Tel: 7676775624 | Mail: info@yellowandred.in

Language: EN KAN

    Follow us :


ವದಂತಿಗಳಿಗೆ ಕಿವಿಕೊಡಬೇಡಿ ಕೋವಿಡ್ ಲಸಿಕೆ ಪಡೆಯಿರಿ: ಡಾ: ರಾಜೇಶ್ ಕುಮಾರ್ ಕೆ

Posted date: 15 Sep, 2021

Powered by:     Yellow and Red

ಕೋವಿಡ್ ಲಸಿಕೆಯನ್ನು 18 ವರ್ಷ ಮೇಲ್ಪಟ್ಟ ಎಲ್ಲರೂ ಪಡೆಯಬಹುದು ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಕೋವಿಡ್ ಲಸಿಕೆಯಿಂದ ತೊಂದರೆ ಉಂಟಾಗುತ್ತಿದೆ ಎಂಬ ವದಂತಿಗಳಿಗೆ ಕಿವಿಕೊಡಬಾರದು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ಮಸೀದಿ‌ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಮಾತನಾಡಿದರು. ಕೋವಿಡ್  ಸೋಂಕು ಯಾವಾಗ, ಹೇಗೆ, ಎಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಸೋಂಕು ಹೆಚ್ಚಾದರೆ ಕಠಿಣ ಕ್ರಮಗಳು ಅನಿವಾರ್ಯವಾಗಿ ಕೈಗೊಳ್ಳಬೇಕಾಗುತ್ತದೆ. ಇದರಿಂದ ದುಡಿಮೆಗೆ ತೊಂದರೆಯಾಗುತ್ತದೆ. ಇದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಲಸಿಕೆ ಪಡೆದ ನಂತರವು ಕೋವಿಡ್ ಸೋಂಕಿಗೆ ಒಳಗಾದರೂ  ಸೋಂಕಿನ ತೀವ್ರತೆ ಕಡಿಮೆಯಿರುತ್ತದೆ ಎಂದರು.


ಮಸೀದಿ ಸಮಿತಿ ಅವರು ತಮ್ಮ ಸಮುದಾಯದವರಿಗೆ ಕೋವಿಡ್ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಮಸೀದಿಯಲ್ಲಿ ನಮಾಜ್  ನಡೆಯುವ ಸಂದರ್ಭದಲ್ಲಿ ಸೆಪ್ಟೆಂಬರ್ 17 ರಂದು ನಡೆಯುವ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿ ಲಸಿಕೆ ಪಡೆಯುವಂತೆ ತಿಳಿಸಿ. ಮಸೀದಿಗಳ ಸಮಿತಿಯಿಂದ ಮಾಹಿತಿ ಪಡೆದು ಮಸೀದಿಯ ಹತ್ತಿರ ಲಸಿಕಾ ಕೇಂದ್ರಗಳನ್ನು ತೆರೆಯಿರಿ.ಮಸೀದಿಯಲ್ಲಿ ನಮಾಜ್ ಮುಗಿಸಿದ ನಂತರ 

ಜನರು  ಕೋವಿಡ್ ಲಸಿಕೆ ಪಡೆದುಕೊಳ್ಳಬಹುದು ಎಂದರು.


ಕೋವಿಡ್ ಲಸಿಕೆ ಕೇವಲ ನಮ್ಮ ಕುಟುಂಬದವರು ಪಡೆದರೆ ಸಾಲದು. ನಮ್ಮ ಸುತ್ತಮುತ್ತಲು ವಾಸಿಸುವವರು ಪಡೆಯಬೇಕು. ಏಕೆಂದರೆ ನಾವು ದಿನನಿತ್ಯದ ಜೀವನದಲ್ಲಿ ಅವರೊಂದಿಗೂ ಸಹ ಸಂಪರ್ಕದಲ್ಲಿ ಇರುತ್ತೇವೆ ಎಂದರು. 


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅವರು ಮಾತನಾಡಿ ಪೊಲೋಸ್ ಸಿಬ್ಬಂದಿಗಳು ಪ್ರತಿದಿನ ಜನ ಸಂದಣಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಜಿಲ್ಲೆಯಲ್ಲಿ 1,200 ಪೊಲೀಸ್ ಸಿಬ್ಬಂದಿಗಳಿದ್ದು,  ಮೊದಲ ಅಲೆಯಲ್ಲಿ ಲಸಿಕೆ ಇರಲಿಲ್ಲ 150 ಜನರು ಕೋವಿಡ್ ಸೋಂಕಿಗೆ ಒಳಗಾದರು. ಎರಡನೇ ಅಲೆಯಲ್ಲಿ ಲಸಿಕೆ ಪಡೆದವರು ಕೋವಿಡ್ ಸೋಂಕಿಗೆ ಒಳಗಾದವರ ಸಂಖ್ಯೆ ತೀರಾ ಕಡಿಮೆ. ಲಸಿಕೆಗೆ ಇರುವ ರೋಗ ನಿರೋಧಕ ಶಕ್ತಿಯನ್ನು ತಿಳಿದುಕೊಳ್ಳಬೇಕು ಎಂದರು.


ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮಾ ಅವರು ಮಾತನಾಡಿ 18 ವರ್ಷ ಮೇಲ್ಪಟ್ಟವರು ಕೋವಿಡ್ ಲಸಿಕೆ ಪಡೆಯಲು ಅರ್ಹರು. ಗರ್ಭಿಣಿ ಹಾಗೂ ಬಾಣಂತಿ ಸ್ತ್ರೀಯರು ಸಹ ಯಾವುದೇ ಆತಂಕ ಪಡದೇ ಲಸಿಕೆ ಪಡೆದುಕೊಳ್ಳಬಹುದು. ಜಿಲ್ಲೆಯಲ್ಲಿ ಈಗಾಗಲೇ 3,800 ಗರ್ಭಿಣಿಯರಿಗೆ ಲಸಿಕೆ ನೀಡಲಾಗಿದೆ. ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ. ಸಕ್ಕರೆ, ರಕ್ತದ ಒತ್ತಡ, ವಯಸ್ಸಾದವರಿಗೆ ಮೊದಲ ಆದ್ಯತೆ ನೀಡಿ ಲಸಿಕೆ ಪಡೆಯಬೇಕು. ಸೆ.17 ರಂದು ಮೊದಲ ಡೋಸ್ ಹಾಗೂ ಅವಧಿ ಪೂರ್ಣಗೊಳಿಸಿ ಎರಡನೇ ಡೋಸ್ ಗೆ ಅರ್ಹರಾಗಿರುವವರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗುವುದು ಎಂದರು. 


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್ , ರಾಮನಗರ ನಗರಸಭೆ ಆಯುಕ್ತ ನಂದ ಕುಮಾರ್, ವಕ್ಫ್ ಬೋರ್ಡ್ ಅಧಿಕಾರಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑