ಗೌರಿ-ಗಣೇಶ ಹಬ್ಬದ ಪೂಜಾ ಸಾಮಗ್ರಿ ಮತ್ತು ಗಣೇಶನ ಬುಕ್ಕಿಂಗ್ ಗೆ ಮುಗಿಬಿದ್ದ ಜನತೆ
ಚನ್ನಪಟ್ಟಣ.ಸೆ.೦೮: ನಾಳೆ ಸ್ವರ್ಣಗೌರಿ ವ್ರತ ಮತ್ತು ಶುಕ್ರವಾರ ಗಣೇಶ ಚತುರ್ಥಿ ಹಬ್ಬಗಳ ಹಿನ್ನೆಲೆಯಲ್ಲಿ ನಗರದಾದ್ಯಂತ ಭಕ್ತಾಧಿಗಳು ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಮುಗಿಬಿದ್ದರೆ, ಯುವಕರು ಗೌರಿ ಗಣೇಶ ನನ್ನು ಕೊಳ್ಳಲು ಪೇಟೆ ಬೀದಿ ಸುತ್ತುತ್ತಿರುವುದು ಇಂದಿನ ವಿಶೇಷವಾಗಿದೆ.
ಕಳೆದ ಎರಡು ವರ್ಷಗಳಿಂದ ಕೋವಿಡ್-19 ಅತಿ ಹೆಚ್ಚಾಗಿ ಕಾಡಿದ್ದರಿಂದ ಕಳೆದ ವರ್ಷ ಸರ್ಕಾರವು ಸಂಪೂರ್ಣ ವಾಗಿ ಗಣೇಶ ಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಲು ನಿಷೇಧ ಹೇರಿತ್ತು. ಈ ಬಾರಿಯೂ ಸಹ ಸರ್ಕಾರವು ಅದೇ ಧೋರಣೆಯನ್ನು ಅನುಸರಿಸುವ ಸಾಧ್ಯತೆ ಇತ್ತು. ಆದರೂ ಹಿಂದೂ ಪರ ಹಲವು ಸಂಘಟನೆ ಗಳು ಸಾಮಾಜಿಕ ಜಾಲ ತಾಣ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುವ ಮೂಲಕ ಅನ್ಯ ಧರ್ಮಕ್ಕಿಲ್ಲದ ನಿಷೇಧ, ನಮಗೆ ಮಾತ್ರ ಏಕೆ ಎಂಬುದನ್ನು ಅರಿವಿಗೆ ತಂದಿದ್ದರು. ಇದರ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಗಳು ತಜ್ಞರ ಸಭೆ ಕರೆದು, ಈ ವರ್ಷ ಕೆಲವು ಮುಂಜಾಗ್ರತ ಕ್ರಮ ಗಳೊಂದಿಗೆ ಗಣೇಶ ಹಬ್ಬವನ್ನು ಆಚರಿಸಲು ಅನುವು ಮಾಡಿಕೊಟ್ಟಿದೆ.
ಪ್ರಸ್ತುತ ಹೂವಿನ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದ್ದು, ನಗರದ ಬಹುತೇಕ ರಸ್ತೆ, ಜನಸಂದಣಿ ಸ್ಥಳಗಳಲ್ಲಿ ಹೂವು, ಹಣ್ಣಿನ ಅಂಗಡಿಗಳು ತಲೆಯೆತ್ತಿವೆ. ನಗರದ ಅಂಚೆ ಕಛೇರಿ ರಸ್ತೆ, ಎಂ.ಜಿ ರಸ್ತೆ, ಜೆ.ಸಿ ರಸ್ತೆ, ಡಿ.ಟಿ ರಾಮು ವೃತ್ತ ಮತ್ತು ಪೇಟೆ ಬೀದಿಯಾದ್ಯಂತ ಸಾರ್ವಜನಿಕರು ಹೂವು, ಹಣ್ಣು ಮತ್ತು ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಮುಗಿಬಿದ್ದಿರುವುದು ಕಂಡು ಬಂತು.
ಸರ್ಕಾರ ಅದೆಷ್ಟೇ ಕೊರೊನಾ ನಿಯಮಗಳನ್ನು ಪಾಲಿಸಲು ಹೇಳಿದ್ದರೂ ಸಹ ಜನ ಸಾಮಾಜಿಕ ಅಂತರವನ್ನು ಮರೆಯುತ್ತಿದ್ದಾರೆ. ಹಬ್ಬ ಆಚರಿಸುವ ಜೊತೆಗೆ ಕೊರೊನಾವನ್ನು ಹೆಗಲಿಗೇರಿಸಿ ಕೊಂಡು ಹೋಗಲು ನಿರ್ಧರಿಸಿದಂತೆ ವರ್ತಿಸುತ್ತಿದ್ದಾರೆ.
ಕಳೆದ ಎರಡು ವರ್ಷ ಹೊರತುಪಡಿಸಿ, ಕೆಲವು ವರ್ಷಗಳು ಪ್ರತಿ ಗ್ರಾಮಕ್ಕೂ ಜೆಡಿಎಸ್ ಘಟಕದ ತಾಲ್ಲೂಕು ಅಧ್ಯಕ್ಷ ಜಯಮುತ್ತು ಅವರು ಉಚಿತವಾಗಿ ಗೌರಿ ಗಣೇಶ ಮೂರ್ತಿಗಳನ್ನು ನೀಡುತ್ತಾ ಬಂದಿದ್ದರು. ಈ ವರ್ಷ ಸಾರ್ವಜನಿಕರೇ ಮೂರ್ತಿ ಗಳನ್ನು ಕೊಂಡುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ನಗರದ ಗರಡುಗಂಭ ಬೀದಿಯಲ್ಲಿ ಎರಡು ಮೂರು ಕಡೆ ಮಾತ್ರ ಗೌರಿ ಗಣೇಶ ಮೂರ್ತಿಗಳನ್ನು ಮಾರಾಟಕ್ಕಿಟ್ಟಿದ್ದು, ಈ ಮೊದಲಿನಂತೆ ನಗರದಾದ್ಯಂತ ಎಲ್ಲೂ ಮೂರ್ತಿಗಳು ಕಂಡು ಬರುತ್ತಿಲ್ಲ.
ಸದ್ಯ ಪೊಲೀಸರು ಅವಕಾಶ ಮಾಡಿಕೊಟ್ಟಿ ರುವುದರಿಂದ ಮೂರು ಅಂಗುಲದಿಂದ ನಾಲ್ಕೂವರೆ ಅಡಿಯ ತನಕ ಪರಿಸರ ಗಣಪನನ್ನು ತಯಾರಿಸಿ, ಮಾರಾಟಕ್ಕಿಟ್ಟಿದ್ದಾರೆ.
ಗಣೇಶ ಪತ್ರಿಮೆಗಳ ಮಾರಾಟಗಾರ ವರದ ಬಾಬು ಹೇಳುವಂತೆ, ಸಂಪೂರ್ಣವಾಗಿಯಾವುದೇ ಪಿಓಪಿ ಬಳಸದೆ, ಕೇವಲ ಮಣ್ಣಿನಿಂದಲೇ ಮೂರ್ತಿಗಳನ್ನು ತಯಾರಿಸಲಾಗಿದೆ. ರಾಸಾಯನಿಕ ಬಣ್ಣ ಬಳಸದೆ, ನೀರಿನ ಬಣ್ಣ (Water paint) ಬಳಿದಿರುವುದರಿಂದ ಪರಿಸರಕ್ಕೆ ಯಾವುದೇ ರೀತಿಯ ಧಕ್ಕೆ ಇಲ್ಲ ಎಂದು ತಿಳಿಸಿದ್ದಾರೆ.
ಪೊಲೀಸರೂ ಸಹ ಈಗಾಗಲೇ ಅವರವರ ಠಾಣಾ ವ್ಯಾಪ್ತಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ, ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಂಡು, ಹಬ್ಬ ವನ್ನು ಆಚರಿಸುವಂತೆ ಸೂಚಿಸಿದ್ದಾರೆ.
*ದೇವಸ್ಥಾನಗಳಲ್ಲೂ ಸಿದ್ಧತೆ:*
ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ವಿವಿಧ ದೇವಸ್ಥಾನಗಳು ಅದೇ ರೀತಿಯಲ್ಲಿ ಗ್ರಾಮಾಂತರ ಪ್ರದೇಶದ ವಿವಿಧ ದೇವಸ್ಥಾನಗಳಲ್ಲಿ ದೇವರುಗಳಿಗೆ ಅಲಂಕಾರ ಮಾಡಿಕೊಂಡು ನಾಳಿನ ಹಬ್ಬಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಗೌರಿ ಹಬ್ಬದ ಪ್ರಯುಕ್ತ ನಾಗರ ಕಲ್ಲಿಗೆ ಪೂಜೆ ಮಾಡುವ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂಭಾಗ ಹಾಗೂ ಅಕ್ಕ ಪಕ್ಕದಲ್ಲಿರುವ ಹುತ್ತಗಳ ಜಾಗಗಳಲ್ಲಿಯೂ ಸಹ ಶುಚಿತ್ವಗೊಳಿಸಿಕೊಂಡು ತನಿ ಎರೆಯುವ ಸಿದ್ಧತೆ ಮಾಡಿಕೊಂಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು