ನಗರದ ಚರ್ಚ್ ರಸ್ತೆಯಲ್ಲಿ ಎಂಎಸ್ಐಲ್ ಮದ್ಯಮಾರಾಟ ಮಳಿಗೆಗೆ ಸರ್ವೇ. ಸ್ಥಳೀಯರ ಆಕ್ರೋಶ.
ಎಂಎಸ್ಐಎಲ್ ಮದ್ಯ ಮಾರಾಟದ ಚಿಲ್ಲರೆ ಮಳಿಗೆ ತೆರೆಯಲು ಚರ್ಚ್ ರಸ್ತೆಯ ಕ್ರಿಶ್ಚಿಯನ್ ಸಮಾಧಿ ಮುಂಭಾಗದ ಮಳಿಗೆಯೊಂದರಲ್ಲಿ ಸರ್ಕಾರವು ಅನುಮತಿ ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾಲ್ಲೂಕು ಅಬಕಾರಿ ಅಧಿಕಾರಿಗಳು ಸೋಮವಾರ ಸಂಜೆಯ ವೇಳೆ ಸರ್ವೇಗೆ ಬಂದಾಗ ಸ್ಥಳೀಯರು ವಿರೋಧಿಸಿದ ಘಟನೆ ನಡೆದಿದೆ.
ಅಪ್ಪಗೆರೆ ಗ್ರಾಮದಲ್ಲಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜು ಇದೆ. ಕೂಗಳತೆ ದೂರದಲ್ಲಿ ತೋಟಗಾರಿಕೆ ಇಲಾಖೆ ಮತ್ತು ನಗರ ಪ್ರಾಧಿಕಾರದ ಕಛೇರಿಗಳಿವೆ. ಮಳಿಗೆಯ ಮುಂಭಾಗವೇ ಕ್ರಿಶ್ಚಿಯನ್ ಸಮುದಾಯದ ಸ್ಮಶಾನವಿದ್ದು, ಪರಿಶಿಷ್ಟ ಜಾತಿಯ ಗ್ರಾಮವಿದ್ದು, ಪ್ರತಿನಿತ್ಯವೂ ಸಹಸ್ರಾರು ಮಂದಿ ಓಡಾಡುತ್ತಿರುತ್ತಾರೆ ಎಂದು ಸ್ಥಳೀಯರು ವಿರೋಧಿಸಿದರು.
ನಗರದ ಎಂಟನೇ ವಾರ್ಡ್ ನ ನಿವಾಸಿಗಳು, ಸಿಎಸ್ಐ ಬೆಥನಿ ಚರ್ಚ್ ನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ವತಿಯಿಂದ ಸದಸ್ಯರಾದ ಬಿ ಕಿರಣ್ ಕುಮಾರ್ ರವರು, ಬೆಂಗಳೂರು ಅಬಕಾರಿ ಆಯುಕ್ತರು, ಚನ್ನಪಟ್ಟಣ ಅಬಕಾರಿ ನಿರೀಕ್ಷಕರು ಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದರು.
ಚನ್ನಪಟ್ಟಣ ನಗರದಲ್ಲಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಈಗಾಗಲೇ ಒಂದು ಎಂಎಸ್ಐಎಲ್ ಚಿಲ್ಲರೆ ಮದ್ಯ ಮಳಿಗೆ ಇದ್ದು, ಈ ಜಾಗದಲ್ಲಿ ಮತ್ತೊಂದು ಮಳಿಗೆ ನಿರ್ಮಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಾವು ಸರ್ವೇ ಮಾಡಿ, ವರದಿ ಸಲ್ಲಿಸಿತ್ತೇವೆ ಎಂದು ಚನ್ನಪಟ್ಟಣ ತಾಲ್ಲೂಕಿನ ಅಬಕಾರಿ ನಿರೀಕ್ಷಕರಾದ ಇಂದುಕುಮಾರ್ ತಿಳಿಸಿದರು.
ಅಬಕಾರಿ ಉಪ ನಿರೀಕ್ಷಕ ರಾಜೇಂದ್ರ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು