     Yellow and Red

ಒತ್ತಡದ ಕೆಲಸ ನಡುವೆಯೂ ಮಡದಿ ಮಕ್ಕಳಿಗೆ ಸಮಯ ನೀಡಿ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್

ಚನ್ನಪಟ್ಟಣ: ಅತಿ ಹೆಚ್ಚು ಒತ್ತಡ ಮತ್ತು ಸಮಯದ ಪರಿವೆಯೇ ಇಲ್ಲದೆ ಕೆಲಸ ನಿರ್ವಹಿಸುವ ಏಕೈಕ ಇಲಾಖೆ ಪೋಲಿಸ್ ಇಲಾಖೆ. ಇಂತಹ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ವರ್ಗದ ಪೋಲಿಸರು ಬಹಳ ಒತ್ತಡದಿಂದ ಕೆಲಸ ನಿರ್ವಹಿಸುವುದರಿಂದ ತಮ್ಮ ಕುಟುಂಬಕ್ಕೆ ಸಮಯ ನೀಡಲಾಗುತ್ತಿಲ್ಲ. ತಾವುಗಳು ಕೆಲಸದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗುತ್ತೀರಿ. ಆದ್ದರಿಂದ ಕೆಲಸ ಮುಗಿದ ತಕ್ಷಣ ಬೇರೆ ಮೋಜುಮಸ್ತಿಯಲ್ಲಿ ಕಾಲಕಳೆಯದೆ, ತಮ್ಮ ಕುಟುಂಬಕ್ಕಾಗಿ ಮೀಸಲಿಡಿ ಎಂದು ಬೆಂಗಳೂರು ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಪೋಲೀಸರಿಗೆ ಕಿವಿಮಾತು ಹೇಳಿದರು.  ಬೇರೆ ಇಲಾಖೆಗಿಂತಲೂ ಹೆಚ್ಚು ಸಮಯ ಕೆಲಸ ನಿರ್ವ ಹಿಸಿತ್ತಾರೆ .ತಾವೇಷ್ಟೆ ಒತ್ತಡ ದಿಂದ ಕೆಲಸ ನಿರ್ವಹಿಸಿದರೂ ಸಹ ಕರ್ತವ್ಯದಲ್ಲಿ ಅಸಡ್ಡೆ ತೋರುವುದಿಲ್ಲ. ಸಣ್ಣ ಮಕ್ಕಳಿರುವ ಪೋಲಿಸರು ತಮ್ಮ ಮಕ್ಕಳು ಮತ್ತು ಕುಟುಂಬಕ್ಕು ಹೆಚ್ಚು ಸಮಯ ನೀಡಬೇಕು. ಎಂದು ಬೆಂಗಳೂರು ಕೇಂದ್ರ ವಲಯ ಪೋಲಿಸ್ ಮಹಾ ನಿರೀಕ್ಷಕ  ಎಂ ಚಂದ್ರ ಶೇಖರ್ ತಿಳಿಸಿದರು. 

ಅವರು ಇಂದು ನಗರದ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ  2020 ರ ಜಿಲ್ಲಾ ಪೋಲಿಸ್ ಕ್ರೀಡಾ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಮಹತ್ವದ  ಹುದ್ದೆಯಲ್ಲಿರುವ ಪೊಲೀಸರಿಗೆ, ಒತ್ತಡದ ಬದುಕಿನಲ್ಲಿ ಹಲವಾರು ರೋಗರುಜಿನಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆ ರೀತಿಯ ಆರೋಗ್ಯದ ಮೇಲೆ ಬೀಳುವ 

ದುಷ್ಪರಿಣಾಮಗಳನ್ನು ನಿಯಂತ್ರಿಸಲು ಸರ್ಕಾರ ಅದರಲ್ಲೂ ಪೊಲೀಸ್ 

ಇಲಾಖೆ ವರ್ಷಕ್ಕೊಂದು ಭಾರಿ ಈ ರೀತಿಯ ಕ್ರೀಡೆಗಳನ್ನು ಆಯೋಜನೆ ಮಾಡಿ ತಮ್ಮ ಒತ್ತಡವನ್ನು ನೀಗಿಸಿಕೊಳ್ಳಬೇಕು ಎಂದರು. ಕ್ರೀಡಾಕೂಟಗಳು, ಪೊಲೀಸರ ಆರೋಗ್ಯವನ್ನು ಸ್ಥಿರವಾಗಿಡಲು ಹಾಗೂ ಅವರಲ್ಲಿರುವ ಕ್ರೀಡಾ ಪ್ರತಿಭೆಗಳನ್ನು  ಮೆರೆಯಲು ಈ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿದೆ ಎಂದು ತಿಳಿಸಿದರು.


ಸಣ್ಣ ಮಕ್ಕಳಿರುವ ಪೋಲೀಸರು, ಮಕ್ಕಳು ಕನಿಷ್ಠ ಹದಿನೈದು ವರ್ಷಗಳಾಗುವವರೆಗಾದರೂ ಮಕ್ಕಳ ಜೊತೆಗೆ ಹೆಚ್ಚು ಸಮಯ ಕಳೆಯಬೇಕು. ಆ ಸಮಯದಲ್ಲಿ ಮಾತ್ರ ಮಕ್ಕಳನ್ನು ಸಮಾಜಮುಖಿಯಾಗಿ ಮಾಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಪೋಲೀಸರು ಜನಸ್ನೇಹಿಯಾಗಿ ಇರಬೇಕು. ಪೋಲೀಸರಿಗೆ ಎಲ್ಲವೂ ತಿಳಿದಿರುವುದಿಲ್ಲ. ಅವರಿಗೆ ಮಾಧ್ಯಮ ಸೇರಿದಂತೆ ಹಲವರು ಮಾಹಿತಿ ನೀಡಿರುತ್ತಾರೆ. ಹೋಂಗಾರ್ಡ್ ಗಳು ತಮ್ಮ ಜೊತೆ ಕೆಲಸ ನಿರ್ವಹಿಸುತ್ತಾರೆ. ಅವರನ್ನು ಸಹ ನೀವು ಇಂದು ಗುರುತಿಸಿರುವುದು ಶ್ಲಾಘನೀಯ ಎಂದರು.


ಈ ಸಂದರ್ಭದಲ್ಲಿ ವಿಜೇತರಾದ ಪೋಲಿಸ್ ಕ್ರೀಡಾ ಪಟುಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗೀರಿಶ್, ಪೋಲಿಸ್ ಉಪವಿಭಾಗಾದಿಕಾರಿಗಳಾದ ಚನ್ನಪಟ್ಟಣ ದ ಕೆ ಎನ್. ರಮೇಶ್, ಮಾಗಡಿ  ಓಂ ಪ್ರಕಾಶ್, ರಾಮನಗರ ದ ಮೋಹನ್ ಕುಮಾರ್, ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಮಹೇಶ್,

ಜಿಲ್ಲೆಯ ಎಲ್ಲಾ ವೃತ್ತನಿರಿಕ್ಷಕರು, ,ಉಪನಿರಿಕ್ಷಕರು ಕ್ರೀಡಾಪಟುಗಳು ,ಪೋಷಕರು ಮುಂತಾದವರು  ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑