Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ

Posted date: 24 Apr, 2021

Powered by:     Yellow and Red

ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ

ಕೊರೊನಾ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವೂ ಶುಕ್ರವಾರ ರಾತ್ರಿಯಿಂದ, ಸೋಮವಾರ ಬೆಳಿಗ್ಗೆ ತನಕ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ಚನ್ನಪಟ್ಟಣ ನಗರವೂ ಸಂಪೂರ್ಣ ಸ್ತಬ್ಧವಾಗಿದೆ.


ಚನ್ನಪಟ್ಟಣ ನಗರದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಸಹ ಅತ್ಯಗತ್ಯ ವಾಹನಗಳ ಸಂಚಾರ ಹೊರತುಪಡಿಸಿ ಶೇ 98 ರಷ್ಟು ವಾಹನಗಳ ಸಂಚಾರ ನಿಂತುಹೋಗಿದೆ. ಸಾರಿಗೆ ಬಸ್ಸುಗಳು ಮತ್ತು ನಗರ ಸಂಚಾರಕ್ಕೆ ಇರುವ ಆಟೋಗಳು ಸಹ ಬೆರಳೆಣಿಕೆಯಷ್ಟು ಮಾತ್ರ ಸಂಚರಿಸುತ್ತಿವೆ. ಸರ್ಕಾರಿ ಮತ್ತು ಖಾಸಗಿ ಕಛೇರಿಗಳಂತೂ ಬಾಗಿಲು ಬಡಿದು ನಿಂತಿವೆ.


ಹೆದ್ದಾರಿ ಬದಿಯಲ್ಲಿರುವ ಎಲ್ಲಾ ದೊಡ್ಡ ದೊಡ್ಡ ಅಂಗಡಿಗಳು, ಮಾಲ್ ಗಳು, ಬ್ಯಾಂಕುಗಳು, ನಗರದ ಅತ್ಯಂತ ಜನದಟ್ಟಣೆಯ ವ್ಯಾಪಾರ ಪ್ರದೇಶಗಳಾದ ಅಂಚೆ ಕಛೇರಿ ರಸ್ತೆ, ಎಂ ಜಿ ರಸ್ತೆ, ಡಿ ಟಿ ರಾಮು ವೃತ್ತ ಮತ್ತು ಪೇಟೆ ಬೀದಿ ಎಂದೇ ಹೆಸರಾದ ಜೆ ಸಿ ರಸ್ತೆಗಳು ಸಹ ಗರ ಬಡಿದಂತೆ ಬಾಗಿಲು ಬಡಿದು ನಿಂತಿವೆ. ವಿಶೇಷವಾಗಿ ಅಂಚೆ ಕಚೇರಿ ರಸ್ತೆ ಮತ್ತು ಎಂ ಜಿ ರಸ್ತೆಯ ಎರಡೂ ಭಾಗದ ಉದ್ದಗಲಕ್ಕೂ ಗಿಜಿಗುಡುತ್ತಿದ್ದ ಪುಟ್ಪಾತ್ ಅಂಗಡಿಗಳು ಪ್ಲಾಸ್ಟಿಕ್ ಕವರ್ ಗಳನ್ನು ಹೊದ್ದು ತಣ್ಣಗೆ ಮಲಗಿವೆ.


ಕಳೆದ ವರ್ಷ ಪ್ರಾರಂಭದ ಲಾಕ್ಡೌನ್ ಗೆ ಹೋಲಿಸಿದರೆ ಇಂದಿನ ಲಾಕ್ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಬಹುತೇಕ ಎಲ್ಲಾ ವರ್ಗದ ಜನರು ಅರ್ಥೈಸಿಕೊಂಡಿದ್ದಾರೆ. ಅದರಲ್ಲೂ ಗ್ರಾಮೀಣ ಭಾಗದ ಜನರು ಸಹ ಅಗತ್ಯತೆ ಹೊರತುಪಡಿಸಿ ನಗರಕ್ಕೆ ಕಾಲಿಡಲು ಹಿಂದೆಮುಂದೆ ನೋಡುತ್ತಿರುವುದರಿಂದ, ಅವರಲ್ಲೂ ಜಾಗೃತಿ ಮೂಡಿರಿವುದು ಅರಿವಾಗುತ್ತಿದೆ.


ಈಗಾಗಲೇ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗಿರೀಶ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ರಮೇಶ್ ರವರು ಎಲ್ಲಾ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾರ್ಗಸೂಚನೆ ಮತ್ತು ಖಡಕ್ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲಲ್ಲಿ ಪೋಲೀಸರು ಸಹ ನಗರದೆಲ್ಲೆಡೆ ಹದ್ದಿನ ಕಣ್ಣಿಟ್ಟಿರುವುದರಿಂದ ಜನರು ಬೀದಿಗಿಳಿಯಲು ಹೆದರುತ್ತಿರುವುದು ಸತ್ಯ.

ಒಟ್ಟಾರೆ ಕೊರೊನಾ ಸೋಂಕು ತಡೆಗಟ್ಟಲು ತಾಲ್ಲೂಕು ಆಡಳಿತವೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವುದು, ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಸಹ ಸಾಥ್ ನೀಡಿರುವುದು ಒಳ್ಳೆಯ ಬೆಳವಣಿಗೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑