ಮಹಾತ್ಮರ ಪ್ರತಿಮೆಗಳಿಗೆ ಆಡಂಬರದಿಂದ ಪೂಜಿಸುವ ಬದಲು ಅವರ ನಡೆನುಡಿ ಅನುಸರಿಸಿ ಗೌರವ ಸಲ್ಲಿಸಬೇಕು. ಡಿವೈಎಸ್ಪಿ ರಮೇಶ್
ಮಹಾತ್ಮರ ಪ್ರತಿಮೆಗಳನ್ನು ಸ್ಥಾಪಿಸಿ, ಆಡಂಬರದ ಪೂಜೆ ಮತ್ತು ಮೆರವಣಿಗೆ ಮಾಡಿ, ರಜೆ ಪಡೆದು ಮಜಾ ಮಾಡುವ ಬದಲು ಅಂತಹ ಮಹಾತ್ಮರ ನಡೆ ನುಡಿಗಳನ್ನು ಅನುಸರಿಸುವ ಜೊತೆಗೆ ಎಲ್ಲರೂ ಪಾಲಿಸುವಂತೆ ಜಾರಿಗೆ ಬಂದರೆ ಅಂತಹ ಮಹಾತ್ಮರ ಆಶಯಗಳು ಈಡೇರುತ್ತವೆ ಎಂದು ಉಪ ಪೊಲೀಸ್ ಅಧೀಕ್ಷಕ ಕೆ.ಎನ್ ರಮೇಶ್ ಅಭಿಪ್ರಾಯ ಪಟ್ಟರು.
ಅವರು ಇಂದು ಇಲ್ಲಿನ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಹಮ್ಮಿಕೊಂಡಿದ್ದ ಜಗಜೀವನ್ ರಾಮ್ ಅವರ 114 ನೇ ಜಯಂತಿಯಲ್ಲಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ನಾಡು ನುಡಿಗೆ ನಾವು ಹೇಗೆ ಸ್ಪಂದಿಸುತ್ತೇವೆಯೋ ಅದೇ ರೀತಿಯಾಗಿ ರಾಷ್ಟ್ರ ಕಟ್ಟಿದ ನಾಯಕರುಗಳನ್ನೂ ಸಹ ನಾವು ಸದಾ ಸ್ಮರಿಸಿಕೊಳ್ಳಬೇಕು. ಸ್ವಾತಂತ್ರ ಪೂರ್ವದಲ್ಲಿ ಸ್ವಾತಂತ್ರ ಪಡೆಯುವುದಕ್ಕಾಗಿ ಪಟ್ಟಂತಹ ಕಷ್ಟಗಳು, ಸ್ವಾತಂತ್ರ ನಂತರ ರಾಷ್ಟ್ರ ಕಟ್ಟಲು ಎದುರಿಸಿದ ಸಂಕಷ್ಟಗಳನ್ನು ನಾವು ಓದಿ ತಿಳಿದುಕೊಳ್ಳಬೇಕಾಗಿದೆ. ಇಂದು ಯಾವುದೇ ಜಯಂತಿ ಎಂದರೆ, ಕಾಟಾಚಾರಕ್ಕೆ ಎಂಬಂತೆ ಆಗಿದ್ದು, ಅದನ್ನು ತಡೆಗಟ್ಟಿ ಅವರ ಆಶೋತ್ತರಗಳನ್ನು ಈಡೇರಿಸುವ ಮೂಲಕ ಜಯಂತಿಯನ್ನು ಆಚರಿಸಬೇಕು ಎಂದು ತಿಳಿಸಿದರು.
ನಗರಸಭೆಯ ಪೌರಾಯುಕ್ತರಾದ ಶಿವನಾಂಕಾರಿಗೌಡ ಮಾತನಾಡಿ, ಜಗಜೀವನ್ ರಾಂ ಅವರು ಹಸಿರು ಕ್ರಾಂತಿಯ ಹರಿಕಾರರಾಗಿದ್ದು. ಸ್ವಾತಂತ್ರ್ಯ ನಂತರ ದೇಶವು ಆರ್ಥಿಕ ಮತ್ತು ಆಹಾರ ಸಂಕಷ್ಟವನ್ನು ಎದುರಿಸುತ್ತಿತ್ತು. ಆ ಸಂದರ್ಭದಲ್ಲಿ ಜಗಜೀವನ್ ರಾಂ ಅವರು ಆಹಾರ ಉತ್ಪಾದನೆಯಲ್ಲಿ ಒಂದು ಹೊಸ ಕ್ರಾಂತಿಯನ್ನು ಹುಟ್ಟು ಹಾಕಿ ಜನರ ಹಸಿವನ್ನು ನೀಗಿಸಿದ್ದರು, ಅಂದು ಅವರು ಹಾಕಿ ಕೊಟ್ಟ ಹಸಿರುಕ್ರಾಂತಿ ಬುನಾದಿಯು ಇನ್ನೂ ಹಸಿರಾಗಿರುವುದೇ ಸಾಕ್ಷಿಯಾಗಿದೆ, ಆದ್ದರಿಂದ ಇವರನ್ನು ಸದಾಕಾಲ ಸ್ಮರಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಸಂದರ್ಭದಲ್ಲಿ ಉಪ ತಹಶೀಲ್ದಾರ್ ಕೃಷ್ಣಪ್ಪ, ಶಿರಸ್ತೇದಾರ್ ಹರೀಶ್, ಸಮಾಜ ಕಲ್ಯಾಣ ಇಲಾಖೆಯ ಸರೋಜಮ್ಮ, ಆಚರಣಾ ಸಮಿತಿಯ ಸದಸ್ಯರು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು