ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಸರಗಳ್ಳತನ. ಎಚ್ಚೆತ್ತುಕೊಳ್ಳಬೇಕಾಗಿದೆ ಪೋಲೀಸರು
ಮಾಂಗಲ್ಯ ಸರದ ಜೊತೆಗೆ ತನ್ನ ಪ್ರಾಣವನ್ನು ಕಳೆದುಕೊಂಡ ನಾಗವಾರ ಗ್ರಾಮದ ವಸಂತಮ್ಮ.
ನಗರ ಸೇರಿದಂತೆ ತಾಲೂಕಿನಾದ್ಯಂತ ಮಹಿಳೆಯರ ಮೈಮೇಲಿನ ಸರಗಳನ್ನು ಕಿತ್ತು ಪರಾರಿಯಾಗುವುದಲ್ಲದೆ, ಅವರ ಸಾವಿಗೂ ಕಾರಣವಾಗುತ್ತಿರುವ ತಂಡ ಜಿಲ್ಲೆಯಾದ್ಯಂತ ಸಕ್ರಿಯವಾಗಿದ್ದು, ಪೋಲೀಸರು ಎಚ್ಚೆತ್ತುಕೊಂಡು ಚೈನ್ ಸ್ನ್ಯಾಕರ್ ತಂಡವನ್ನು ಬಂಧಿಸಿ ಬಗ್ಗುಬಡಿಯಬೇಕಾಗಿದೆ.
ಕೇವಲ ಎರಡು ದಿನಗಳಲ್ಲಿ ಸುಮಾರು ನಾಲ್ಕಾರು ಪ್ರಕರಣಗಳು ನಡೆದು, ಸಂಬಂಧಿಸಿದ ಪೋಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದರೆ, ಕೆಲವರು ದೂರು ನೀಡಿಲ್ಲ. ತಾಲ್ಲೂಕಿನ ನಾಗವಾರ ಗ್ರಾಮದ ಮಹಿಳೆಯೋರ್ವರು ದುಷ್ಕರ್ಮಿಗಳ ಪಾಶಕ್ಕೆ ಪ್ರಾಣ ತೆತ್ತಿರುವುದು ದುರಂತ.
ಅರ್ಧ ಸರ ಕಳೆದುಕೊಂಡ ಬೇವೂರು ಗ್ರಾಮದ ರತ್ನಮ್ಮ
ನಾಗವಾರ ಗ್ರಾಮದ ವಸಂತ ಎಂಬುವವರು ಕುಣಿಗಲ್ ಗೆ ತೆರಳುವ ವೇಳೆಯಲ್ಲಿ ಅವರ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದ ಈರ್ವರು ಹಿಂದಿನಿಂದ ಬಂದು ಏಕಾಏಕಿ ಎಳೆದಿದ್ದಾರೆ. ಇದರ ಅರಿವಿಲ್ಲದ ವಸಂತ ರವರು ದಢಾರನೇ ಚಲಿಸುತ್ತಿದ್ದ ವಾಹನದಿಂದ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿದ್ದು, ಕುಣಿಗಲ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೇವೂರು ಗ್ರಾಮದ 39 ವರ್ಷದ ರತ್ನಮ್ಮ ಎಂಬುವವರು ಭೈರಾಪಟ್ಟಣ ಗ್ರಾಮದಲ್ಲಿ ಜರುಗಿದ ತಮ್ಮ ಸಂಬಂಧಿಕರ ಮದುವೆ ಮುಗಿಸಿಕೊಂಡು ಹಿಂದಿರುಗಿ ಬರುವಾಗ ಕನ್ನಸಂದ್ರ ಗ್ರಾಮದ ಬಳಿ ಆಕೆಯ ಮಾಂಗಲ್ಯ ಸರವನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಆಕೆ ಸರವನ್ನು ಬಿಗಿಯಾಗಿ ಹಿಡಿದುಕೊಂಡಿದ್ದರಿಂದ ಅರ್ಧ ಸರ ಮಾತ್ರ ಕಳ್ಳರ ಪಾಲಾಗಿದೆ. 30 ಗ್ರಾಂ ತೂಕದ ಸರದಲ್ಲಿ 15 ಗ್ರಾಂ ಮಹಿಳೆಯ ಬಳಿಯೇ ಉಳಿದಿದ್ದು, ಎಂ ಕೆ ದೊಡ್ಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಾಮನಗರ ತಾಲ್ಲೂಕಿನ ಅಕ್ಕೂರು ಗ್ರಾಮದ ವೆಂಕಟಲಕ್ಷ್ಮಮ್ಮ ಎಂಬ ಮಹಿಳೆ ತಮ್ಮ ತೋಟದಲ್ಲಿ ಕೀರೆ ಸೊಪ್ಪು ಕೀಳಲು ಹೋಗುತ್ತಿದ್ದಾಗ, ಬೈಕ್ ನಲ್ಲಿ ಬಂದ ಆಗಂತುಕರು ವಿಳಾಸ ಕೇಳುವ ನೆಪದಲ್ಲಿ ಮಾತಿಗೆಳೆದು, ಸರ ಕಿತ್ತೊಯ್ದಿದ್ದಾರೆ. ಎರಡು ಗುಂಡು, ಎರಡು ದೇವರ ಕಾಸು ಸೇರಿದಂತೆ 43 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತೊಯ್ದಿದ್ದಾರೆಂದು ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಚನ್ನಪಟ್ಟಣ ತಾಲ್ಲೂಕಿನ ಕೆಲಗೆರೆ ಗ್ರಾಮದಲ್ಲೂ ಸಹ ಒಂದು ಪ್ರಕರಣ ನಡೆದಿದ್ದು, ಅವರು ಪ್ರಕರಣ ದಾಖಲಿಸಿಲ್ಲಾ ಎಂಬ ಮಾಹಿತಿ ಇದೆ. ಇದರ ಜೊತೆಗೆ ಸ್ಥಳೀಯ ಪತ್ರಕರ್ತರೊಬ್ಬರು ಕಣ್ವ ಬಳಿ ಒಬ್ಬರೇ ತೆರಳುತ್ತಿದ್ದಾಗ, ಒಂದೇ ಡಿಯೋ ಬೈಕ್ ನಲ್ಲಿ ನಾಲ್ಕು ಮಂದಿ ಬೆನ್ನಟ್ಟಿದ್ದು, ಮುಂದಿನ ಗ್ರಾಮ ಸಿಗುವವರೆಗೂ ಪ್ರಾಣ ಭಯದಿಂದ ಬೈಕ್ ಓಡಿಸಿದ್ದಾಗಿ ಆತಂಕ ವ್ಯಕ್ತಪಡಿಸಿದ್ದಾರೆ.
ವಿಶೇಷವೆಂದರೆ ಈ ಎಲ್ಲಾ ಪ್ರಕರಣಗಳು ಸಹ ಸೆಮಿ ಲಾಕ್ಡೌನ್ ಸಂದರ್ಭದಲ್ಲೇ ನಡೆದಿವೆ.
ಪೋಲೀಸರು ಈಗಲೇ ಎಚ್ಚೆತ್ತುಕೊಂಡು ಈ ಜಾಲವನ್ನು ಭೇದಿಸದಿದ್ದರೆ, ಚಿನ್ನದ ಜೊತೆಗೆ ಹಲವಾರು ಮಹಿಳೆಯರು ಚಿನ್ನದಂಥ ತಮ್ಮ ಪ್ರಾಣವನ್ನು ಕಳೆದುಕೊಳ್ಳಬೇಕಾದ ಸ್ಥಿತಿ ಬಂದೊದಗಲಿದೆ.
*ನಾವು ಈಗಾಗಲೇ ಬೆಂಗಳೂರು ಮತ್ತು ತುಮಕೂರು ಜಿಲ್ಲೆಯ ಪೋಲೀಸರೊಡಗೂಡಿ ತಂಡ ರಚನೆ ಮಾಡಲು ಮಾತುಕತೆ ನಡೆಸಿದ್ದೇವೆ. ಬೆಂಗಳೂರು ಕಡೆಯಿಂದ ಬಂದು ಸರಗಳ್ಳತನ ಮಾಡಿರುವ ಶಂಕೆ ಇದೆ. ರಾಬರಿಯಲ್ಲಿ ಜೈಲು ಸೇರಿದವರಿಂದಲೇ ಈ ಕೃತ್ಯ ನಡೆದಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಶೀಘ್ರವಾಗಿ ಇದಕ್ಕೆ ಅಂತ್ಯವಾಡುತ್ತೇವೆ.*
*ಎಸ್ ಗಿರೀಶ್*
*ರಾಮನಗರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು