Tel: 7676775624 | Mail: info@yellowandred.in

Language: EN KAN

    Follow us :


ಅಂತರರಾಷ್ಟ್ರೀಯ ಮಟ್ಟದ ಉದ್ಯಮಕ್ಕೆ ನಗರದ ಅಂಚೆ ಕಛೇರಿಯಲ್ಲಿ ಪಾರ್ಸೆಲ್ ಕೇಂದ್ರ ಉದ್ಘಾಟನೆ

Posted date: 06 Apr, 2021

Powered by:     Yellow and Red

ಅಂತರರಾಷ್ಟ್ರೀಯ ಮಟ್ಟದ ಉದ್ಯಮಕ್ಕೆ ನಗರದ ಅಂಚೆ ಕಛೇರಿಯಲ್ಲಿ ಪಾರ್ಸೆಲ್ ಕೇಂದ್ರ ಉದ್ಘಾಟನೆ

ಅಂಚೆ ಇಲಾಖೆಯು ಈ ಮೊದಲು ಕೇವಲ ಅಂಚೆ ಪತ್ರಗಳನ್ನು ಮಾತ್ರ ವಿತರಿಸುತ್ತಿತ್ತು. ಬದಲಾವಣೆಯ ಪರ್ವದಲ್ಲಿ ತಂತ್ರಜ್ಞಾನಕ್ಕೆ ಅನುಗುಣವಾಗಿ ಇಲಾಖೆಯೂ ಸಹ ಹಲವು ಸೇವೆಗಳನ್ನು ಒದಗಿಸುತ್ತಲಿದೆ. ಈ ಸಂಬಂಧ ಚನ್ನಪಟ್ಟಣ ಅಂಚೆ ಕಛೇರಿಯಲ್ಲಿ ಇಂದು ಅಂತರರಾಷ್ಟ್ರೀಯ ಮಟ್ಟದ ಹಲವಾರು  ರೀತಿಯ ಜನಪಯೋಗಿ ಪಾರ್ಸೆಲ್‌ಗಳನ್ನು ಬುಕ್ಕಿಂಗ್ ಮಾಡುವ ಕೇಂದ್ರವನ್ನು ತೆರೆದಿದ್ದೇವೆ. ಈ ನಗರವು ಬೊಂಬೆಗಳಿಗೆ ಪ್ರಸಿದ್ದಿಯಾಗಿದ್ದು, ಹಲವಾರು ಬೊಂಬೆ ತಯಾರಕರು ಹಾಗೂ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ರಾಮನಗರ ಜಿಲ್ಲೆಯಲ್ಲಿ ಪ್ರಥಮ ಆದ್ಯತೆಯನ್ನು ಈ ನಗರದ ಅಂಚೆ ಕಛೇರಿಗೆ  ನೀಡಲಾಗಿದೆ ಎಂದು  ಭಾರತೀಯ ಅಂಚೆ ಇಲಾಖೆಯ ಸೆಕ್ರೇಟರಿ ಪ್ರದೀಪ್ತ ಕುಮಾರ್ ಬಿಸಾಯ್ ಅವರು ತಿಳಿಸಿದರು.

ಅವರು ಇಂದು ನಗರದ ಅಂಚೆ ಕಛೇರಿಯ ಆವರಣದಲ್ಲಿ ಭಾರತೀಯ ಅಂಚೆ ಮೂಲಕ ಅಂತರರಾಷ್ಟ್ರೀಯ ಪಾರ್ಸೆಲ್‌ಗಳ ಬುಕ್ಕಿಂಗ್ ಕೇಂದ್ರವನ್ನು ಉದ್ಘಾಟಿಸಿ, ಮಾತನಾಡಿದರು.


ಕರ್ನಾಟಕ ಕೇಂದ್ರ ಅಂಚೆಯ ಮುಖ್ಯ ಕಾರ್ಯದರ್ಶಿಯಾದ ಶಾರದಾ ಸಂಪತ್ ಅವರು ಮಾತನಾಡಿ, ಅಂಚೆ ಇಲಾಖೆಯಲ್ಲಿ ಭಾರತೀಯ ಅಂಚೆ ಮುಖ್ಯವಾಗಿ ಲಾಜಿಸ್ಟಿಕ್ಸ್ ಪಾಲುದಾರನಾಗಿ ಕಾರ್ಯನಿರ್ವಹಿಸುತ್ತಿದೆ. ಅಂಚೆ ಕಛೇರಿಯು ಬೃಹತ್ ವ್ಯಾಪಾರಿಗಳ ಗ್ರಾಹಕರಿಗಾಗಿ ತುರ್ತಾಗಿ ತೆಗೆದುಕೊಳ್ಳುವ ಸೌಲಭ್ಯವನ್ನು ಒದಗಿಸುತ್ತದೆ. ಸಣ್ಣ ವ್ಯಾಪಾರಿಗಳಿಗೆ ರಫ್ತುದಾರರ ಸಹಯೋಗದೊಂದಿಗೆ ಕೊಳ್ಳಲು ಹಾಗು ಕೊಡಲು ಅನುಕೂಲವಾಗುವಂತೆ ಕೆಲವು ಕಾರ್ಯವಿಧಾನಗಳನ್ನು ಅಭಿವೃದ್ಧಿ ಪಡಿಸುತ್ತಿದೆ. ಸ್ಥಳೀಯ ವ್ಯಾಪಾರಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.


ಬೆಂಗಳೂರಿನ ಅಂಚೆ ಇಲಾಖೆಯ ಮುಖ್ಯ ಕಾರ್ಯದರ್ಶಿ ಶುಯೇಲಿ ಬರ್ಮನ್ ಮಾತನಾಡಿ, ಅಂಚೆ ಕಛೇರಿ ಸಿಬ್ಬಂದಿಯು ಗ್ರಾಹಕರಿಗೆ ವಿಳಾಸ, ಪ್ಯಾಕೇಜಿಂಗ್, ನಿಷೇಧ ಮತ್ತು ಅಂತರಾಷ್ಟ್ರೀಯ ಮಿಂಚಂಚೆಗೆ ಸಂಬಂಧಿಸಿದ ನಿರ್ಬಂಧಗಳ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ. ವ್ಯಾಪಾರ ಸುಂಕದ ಪರವಾನಗಿಯನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ವಿದೇಶಿ ಅಂಚೆಕಛೇರಿಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಎಂದರು.

ಅಂತರರಾಷ್ಟ್ರೀಯ ಅಂಚೆ ವಹಿವಾಟು ಮತ್ತು ಪಾರ್ಸೆಲ್ ಬುಕ್ಕಿಂಗ್ ವಿಚಾರಣೆ ಮತ್ತು ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗೆ 080-26600590 ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.


ವೇದಿಕೆಯಲ್ಲಿ ರಾಮನಗರ ಕೈಗಾರಿಕಾ ಅಂಚೆ ಇಲಾಖೆಯ ಜಂಟಿ ನಿರ್ದೇಶಕ ಎಲ್.ನಾಗರಾಜು ಹಾಗೂ ಚನ್ನಪಟ್ಟಣ ಅಂಚೆ ಕಛೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಹಾಜರಿದ್ದರು.

ಈ ಸಂದರ್ಭದಲ್ಲಿ ಅಂಬಾಡಹಳ್ಳಿ ಪೋಸ್ಟ್ ಮಾಸ್ಟರ್ ಹೆಚ್.ಎಸ್ ಮಂಜುರವರು, ಎಲ್ಲಾ ವಿಭಾಗಗಳಲ್ಲೂ ಹೆಚ್ಚಿನ ಸೇವೆ ಸಲ್ಲಿಸಿರುವುದರಿಂದ 5 ಸ್ಟಾರ್ ಆವಾರ್ಡ್ ಅನ್ನು ನೀಡಿ ಗೌರವವಿಸಲಾಯಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑