Tel: 7676775624 | Mail: info@yellowandred.in

Language: EN KAN

    Follow us :


ಜನಸಾಮಾನ್ಯರಿಗಾಗಿ ರೋಟರಿ ಕ್ಲಬ್ ಕಾರ್ಯ ನಿರ್ವಹಿಸುತ್ತದೆ. ಎಂ ಕೆ ನಿಂಗಪ್ಪ

Posted date: 01 Aug, 2021

Powered by:     Yellow and Red

ಜನಸಾಮಾನ್ಯರಿಗಾಗಿ ರೋಟರಿ ಕ್ಲಬ್ ಕಾರ್ಯ ನಿರ್ವಹಿಸುತ್ತದೆ. ಎಂ ಕೆ ನಿಂಗಪ್ಪ

ರೋಟರಿ ಕ್ಲಬ್ ಎಂದಾಕ್ಷಣ ಅದು ಕೇವಲ ಪದಾಧಿಕಾರಿಗಳ ಆಸ್ತಿ ಎಂಬುದು ಜನರ ಭಾವನೆಯಾಗಿದೆ. ಕ್ಲಬ್ ಇರುವುದು ಜನಸಾಮಾನ್ಯರ ನೆರವಿಗಾಗಿ ಎಂಬುದನ್ನು ಮುಂದಿನ ದಿನಗಳಲ್ಲಿ ನಿರೂಪಿಸುತ್ತೇವೆ ಎಂದು ಚನ್ನಪಟ್ಟಣ ತಾಲ್ಲೂಕಿನ ರೋಟರಿ ಕ್ಲಬ್ ನೂತನ ಅಧ್ಯಕ್ಷ ವಕೀಲ ಎಂ ಕೆ ನಿಂಗಪ್ಪ ತಿಳಿಸಿದರು.

ಅವರು ಶನಿವಾರ ಇಳಿಹೊತ್ತಿನಲ್ಲಿ ನಗರದ ರೋಟರಿ ಕ್ಲಬ್ ನ ಸಭಾಂಗಣದಲ್ಲಿ ಅಧಿಕಾರ ಸ್ವೀಕಾರ ಮಾಡಿ ಮಾತನಾಡಿದರು.


ಕೋವಿಡ್-19 ಎಂಬ ಸಾಂಕ್ರಾಮಿಕ ಮಹಾಮಾರಿ ಜಗತ್ತನ್ನೇ ತಲ್ಲಣಗೊಳಿಸುತ್ತಿದೆ. ಇಂತಹ ದುಸ್ತರ ಸಮಯದಲ್ಲಿ ನಮ್ಮ ರೋಟರಿ ಸಂಸ್ಥೆಯು ಜನರ ಜೊತೆ ಇರುತ್ತದೆ. ಕೊರೊನಾ ಬಗ್ಗೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿ, ಅರಿವು ಮೂಡಿಸಲು ನಮ್ಮ ತಂಡ ಸಜ್ಜಾಗುತ್ತಿದೆ. ಈಗಾಗಲೇ ಎರಡು ಹಂತಗಳನ್ನು ಮುಗಿಸಿ, ಮೂರನೇ ಹಂತ ಅದರಲ್ಲೂ ಮಕ್ಕಳಿಗೆ ಹರಡುತ್ತದೆ ಎಂಬ ಭೀತಿಯನ್ನು ತಜ್ಞರು ತಿಳಿಸಿದ್ದು, ನಾವು ಸಹ ಸರ್ಕಾರದ ನೀತಿನಿಯಮಗಳನ್ನು ಪಾಲಿಸಿ, ಜನರ ನೆರವಿಗೆ ಸದಾ ಸಿದ್ದರಿರುತ್ತೇವೆ ಎಂದರು.


ಮುಂದಿನ ದಿನಗಳಲ್ಲಿ ಪರಿಸರದಿಂದ ನಾವು, ಪರಿಸರಕ್ಕಾಗಿ ನಾವು ಎಂಬ ಧ್ಯೇಯವನ್ನಿಟ್ಟುಕೊಂಡು, ಗಿಡಗಳನ್ನು ನೆಟ್ಟು ಪೋಷಿಸುವುದು. ಪರಿಸರ ಮತ್ತು ಓಝೋನ್ ಪದರ ಹಾಗೂ ಸವಕಳಿ ಬಗ್ಗೆ ಮಾಹಿತಿ ನೀಡುವುದು ವಿದ್ಯಾರ್ಥಿಗಳನ್ನು ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕ್ವಿಜ್ ನಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಭರವಸೆಯ ಮಾತನ್ಬಾಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪೋಲಿಸ್ ಉಪವಿಭಾಗಾಧಿಕಾರಿ ಕೆ ಎನ್ ರಮೇಶ್ ಅವರು ಮಾತಾನಾಡಿ, ಪರಿಸರದ ಅಸಮತೋಲನಕ್ಕೆ ಮನುಜರ ಅತಿಯಾಸೆಯೇ ಕಾರಣವಾಗಿದೆ. ಮುಂದಿನ ದಿನಗಳಲ್ಲಾದರೂ ನಾವೆಲ್ಲರೂ ಒಗ್ಗೂಡಿ ಪರಿಸರವನ್ನು ಉಳಿಸಿಬೆಳೆಸಬೇಕಾಗಿದೆ. ಮುಂದಿನ ದಿನಗಳಲ್ಲಿ ನಾವು ನಮ್ಮ ಪೀಳಿಗೆಗೆ ಕೊಡುವ ಸೌಭಾಗ್ಯ ಗವೇ ಪರಿಸರವಾಗಿದೆ ಎಂದರು.

ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ನ ಜವಾಬ್ದಾರಿ ಹೆಚ್ಚಿದೆ ಎಂದರು.


ಇಡೀ ದೇಶದಲ್ಲಿ ರೋಟರಿ ಸಂಸ್ಥೆಯು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ರೋಟರಿ ಸಂಸ್ಥೆಯು ಕೇವಲ ನಗರಕ್ಕೆ ಸೀಮಿತವಾಗದೆ ಗ್ರಾಮೀಣ ಭಾಗದ ಜನ ಸಾಮಾನ್ಯರಿಗೂ ತಮ್ಮ ಸೇವೆಯನ್ನು ನೀಡಬೇಕು. ಅಶಕ್ತರು, ಬಡವರನ್ನು ಗುರುತಿಸಿ ಆರ್ಥಿಕವಾಗಿ ಸಬಲರನ್ನಾಗಿಸಲು ಶ್ರಮಿಸಬೇಕು. ಎಲ್ಲರೂ ಒಗ್ಗೂಡಿ ಚನ್ನಪಟ್ಟಣ ನಗರವನ್ನು ಚಂದದ ನಗರವನ್ನಾಗಿ ರೂಪಿಸಲು ಪಣ ತೊಡಬೇಕು ಎಂದು ತಿಳಿಸಿದರು.


ರೋಟರಿ ಸಂಸ್ಥೆ ವಲಯದ ರಾಜ್ಯಪಾಲ ಹೊನ್ನೇಗೌಡ ಮಾತನಾಡಿ, ಅಧ್ಯಕ್ಷರು ಸೇರಿದಂತೆ ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಅರುಹಿದರು.

ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಹೇಮುಕುಮಾರ್ ರವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ರೋಟರಿ ಸಹ ರಾಜ್ಯಪಾಲ ಪ್ರಶಾಂತ್, ಕಾರ್ಯದರ್ಶಿ ಗಣೇಶ್ ಎನ್, ವಿನುತಾ ನಿಂಗಪ್ಪ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑