ಮಾಕಳಿ ಗ್ರಾಮ ಪಂಚಾಯತಿ ಆಸ್ತಿ ಕಬಳಿಸಿ ಅಕ್ರಮವಾಗಿ ಮನೆ ನಿರ್ಮಿಸುತ್ತಿರುವ ನಿವೃತ್ತ ಕಂದಾಯ ಅಧಿಕಾರಿ ಪುಟ್ಟಲಿಂಗಯ್ಯ. ಗ್ರಾಮಸ್ಥರ ದೂರು.
ತಾಲ್ಲೂಕಿನ ಮಾಕಳಿ ಗ್ರಾಮದ ನಿವೃತ್ತ ಕಂದಾಯ ನಿರೀಕ್ಷಕ ಪುಟ್ಟಲಿಂಗಯ್ಯ ಎಂಬುವವರು ಗ್ರಾಮ ಪಂಚಾಯತಿಯ ಆಸ್ತಿಯನ್ನು ಕಬಳಿಸಿ, ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ. ಇದರ ಬಗ್ಗೆ ದಾಖಲೆಗಳೊಂದಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಎಂ ಕೆ ದೊಡ್ಡಿ ಪೋಲೀಸ್ ಠಾಣೆ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ನೀಡಿದರು ಸಹ ಇದುವರೆಗೂ ಸ್ಪಂದಿಸದಿರುವುದು ಅಧಿಕಾರಿಗಳ ಜಾಣನಡೆಯನ್ನು ಪ್ರಶ್ನಿಸುವಂತಾಗಿದೆ. ಶೀಘ್ರವಾಗಿ ಅಧಿಕಾರಿಗಳು ಬಂದು ಪರಿಶೀಲಿಸಿ ಮನೆಯನ್ನು ಉರುಳಿಸಿ, ಅಕ್ರಮದಾರನನ್ನು ಕಾನೂನು ರೀತ್ಯಾ ಶಿಕ್ಷಿಸಿ, ಸರ್ಕಾರದ ಆಸ್ತಿಯನ್ನು ಉಳಿಸಬೇಕು. ಇಲ್ಲವಾದರೆ ತಾಲ್ಲೂಕು ಪಂಚಾಯತಿ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಮಾಕಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಪುಟ್ಟಲಿಂಗೇಗೌಡ ಮತ್ತು ಸಹವರ್ತಿಗಳು ಎಚ್ಚರಿಕೆ ನೀಡಿದರು.
ಹಿನ್ನೆಲೆ:
ತಾಲ್ಲೂಕಿನ ಮಳೂರು ಹೋಬಳಿಯ ಮಾಕಳಿ ಗ್ರಾಮದ 170/2 ಸರ್ವೇ ನಂಬರಿನಲ್ಲಿ ಶಾನುಭೋಗರ ಇನಾಂತಿಯ ಎರಡು ಎಕರೆ ಮೂವತ್ತು ಗುಂಟೆ ಜಮೀನು ಇದ್ದು, 1954 ನೇ ಇಸವಿಯಲ್ಲಿ ಗ್ರಾಮದ ಇಪ್ಪತ್ತೊಂದು ಮಂದಿಗೆ ನಿವೇಶನಗಳನ್ನು ವಿಂಗಡಿಸಿ ಹಂಚಲಾಗಿತ್ತು. ಉಳಿಕೆಯಾದ 21 ಗುಂಟೆ ಜಮೀನನ್ನು ಗ್ರಾಮ ಪಂಚಾಯತಿಯ ಸುಪರ್ದಿಗೆ ಬಿಟ್ಟು ಕೊಡಲಾಗಿದ್ದು, ಆ ಜಾಗದಲ್ಲಿ ಸಮುದಾಯ ಭವನ ಮತ್ತು ಪಶು ಚಿಕಿತ್ಸಾಲಯ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ 2007 ನೇ ಇಸವಿಯಲ್ಲಿ ಶಿವಲಿಂಗಯ್ಯ ಬಿನ್ ಚನ್ನೇಗೌಡ ಹಾಗೂ ಅವರ ತಾಯಿ ದೇವೀರಮ್ಮ ಮತ್ತು ಸಹೋದರ ನಾಗೇಶ್ ಹಾಗೂ ವಿಶ್ವೇಶ್ವರಯ್ಯ ಎಂಬುವರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಆ ಜಾಗವನ್ನು ಕಬಳಿಸಿಲು ಯತ್ನಿಸಿದ್ದು, ಅಂದಿನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಗೋವಿಂದಯ್ಯ, ಸದಸ್ಯರಾದ ಪುಟ್ಟಲಿಂಗೇಗೌಡ, ಕೆಂಪೇಗೌಡ, ಈರೇಗೌಡ, ಶಿವರಾಜು, ಮತ್ತು ಚಿಕ್ಕೋನು ಎಂಬುವವರು ಸೇರಿ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಕೇಸು ದಾಖಲಿಸಿದ್ದರು.
2008 ರಿಂದ 2015 ರವರೆಗೆ ಕೇಸು ನಡೆದು, ನಂತರ ಚನ್ನಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ಸದರಿ ನ್ಯಾಯಾಲಯದಲ್ಲಿ ಪ್ರಕರಣ ಸಂಖ್ಯೆಯ ಓ ಎಸ್ 183/15 ರ ಪ್ರಕಾರ 08/09/2015 ರಂದು ರಾಜಿ ಮಾಡಿಕೊಂಡು, ಶಿವಲಿಂಗಯ್ಯ ಮತ್ತು ಸಂಬಂಧಿಕರಿಗೆ 70×90 ರ ಅಳತೆಯ ಆರು ಗುಂಟೆ ಜಮೀನು ಬಿಟ್ಟು, ಉಳಿದ ಹದಿನೈದು ಗುಂಟೆ ಜಮೀನನ್ನು ಗ್ರಾಮ ಪಂಚಾಯತಿ ಜಾಗವೆಂದು ನ್ಯಾಯಾಲಯವು ಆದೇಶ ಹೊರಡಿಸಿತ್ತು. ಈ ಆದೇಶವು ಅಂದಿನ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಲಕ್ಷ್ಮಮ್ಮ ಮತ್ತು ಉಪಾಧ್ಯಕ್ಷೆ ವರಲಕ್ಷ್ಮಮ್ಮ ಹಾಗೂ ಸದಸ್ಯರ ಸಮ್ಮುಖದಲ್ಲಿ ಪಂಚಾಯತಿಯ ಸಾಮಾನ್ಯ ಸಭೆಯ ಕಡತದಲ್ಲಿ ದಾಖಲಾಗಿದೆ ಎಂದು ತಿಳಿಸಿದರು.
ಆರು ತಿಂಗಳ ಹಿಂದೆ ನಿವೃತ್ತ ಕಂದಾಯ ನಿರೀಕ್ಷಕ ಪುಟ್ಟಲಿಂಗಯ್ಯ ಬಿನ್ ಆರ್ಮುನಿ ಕೆಂಪೀರೇಗೌಡ (ಹಾಲಿ ಬೆಂಗಳೂರು ವಾಸಿ) ಎಂಬುವವರು ಅಕ್ರಮವಾಗಿ ಮನೆ ನಿರ್ಮಿಸಲು ಮುಂದಾಗಿದ್ದು, ಅಂದಿನ ಅಭಿವೃದ್ಧಿ ಅಧಿಕಾರಿಗಳು ಸದರಿ ಜಾಗವು ಗ್ರಾಮ ಪಂಚಾಯತಿಗೆ ಸೇರಿದ್ದು, ಅತಿಕ್ರಮ ಪ್ರವೇಶ ಮಾಡಿದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತೀರಿ ಎಂದು ಫಲಕ ಹಾಕಿದ್ದರು. ಸ್ವಲ್ಪ ಸಮಯ ಸುಮ್ಮನಿದ್ದು ಗ್ರಾಮ ಪಂಚಾಯತಿ ಚುನಾವಣಾ ಸಂದರ್ಭದಲ್ಲಿ ಬೋರ್ಡ್ ಕಿತ್ತೆಸೆದು, ಮಣ್ಣು ಹಾಕಿಸಿ ಮನೆ ನಿರ್ಮಿಸಿಕೊಂಡಿದ್ದಾರೆ. ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಕಂಡು ಕಾಣದಂತೆ ಜಾಣಗುರುಡು ಪ್ರದರ್ಶಿಸುತ್ತಿದ್ದಾರೆ. ಇದನ್ನೆಲ್ಲಾ ಗಮನಿಸಿ ಎಲ್ಲಾ ಹಂತದ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದರೂ ಸಹ ಎಚ್ಚೆತ್ತುಕೊಳ್ಳದಿರುವುದು ಆಡಳಿತಾಧಿಕರಿಗಳು ಯಾರ ಪರವಿದ್ದಾರೆ ಎಂಬ ಗುಮಾನಿ ಬರುತ್ತಿದೆ. ಮಾರ್ಚಿ ತಿಂಗಳಿನಲ್ಲಿ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು