ಮಗಳ ಜನ್ಮ ದಿನಾಚರಣೆಯ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ
ರಾಮನಗರ : ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಎಂ. ಶಿವನಂಜಯ್ಯ ತಿಳಿಸಿದರು.
ಸಂಶೋಧಕ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ದಂಪತಿ ತಮ್ಮ ಮಗಳಾದ ಆರ್. ಯಶಿಕಾ ಜನುಮ ದಿನದ ಅಂಗವಾಗಿ ತಾಲ್ಲೂಕಿನ ಕೂಟಗಲ್ ಬಳಿಯ ಇರುಳಿಗರ ಕಾಲೋನಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಮಾಸ್ಕ್ ಹಾಗೂ ಸೋಪ್ ವಿತರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಅವರಿಗೆ ಸಹಕಾರ ನೀಡಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತದೆ. ಜನರು ಜಾಗೃತರಾಗಬೇಕು ಎಂದು ಅವರು ಹೇಳಿದರು.
ಜನರು ದೃತಿಗೆಡದೆ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಿದರೆ ಕೋವಿಡ್ ಅನ್ನು ಹತೋಟಿಯಲ್ಲಿಡಬಹುದು. ಕೊರೊನಾ ಪಾಸಿಟಿವ್ ಬಂದರೆ ಯಾರೊಬ್ಬರೂ ಧೈರ್ಯಗೆಡಬೇಡಿ. ನೀವು ಆತ್ಮಸ್ಥೈರ್ಯದಿಂದ ಇದ್ದರೆ ಶೇ 50 ರಷ್ಟು ಕರೊನಾ ತನ್ನಿಂದ ತಾನೇ ನಿವಾರಣೆಯಾಗುತ್ತದೆ. ಪ್ರತಿಯೊಬ್ಬರೂ ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು.
ಇರುಳಿಗ ಸಮುದಾಯದ ಮುಖಂಡ ಎಸ್. ರಾಜು ಮಾತನಾಡಿ ಸಂಶೋಧಕ ಎಸ್. ರುದ್ರೇಶ್ವರ ಹಲವು ವರ್ಷಗಳಿಂದಲೂ ನಿರ್ಲಕ್ಷಿತ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ತಮ್ಮ ಮಗಳ ಜನ್ಮ ದಿನದ ಅಂಗವಾಗಿ ಇರುಳಿಗ ಸಮುದಾಯದ ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ ಮಾಸ್ಕ್ ಹಾಗೂ ಸೋಪ್ ವಿತರಣೆ ಮಾಡಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕೂಟಗಲ್ ಬಳಿ 30 ಕ್ಕೂ ಹೆಚ್ಚು ಇರುಳಿಗ ಕುಟುಂಬಗಳು ಈಗಲೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ಚುನಾಯಿತ ಪ್ರತಿನಿಧಿಗಳು ಚುನಾವಣೆ ಸಮಯದಲ್ಲಿ ಬಂದು ಭರವಸೆ ನೀಡುತ್ತಾರೆಯೆ ಹೊರೆತು ಇವರಿಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವುದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಸಹ ಇರುಳಿಗರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್, ನಿವೃತ್ತ ಪ್ರಾಂಶುಪಾಲರಾದ ಬಿ.ಎಲ್. ಸರೋಜಮ್ಮ, ಅಮೃತ ವಿಕಲಚೇತನ ಟ್ರಸ್ಟಿನ ಕಾರ್ಯದರ್ಶಿ ಟಿ. ರಮೇಶ್, ಇರುಳಿಗ ಸಮುದಾಯದ ಮುಖಂಡ ಡಾ.ಕೆ.ವಿ. ಕೃಷ್ಣಮೂರ್ತಿ ಇದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು