ತಿಟ್ಟಮಾರನಹಳ್ಳಿ ಬಳಿ ಅವೈಜ್ಞಾನಿಕ ಅಂಡರ್ ಪಾಸ್ ವಿರೋಧಿಸಿ ಸಾಂಕೇತಿಕ ಮೌನ ಪ್ರತಿಭಟನೆ
ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಹಾದು ಹೋಗುತ್ತಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೂತನ ಬೈಪಾಸ್ ರಸ್ತೆಗೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಕುಣಿಗಲ್ ಹೆದ್ದಾರಿಗೆ ಸೇರುವ ರಾಜ್ಯ ಹೆದ್ದಾರಿ ಕೂಡು ರಸ್ತೆಗೆ ಅವೈಜ್ಞಾನಿಕವಾಗಿ ಅಂಡರ್ ಪಾಸ್ ನಿರ್ಮಿಸಲಾಗಿದೆ ಎಂದು ಆರೋಪಿಸಿ, ತಿಟ್ಟಮಾರನಹಳ್ಳಿ ಗ್ರಾಮಸ್ಥರು ಮತ್ತು ಬೇವೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬುಧವಾರ ತಿಟ್ಟಮಾರನಹಳ್ಳಿ ರಾಮಮ್ಮನ ಕೆರೆ ಏರಿ ಬಳಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ನಡೆಸಿದರು.
ಈ ಅವೈಜ್ಞಾನಿಕ ಅಂಡರ್ ಪಾಸ್ ವಿರೋಧಿಸಿ ಹಲವರು ಈ ರಸ್ತೆಬಂದ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದರು. ಈ ವಿಚಾರ ಅರಿತ ಪೊಲೀಸರು, ಪ್ರತಿಭಟನೆ ಆರಂಭವಾಗುವ ಮೊದಲೇ ಪ್ರತಿಭಟನಾಕಾರರನ್ನು ಕೋವಿಡ್ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವಂತೆ ಹಾಗೂ ಈ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸುವ ಭರವಸೆ ನೀಡಿ ರಸ್ತೆಬಂದ್ ಪ್ರತಿಭಟನೆ ನಡೆಯದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.
ಪ್ರತಿಭಟನೆ ಆರಂಭಕ್ಕೂ ಮುಂಚೆ ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ಕೆ.ಎನ್.ರಮೇಶ್ ಗ್ರಾಮಸ್ಥರ ಹಾಗೂ ಈ ಭಾಗದ ವಾಹನ ಸವಾರರ ಆಹವಾಲು ಆಲಿಸಿದರು. ರಸ್ತೆಬಂದ್ ಮಾಡುವ ಉದ್ದೇಶ ನಮಗೂ ಇಲ್ಲ, ಸಂಬಂಧಪಟ್ಟ ಎನ್ಎಚ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ ಮಾಡುವ ಭರವಸೆ ನೀಡಬೇಕು. ಸಾರ್ವಜನಿಕವಾದ ಈ ಸಮಸ್ಯೆ ಬಗೆಹರಿಸಿಕೊಟ್ಟರೆ, ನಾವು ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದು ತಿಳಿಸಿದರು.. ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಡಿವೈಎಸ್ಪಿ ಸ್ಥಳಕ್ಕೆ ಆಗಮಿಸಿ, ಸಾರ್ವಜನಿಕರ ಜೊತೆ ಚರ್ಚಿಸಿ ಎಂದು ಸೂಚಿಸಿದರು. ಸಾರ್ವಜನಿಕರು ಪ್ರತಿಭಟನೆ ಮಾಡದಂತೆ ನಾವು ನೋಡಿಕೊಂಡಿದ್ದೇವೆ. ಜನತೆಗೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕಾದ್ದು ನಿಮ್ಮ ಜವಾಬ್ದಾರಿ ಎಂದು ಸೂಚಿಸಿದರು.
*ಸಾಂಕೇತಿಕ ಮೌನ ಪ್ರತಿಭಟನೆ:*
ಪೊಲೀಸರ ಮನವೊಲಿಕೆಯ ಹಿನ್ನೆಲೆಯಲ್ಲಿ ರಸ್ತೆ ಬಂದ್ ಹೋರಾಟವನ್ನು ಕೈಬಿಟ್ಟ ಪ್ರತಿಭಟನಾಕಾರರು, ನೂತನ ಬೈಪಾಸ್ ರಸ್ತೆಯಲ್ಲಿ ಮೌನವಾಗಿ ನಿಂತು ಸಾಂಕೇತಿಕವಾಗಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣವನ್ನು ವಿರೋಧಿಸಿದರು. ಈ ವಿಚಾರ ತಿಳಿದ ತಹಶಿಲ್ದಾರ್ ಎಲ್. ನಾಗೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ನಗರದಿಂದ ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಈ ಭಾಗದಲ್ಲಿ ಅವೈಜ್ಞಾನಿಕವಾದ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಕುಣಿಗಲ್ ರಾಜ್ಯ ಹೆದ್ದಾರಿ ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಈ ಪ್ರಮಾದ ನಡೆದಿದೆ. ಈ ಹಿಂದೆ ಈಗಿರುವ ರಸ್ತೆಯಲ್ಲಿಯೇ ಅಂಡರ್ ಪಾಸ್ ನಿರ್ಮಾಣ ಮಾಡುವ ಭರವಸೆ ನೀಡಲಾಗಿತ್ತು. ಈಗ ನಿರ್ಮಿಸಿರುವ ಅಂಡರ್ ಪಾಸ್ ನಿರ್ಜನ ಪ್ರದೇಶದಲಿದ್ದು, ಮುಂದಿನ ದಿನಗಳಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಲಿದೆ. ಈ ಕಾರಣಕ್ಕಾಗಿ ನಮಗೆ ಈ ರಸ್ತೆ ಬಳಿಯೇ ಅಂಡರ್ಪಾಸ್ ನಿರ್ಮಾಣವಾಗಬೇಕು. ಅಲ್ಲಿಯವರೆಗೂ ಇಲ್ಲಿ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಈ ರಸ್ತೆ ಕಾಮಗಾರಿ ತಡೆಯುವ ಯಾವ ಉದ್ದೇಶ ನಮಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಆಗುವ ಅನಾನುಕೂಲ ತಪ್ಪಿಸಲು ಈ ಹೋರಾಟ ಎಂದು ಮನವರಿಕೆ ಮಾಡಿಕೊಟ್ಟರು.
*ಅಂಡರ್ ಪಾಸ್ ಮಾಡಿಕೊಡುವ ಭರವಸೆ:*
ಸ್ಥಳಕ್ಕೆ ಆಗಮಿಸಿದ ಎನ್ಎಚ್ ಅಧಿಕಾರಿಗಳಾದ ನಿಶಾಂಕ್ ಮತ್ತು ವರುಣ್ ಎಂಬುವವರು ಈ ಸಂಬಂಧ ತಹಶಿಲ್ದಾರ್ ಮತ್ತು ಪ್ರತಿಭಟನಾಕಾರರ ಜೊತೆ ಚರ್ಚೆ ನಡೆಸಿದರು. ಈ ಸ್ಥಳದಲ್ಲಿ ಅಂಡರ್ ಪಾಸ್ ನಿರ್ಮಿಸಲು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈ ಜಾಗದಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ 5 ಕೋಟಿ ವೆಚ್ಚದ ಕ್ರೀಯಾಯೋಜನೆ ಕೇಂದ್ರ ಕಚೇರಿ ತಲುಪಿದೆ. ಅಲ್ಲಿಂದ ಅನುಮೋದನೆಯಾದ ಕೂಡಲೇ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೆ ಒಪ್ಪಿದ ಪ್ರತಿಭಟನಾಕಾರರು ಅಲ್ಲಿಯವರೆಗೆ ಸಂಬಂಧಪಟ್ಟ ಜಾಗದಲ್ಲಿ ಯಾವುದೇ ಕಾಮಗಾರಿ ನಡೆಸಬಾರದು. ಅದು ಎಷ್ಟು ವರ್ಷವಾದರೂ ಸರಿಯೇ ನಾವು ಕಾಯುತ್ತೇವೆ. ಅಲ್ಲಿಯವರೆಗೆ ಈ ಸ್ಥಳದಲ್ಲಿ ಪ್ರತಿಭಟನೆ ನಡೆಸಕೂಡದು ಎಂದು ಆಗ್ರಹಿಸಿದರು. ಇದಕ್ಕೆ ಅಧಿಕಾರಿಗಳು ಒಪ್ಪಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಗ್ರಾಮಾಂತರ ಠಾಣಾ ಪಿಎಸ್ಐ ಎಚ್.ಎಂ. ಶಿವಕುಮಾರ್ ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್ ಏರ್ಪಡಸಿದ್ದರು.
ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿನಿಲಯದ ಅಧ್ಯಕ್ಷ ಟಿ.ಕೆ,ಯೋಗೇಶ್, ಮಾಜಿ ತಾಪಂ ಅಧ್ಯಕ್ಷ ಬಿ.ನಾಗೇಶ್, ಒಸಾವಿ ನಿಲಯದ ನಿರ್ದೇಶಕ ಟಿ.ಪಿ.ಹನುಮಂತಯ್ಯ, ವಕೀಲರ ಸಂಘದ ಅಧ್ಯಕ್ಷ ಟಿ.ವಿ,ಗಿರೀಶ್, ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷ ಮೊಗೇನಹಳ್ಳಿ ಎಂ ರಾಮು, ಕರವೇ ತಾಲೂಕು ಅಧ್ಯಕ್ಷ ಹೊ.ಪು. ಸಾಗರ್, ನಗರ ಕಸಾಪ ಅಧ್ಯಕ್ಷ ಅಭಿಲಾಷ್ ತಿಟ್ಟಮಾರನಹಳ್ಳಿ, ಜಿಲ್ಲಾ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ರಮೇಶ್, ಎಂಪಿಸಿಎಸ್ ಅಧ್ಯಕ್ಷ ಪುಟ್ಟಸ್ವಾಮಿ, ಮುಖಂಡರಾದ ರಾಜಣ್ಣ, ಟಿ.ಪಿ.ರಘುನಂದನ್, ತಿಟ್ಟಮಾರನಹಳ್ಳಿ ಲೋಕೇಶ್, ಟಿ.ಕೆ.ಮುರುಳಿ, ವೆಂಕಟೇಶ್, ಉಮೇಶ್, ಪುಟ್ಟಮಾಯಿ, ಪುಟ್ಟಾಣಿಗೌಡ, ಸುಳಿರಾಜಣ್ಣ, ಶಿವಕುಮಾರ್, ಆಟೋಕೃಷ್ಣಪ್ಪ, ಟಿ.ಆರ್. ಅನಿಲ್, ಮಹದೇವ, ಹರೀಶ್, ಶ್ರೀನಿವಾಸ್, ರಂಗಸ್ವಾಮಿ, ಪದ್ಮಣ್ಣ, ಕಬ್ಬಡಿಕುಮಾರ್, ಮೂರ್ತಿ, ಶಿವರಾಮ, ಅವೀಶ್, ಗುಂಡ, ಮಂಜೇಶ್, ಎಸ್ಕೆಎಸ್ ಕುಮಾರ್, ದಿಲೀಪ್, ಮಂಜೇಶ್, ಬಾಬು, ವೆಂಕಟೇಶ್, ನಾಗೇಶ್, ಯಧುನಂದನ್, ಮದು, ಬಾಲಾಜಿ, ಸಚಿನ್, ಅನಿಲ್, ಶೇಖರ್, ಸುನೀಲ್ಕುಮಾರ್, ಆಟೋಮಂಜು, ಪುಟ್ಟಸ್ವಾಮಿ, ಮಲ್ಲಿಕಾ, ಸ್ವಾಮಿ ನಾಗವಾರ, ಚಿಕ್ಕನದೊಡ್ಡಿ ಸುರೇಶ್, ಗ್ರಾಪಂ ಮಾಜಿ ಅಧ್ಯಕ್ಷರಾದ ರಮೇಶ್, ಅಜಿತ್,ಸದಸ್ಯರಾದ ಕೆಂಗಲಮೂರ್ತಿ, ಕೇಶವ ಸೇರಿದಂತೆ ಹಲವಾರು ಮಂದಿ ಈ ವೇಳೆ ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು