ನಗರದಂಚಿಗೆ ಬಂದ ಕಾಡಾನೆಗಳು. ಸಾರ್ವಜನಿಕರಲ್ಲಿ ಆತಂಕ
ಚನ್ನಪಟ್ಟಣ.ಸೆ.೧೩: ತಾಲ್ಲೂಕಿನಾದ್ಯಂತ ಕಾಡು ಪ್ರಾಣಿಗಳ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದ್ದು, ರೈತರ ಬೆಳೆ ಮತ್ತು ಪ್ರಾಣದ ಜೊತೆಗೆ ಪ್ರಯಾಣಿಕರೂ ಸಹ ಆತಂಕಕ್ಕೀಡಾಗುವ ಸಂಭವ ಹೆಚ್ಚಾಗುತ್ತಿದೆ.
ಚನ್ನಪಟ್ಟಣ ನಗರದ ಅಪ್ಪಗೆರೆ, ಗ್ರಾಮೀಣ ಭಾಗದ ನೀಲಕಂಠನಹಳ್ಳಿ, ಗೋವಿಂದೇಗೌಡನದೊಡ್ಡಿ ಮೂಲಕ ಇಂದು ಮುಂಜಾನೆ ಎರಡು ಆನೆಗಳು ಹಾದು ಹೋಗಿದ್ದು, ಸಿಕ್ಕ ಫಸಲುಗಳನ್ನು ತಿಂದ್ದಿಲ್ಲದೆ, ತುಳಿದು ನಾಶ ಪಡಿಸಿವೆ. ಕೂಡ್ಲೂರು ಕೆರೆಯ ಅಂಚಿನಲ್ಲಿ ಹಾದು ಹೋಗಿ ವಾಲೇತೋಪು ಗ್ರಾಮದ ತೋಟ ಒಂದರಲ್ಲಿ ಬೀಡು ಬಿಟ್ಟಿವೆ.
ನಗರದ ಮಂದಿ ಮುಂಜಾನೆ ನಾಲ್ಕು ಗಂಟೆಯಿಂದಲೇ ಈ ರಸ್ತೆಗಳಲ್ಲಿ ವಾಯುವಿಹಾರಕ್ಕೆ ತೆರಳುತ್ತಿದ್ದು, ಇವರ ಜೊತೆಗೆ ಕೆಲಸಕ್ಕಾಗಿ ಓಡಾಡುವಂತಹ ಪ್ರಯಾಣಿಕರೂ ಸಹ ಆತಂಕ ಪಡುವಂತಾಗಿದೆ.
ಅರಣ್ಯ ಅಧಿಕಾರಿಗಳು ದೂರು ಬಂದ ಸಮಯದಲ್ಲಿ ಮಾತ್ರ ಪಟಾಕಿ ಸಿಡಿಸಿ, ಆನೆಗಳನ್ನು ನೆಲೆನಿಂತ ಜಾಗದಿಂದ ದೂರ ಓಡಿಸಲಷ್ಟೇ ಸೀಮಿತವಾಗುತ್ತಿದ್ದಾರೆ. ಶಾಶ್ವತವಾಗಿ ಕಾಡಿನಿಂದ ನಾಡಿಗೆ ಕಾಡು ಪ್ರಾಣಿಗಳು ಬಾರದಂತೆ ಖೆಡ್ಡಾವನ್ನು ನಿರ್ಮಿಸುವುದನ್ನು ಬಿಟ್ಟು, ನಾಡಿಗೆ ಬಂದ ನಂತರ ಓಡಿಸುವ ನೆಪವನ್ನಷ್ಟೇ ಮಾಡುತ್ತಿದ್ದು, ಜನರಿಂದ ಕಾಡು ಪ್ರಾಣಿಗಳಿಗೆ, ಕಾಡುಪ್ರಾಣಿಗಳಿಂದ ಜನರಿಗೆ ಆಗುವ ನಷ್ಟಗಳಿಗೆ ನೇರವಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸರ್ಕಾರವೇ ಹೊಣೆಯಾಗಿದೆ.
ಇತ್ತೀಚಿಗೆ ಜಮೀನಿನಲ್ಲಿ ಇದ್ದ ಬೆಳೆಯನ್ನು ರಕ್ಷಿಸಲು ರೈತನೋರ್ವ ತಂತಿ ಬೇಲಿ ನಿರ್ಮಿಸಿ ವಿದ್ಯುತ್ ಹರಿಸಿದ್ದ ರಿಂದ ಒಂದು ಆನೆ ಸಾವನ್ನಪ್ಪಿತ್ತು. ಹಾಗೂ ಒಂದು ಚಿರತೆ ಬೇಟೆಗಾರರನ ಗುಂಡೇಟಿಗೆ ಬಲಿಯಾಗಿದ್ದು, ಮತ್ತೊಂದು ಚಿರತೆ ಅನುಮಾನಸ್ಪದವಾಗಿ ತೋಟವೊಂದರಲ್ಲಿ ಸತ್ತು ಬಿದ್ದಿತ್ತು. ಪ್ರಾಣಿಗಳಿಗೂ ಸಹ ಮನುಷ್ಯರಿಂದ ಅವಘಡ ತಪ್ಪಿದ್ದಲ್ಲ ಎಂದು ಸಾಬೀತಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು