ಕನಕಪುರ ಉಪನೋಂದಣಾಧಿಕಾರಿ ಕಛೇರಿ ಮುಂದೆ ಜನಸಾಗರ. ನಗರಸಭೆಯಿಂದ ಎಚ್ಚರಿಕೆ
ಕನಕಪುರ :ನಗರದ ಉಪನೋಂದಣಾಧಿಕಾರಿ ಕಚೇರಿಯ ಕರ್ತವ್ಯ ಸಮಯದಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಸಾರಾಸಗಟಾಗಿ ಉಲ್ಲಂಘಿಸಿ ಕಚೇರಿಯೊಳಗೆ ಜನರ ಗುಂಪನ್ನು ಸೇರಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದ ವೇಳೆ ನಗರಸಭಾ ಅಧಿಕಾರಿಗಳು ದಾಳಿ ನಡೆಸಿ ಗುಂಪನ್ನು ಚದುರಿಸಿ ಅಧಿಕಾರಿಗಳಿಗೆ ಕೊರೋನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಸಿದ ಘಟನೆ ಕನಕಪುರದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಕರೋನಾ ಎರಡನೆ ಅಲೆಯಲ್ಲಿ ಇದೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್ ರಿಜಿಸ್ಟರ್ ಅಧಿಕಾರಿಗೆ ಸೋಂಕು ತಗಲಿ ಸಾವನ್ನಪ್ಪಿರುವ ಘಟನೆ ಇನ್ನೂ ಮಾಸಿಲ್ಲ. ಆದರೂ ಎಚ್ಚೆತ್ತುಕೊಳ್ಳದ ಇಲ್ಲಿನ ಕಚೇರಿ ಅಧಿಕಾರಿಗಳು ಕೊರೊನಾ ಲಾಕ್ ಡೌನ್ ಸಡಿಲಗೊಂಡ ಬೆರಳೆಣಿಕೆಯಷ್ಟು ದಿನದಲ್ಲೆ ಕಚೇರಿಯ ಒಳಗೆ ಮತ್ತು ಹೊರಗೆ ಜನಸಾಂದ್ರತೆಯನ್ನು ಕಟ್ಟಿಕೊಂಡು ಕೊರೋನಾ ಸೋಂಕು ಹರಡಲು ಅವಕಾಶ ನೀಡಿದ್ದರು.
ಈ ಸುದ್ದಿ ತಿಳಿಯುತ್ತಿದ್ದಂತೆ ಕಚೇರಿಗೆ ಧಾವಿಸಿದ ನಗರ ಸಭಾ ಪ್ರಭಾರ ಪೌರಾಯುಕ್ತ ಎನ್ .ಶಿವಣ್ಣ ಸಹಾಯಕ ಕಾರ್ಯಪಾಲಕ ಪರಿಸರ ಎಂಜನಿಯರ್ ಪಾರ್ವತಿ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಿ ಕಚೇರಿ ಮುಂದೆ ಹಾಗೂ ಒಳಭಾಗದಲ್ಲಿ ಸೇರಿದ್ದ ಜನಜಾತ್ರೆಯನ್ನು ಚದುರಿಸಿ ಕರ್ತವ್ಯದಲ್ಲಿದ್ದ ಅಧಿಕಾರಿ ಸೇರಿದಂತೆ ಸಿಬ್ಬಂದಿಗಳಿಗೆ ಮಾರ್ಗಸೂಚಿ ಪಾಲನೆ ಮಾಡದಿದ್ದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದರು.
ಕಚೇರಿಗೆ ಬರುವವರಿಗೆ ಕಡ್ಡಾಯವಾಗಿ ಸ್ಯಾನಿಟೈಸರ್ ನೀಡಿ ಮಾಸ್ಕ್ ಧರಿಸಿ ಕಚೇರಿ ಪ್ರವೇಶಿಸಲು ಅವಕಾಶ ಕೊಡಬೇಕೆಂದು ಸೂಚಿಸಿ ಮುಂದೆ ಈ ರೀತಿ ಅನಾಹುತಕ್ಕೆ ದಾರಿ ಮಾಡಿಕೊಡಬಾರದು ಎಂದು ಎಚ್ಚರಿಸಿದರು.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಟೌನ್ ಸಬ್ ಇನ್ಸ್ ಪೆಕ್ಟರ್ ಎಸ್. ಉಷಾನಂದಿನಿ ನೋಂದಣಾಧಿಕಾರಿ ಕಚೇರಿ ಮುಂದೆ ಗುಂಪಾಗಿ ಸೇರಿದ್ದ ಜನರನ್ನು ಚದುರಿಸಿ ಗುಂಪು ಸೇರದಂತೆ ಎಚ್ಚರಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು