Tel: 7676775624 | Mail: info@yellowandred.in

Language: EN KAN

    Follow us :


ಚಕ್ಕೆರೆ ಗ್ರಾಮದ ಒಂದು ದೇವಸ್ಥಾನದಲ್ಲಿ ಕಳವು. ಮತ್ತೊಂದರಲ್ಲಿ ವಿಫಲಯತ್ನ

Posted date: 13 Sep, 2021

Powered by:     Yellow and Red

ಚಕ್ಕೆರೆ ಗ್ರಾಮದ ಒಂದು ದೇವಸ್ಥಾನದಲ್ಲಿ ಕಳವು. ಮತ್ತೊಂದರಲ್ಲಿ ವಿಫಲಯತ್ನ

ಚನ್ನಪಟ್ಟಣ: ಗ್ರಾಮದ ಪಟ್ಟಲದಮ್ಮ ದೇವಾಲಯ ಹಾಗೂ ವಡ್ಡರದೊಡ್ಡಿ ಗ್ರಾಮದ ಮಹದೇಶ್ವರ ದೇವಸ್ಥಾನದಲ್ಲಿ ಕಳ್ಳರು ಕಳ್ಳತನ ಮಾಡಿದ್ದಾರೆ. ಮಹದೇಶ್ವರ ದೇವಾಲಯದ ಬೀಗ ಮುರಿದು ಒಳನುಗ್ಗಿದ ಕಳ್ಳರು ದೇವರಿಗೆ ಧರಿಸಿದ್ದ 30 ಕೆ.ಜಿ ತೂಕದ ಪಂಚ ಲೋಹದ  ಪ್ರಭಾವಳಿ, ನಾಗರ ಸೆಡೆ, ದೀಪಗಳು, ಆರತಿ ತಟ್ಟೆ, ಬಿಂದಿಗೆ ಹುಂಡಿ ಹಾಗೂ ಗಂಟೆಗಳನ್ನು ಕಳ್ಳತನ ಮಾಡಿದ್ದಾರೆ. ಸುಮಾರು 30 ರಿಂದ 40 ಸಾವಿರ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.


ಮಹದೇಶ್ವರ ದೇವಾಲಯ ಕಳ್ಳತನ ಮಾಡಿದ ನಂತರ ಚಕ್ಕೆರೆ ಗ್ರಾಮದ ಶಕ್ತಿ ದೇವತೆ ಪಟ್ಟಲದಮ್ಮ ದೇವಾಲಯ‌ ಕಳ್ಳತನ ಮಾಡಲು ಯತ್ನಿಸಿ ವಿಫಲರಾಗಿದ್ದಾರೆ. ದೇವಾಲಯಕ್ಕೆ ಅಳವಡಿಸಿದ ಸಿಸಿ ಕ್ಯಾಮರಾಗಳನ್ನ ಬೇರೆ ಕಡೆಗೆ ತಿರುಗಿಸಿದ್ದಾರೆ ಅಲ್ಲದೇ ಕಿಟಕಿ ಗ್ಲಾಸ್ ಕೂಡ ಹೊಡೆದಿದ್ದಾರೆ. ಬಾಗಿಲಿನಲ್ಲಿ ನಿಂತು ಹಕ್ಕಿ ಪಕ್ಷಿಗಳನ್ನ ಹೊಡೆಯುವ ಕ್ಯಾಟರ್ ಬಿಲ್ ಬಳಸಿ ದೇವಾಲಯದ ಒಳಗೆ ಇದ್ದ ಸಿಸಿಟಿವಿಯ ಡಿವಿಆರ್ ಗೆ ಹೊಡೆದಿದ್ದಾರೆ. ನಂತರ ಬಾಗಿಲನ್ನ ಹೊಡೆಯುವ ಪ್ರಯತ್ನ ಮಾಡಿದ್ದಾರೆ ಆದರೆ ಬಾಗಿಲು ಹೊಡೆಯಲು ಸಾಧ್ಯವಾಗದೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.


 *ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ:*

ಹೌದು ಪಟ್ಟಲದಮ್ಮ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಕಳರು ದೇವಾಲಯದ ಮುಂದೆ ಇರುವ ಸಿಸಿ ಕ್ಯಾಮರಾಗಳನ್ನ ಮಾತ್ರ ಬೇರೆ ಕಡೆಗೆ ತಿರುಗಿಸಿದ್ದಾರೆ. ಆದ್ರೆ ಬಾಗಿಲನ ಬಲಭಾಗದಲ್ಲಿದ್ದ ಸಿಸಿ ಕ್ಯಾಮರವನ್ನ ಕಳ್ಳರು ಗಮನಿಸಲಿಲ್ಲ. ಹಾಗಾಗಿ ಇಬ್ಬರು ಕಳ್ಳರು ಬಾಗಿಲು ಹೊಡೆಯುವುದು ಹಾಗೂ ದೇವಾಲಯದ ಒಳಗಿದ್ದ ಸಿಸಿಟಿವಿ ಡಿವಿಆರ್ ನನ್ನ ಕ್ಯಾಟರ್ ಬಿಲ್ಲ್ ನಿಂದ ಹೊಡೆಯುವ ದೃಶ್ಯ ಸೆರೆಯಾಗಿದೆ.


 *4-5 ದಿನಗಳಿಂದ ಗ್ರಾಮದಲ್ಲೆ ಇದ್ದ ಕಳ್ಳರು:* ಹೌದು ದೇವಾಲಯ ಕಳ್ಳತನ ಮಾಡಿರುವ ಕಳ್ಳರು ಕಳೆದ 5 ದಿನಗಳಿಂದ ಗ್ರಾಮದಲ್ಲೆ ವಾಸ್ತವ್ಯ ಹೂಡಿದ್ದರು. ಇಬ್ಬರು ಗಂಡಸರು ಒಬ್ಬಳು ಹೆಂಗಸು ಇಬ್ಬರು ಮಕ್ಕಳು ನಾವು ಜೇನು ಬಿಚ್ಚುವವರು ಎಂದು ಹೇಳಿಕೊಂಡು ಗ್ರಾಮದ ಪಟ್ಟಲದಮ್ಮ ಕಲ್ಯಾಣ ಮಂಟಪದ ಮುಂದೆ ಇದ್ದರು. ಇದೀಗ ಸಿಸಿಟಿವಿಯಲ್ಲಿ ಸೆರೆಯಾದವರು ಸಹ ಇದೇ ಇಬ್ಬರು ಜೇನು ಬಿಚ್ಚಲು ಬಂದಿದ್ದವರು ಎಂದು ತಿಳಿದಿದೆ. 


 *ಪೊಲೀಸರ ಭೇಟಿ:*

ವಿಷಯ ತಿಳಿದ ಗ್ರಾಮಾಂತರ ಪಿಎಸ್ಐ ಶಿವಕುಮಾರ್ ರವರು ಎರಡು ದೇವಾಲಯದ ಸ್ಥಳಗಳಿಗೆ ಬಂದು ಪರಿಶೀಲನೆ ನಡೆಸಿದ್ದು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸಹ ಬಂದು ಪರಿಶೀಲನೆ ನಡೆಸಿದ್ದು. ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಠಾಣಾ ಮೊಕದ್ದಮೆ 132/21. 457 ಮತ್ತು 380 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑