ಜೆಡಿಎಸ್ ಬಗ್ಗೆ ಮಾತನಾಡಲು ವಿಷಯವೇ ಇಲ್ಲಾ. ಹೆಚ್ ಡಿ ಕುಮಾರಸ್ವಾಮಿ
ರಾಮನಗರ:ಅ/08/21. ಜೆಡಿಎಸ್ ಬಿಜೆಪಿಯ ಬಿ ಟೀಂ ಅನ್ನುವ ಕಾಂಗ್ರೆಸ್ ನವರು ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಾರೆ ಅಂತಾರೆ. ಅವರಿಗೆ ಜೆಡಿಎಸ್ ಪಕ್ಷದ ಬಗ್ಗೆ ಮಾತಾನಡಲು ಕಾಂಗ್ರೆಸ್ ನಾಯಕರಿಗೆ ವಿಷಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಇಂದು ಚನ್ನಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಸುಖಾಸುಮ್ಮನೆ ಜೆಡಿಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ನಾನು ಈ ಹಿಂದೆ ಆರ್.ಎಸ್.ಎಸ್ ಬಗ್ಗೆ ನೀಡಿರುವ ಹೇಳಿಕೆಗೆ ಬದ್ದನಾಗಿದ್ದೇನೆ. ನಾನು ವಾಸ್ತವತೆಯ ಆಧಾರದಲ್ಲಿ ಆ ಮಾತನ್ನ ಹೇಳಿದ್ದೇನೆ.
ಆರ್.ಎಸ್.ಎಸ್ ಪ್ರಚಾರಕರೆ ಹೇಳಿರುವ ಮಾತುಗಳನ್ನ ಪ್ರಸ್ತಾಪ ಮಾಡಿದ್ದೇನೆ. ಸಾರ್ವಜನಿಕವಾಗಿ ಚರ್ಚೆಗೆ ನಾನು ಸಿದ್ದನಿದ್ದೇನೆ. ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ಬರಲಿ ಎಂದು ಸವಾಲೆಸೆದರು.
ಆರ್ ಎಸ್ ಎಸ್ ಅಜೆಂಡಾಗಳ ಬಗ್ಗೆ ಚರ್ಚೆ ನಡೆಸಲು ನಾನು ಸಿದ್ದನಿದ್ದು ಆರ್.ಎಸ್.ಎಸ್ ಪ್ರಚಾರಕರೆ ಒಬ್ಬ ಲೇಖಕರ ಮುಂದೆ ಹೇಳಿರುವುದನ್ನೆ ನಾನು ಹೇಳಿದ್ದೇನೆ. ಸ್ವಾತಂತ್ರ್ಯ ಬಂದಾಗ ಆರ್.ಎಸ್.ಎಸ್ ಇಲ್ಲದಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು ಎಂಬ ಸಚಿವ ಈಶ್ವರಪ್ಪ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್ಡಿಕೆ,
ಸ್ವಾತಂತ್ರ್ಯ ಬಂದಾಗ ಈಶ್ವರಪ್ಪ ಹುಟ್ಟಿದ್ರಾ? ನಾನು ಹುಟ್ಟಿರಲಿಲ್ಲ.
ಯಾರ ಯಾರ ಕೊಡುಗೆ ಏನ್ ಏನ್ ಇದೆ ಅಂತಾ ಈಶ್ವರಪ್ಪ ಅವರಿಗೆ ಏನ್ ಗೊತ್ತು
ಆರ್.ಎಸ್.ಎಸ್ ನವರು ಬಂದು ಪಾಕಿಸ್ತಾನ ಆಗುವುದನ್ನ ತಪ್ಪಿಸಿದ್ದಾರಾ ಎಂದು ಪ್ರಶ್ನಿಸಿದರು.
ಕಾಶ್ಮೀರದಲ್ಲಿ ಶಾಲೆಗೆ ನುಗ್ಗಿ ಭಯೋತ್ಪಾದಕರು ಶಿಕ್ಷಕರನ್ನ ಸುಟ್ಟಿದ್ದಾರೆ. ದೇವೇಗೌಡ್ರು 10 ತಿಂಗಳು ಪ್ರಧಾನಿ ಆಗಿದ್ದ ವೇಳೆ ದೇಶದಲ್ಲಿ ನಾಗರಿಕರ ಮೇಲೆ ಗುಂಡು ಹಾರಿಸಿದ ಘಟನೆ ಯಾವುದಾದರೂ ನಡೆದಿತ್ತಾ ಎನ್ನುವುದಕ್ಕೆ ಪುರಾವೆ ಕೊಡಿ ಎಂದ ಕುಮಾರಸ್ವಾಮಿ,
ಕಳೆದ 4 ದಿನಗಳಲ್ಲಿ ಕಾಶ್ಮೀರದಲ್ಲಿ ಪಂಡಿತರು ಹಾಗೂ ಶಿಕ್ಷಕರನ್ನ ನಾಗರಿಕರನ್ನ ಭಯೋತ್ಪಾದಕರು ಗುಂಡಿಕ್ಕಿದ್ದಾರೆ. ಇದೇನಾ ಆರ್.ಎಸ್.ಎಸ್ ನಿಮಗೆ ಸರಕಾರ ನಡೆಸುವುದು ಹೇಗೆ ಅಂತಾ ಹೇಳಿಕೊಟ್ಟಿರೋದು ಎಂದರು.
ಕಾಂಗ್ರೆಸ್ ನಾಯಕರ ಜತೆಗೆ ಬಿಜೆಪಿ ನಾಯಕರು ವಾದ ಮಾಡಿದ ಹಾಗೆ ನನ್ನ ಬಳಿ ಚರ್ಚೆ ಬೇಡ. ನಾನು ದಾಖಲೆ ಆಧಾರ ಇಟ್ಟಿಕೊಂಡು ಮಾತನಾಡುತ್ತೇನೆ. ಆರ್.ಎಸ್.ಎಸ್ ಹಾಗೂ ಬಿಜೆಪಿ ಸೇರಿಕೊಂಡು ಕಾಶ್ಮೀರವನ್ನ ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ರು.
*ಉತ್ತಮ ವಾತಾವರಣ ಇದೆ:*
ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಉತ್ತಮ ವಾತಾವರಣವಿದೆ. ಸಿಂಧಗಿಯಲ್ಲಿ ಈಗಾಗಲೇ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವ ಸೂಚನೆ ಇದೆ. ಹಾನಗಲ್ ನಲ್ಲಿ ಗೆಲುವ ಪೈಪೋಟಿ ನೀಡಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ರು.
ಜೆಡಿಎಸ್ ಕಾರ್ಯಾಗಾರದಲ್ಲಿ ನಾನೇ ಹೇಳಿದಂತೆ ಜೆಡಿಎಸ್ ಪಕ್ಷ ಎಲ್ಲಿ ಸ್ಟ್ರಾಂಗ್ ಇದೆ ಅಲ್ಲಿ ಪಕ್ಷ ಬೆಂಬಲಿಸಿ. ಎಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದೆ ಇದೆ ಅಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಬೆಂಬಲಿಸಿ ಅಂತಾ ಓಪನ್ನಾಗಿ ಹೇಳಿದ್ದೇನೆ. ಕಾಂಗ್ರೆಸ್ ಪಕ್ಷದ ಹಾಗೇ ಹೀನಾಯ ರಾಜಕೀಯ ಮಾಡಲ್ಲ. ಸಿದ್ದರಾಮಯ್ಯ ಅವರ ಹಾಗೆ ಕುಲಗೆಟ್ಟ ರಾಜಕೀಯ ನಾನು ಮಾಡಲ್ಲವೆಂದು ಸಿದ್ದುವನ್ನು ಕುಟುಕಿದರು.
ರಾಜ್ಯದಲ್ಲಿ ಜ್ಯಾತೀತಾ ಶಕ್ತಿ ಉಳಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನ ಬೆಂಬಲಿಸಿ ಅಂತಾ ಹೇಳಿದ್ದೇನೆ. ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿ ತಮ್ಮ ಕೀಳುಮಟ್ಟದ ರಾಜಕೀಯ ಏನೂ ಎಂಬುದನ್ನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
*ಉಪ ಚುನಾವಣೆ ವಿಚಾರ:*
ಎರಡು ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಇದೆ.
ಸಿಂಧಗಿಯಲ್ಲಿ ಈಗಾಗಲೇ ಅಭ್ಯರ್ಥಿ ಗೆಲ್ಲುವ ಸೂಚನೆ ಇದೆ
ಹಾನಗಲ್ ನಲ್ಲಿ ಗೆಲುವ ಪೈಪೋಟಿ ನೀಡಲಿದ್ದೇವೆ
ಜೆಡಿಎಸ್ ಕಾರ್ಯಾಗಾರದಲ್ಲಿ ನಾನೇ ಹೇಳಿದ್ದೆನೆ.
ನಮ್ಮ ಪಕ್ಷವನ್ನ 2023 ಕ್ಕೆ ಅಧಿಕಾರಕ್ಕೆ ತರಲು ಕಾರ್ಯಾಗಾರಗಳನ್ನ ಮಾಡಿದ್ದೇನೆ. ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನ ಜನತೆ ಮುಂದೆ ಇಡಲು ಪ್ರಾರಂಭ ಮಾಡಿದ್ದೇನೆ.
ಇದನ್ನ ಇಲ್ಲಿಗೆ ನಿಲ್ಲಿಸುವ ಪ್ರಶ್ನೆ ಇಲ್ಲ. ಕಾರ್ಯಾಗಾರಗಳನ್ನ ಮಾಡುವ ಮೂಲಕ ಮುಂದೆಯೂ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡುತ್ತೇನೆ ಎಂದು ವಿವರಿಸಿದರು
ಇದು ಉಪ ಚುನಾವಣೆಯಲ್ಲಿ ಯಾರನ್ನೊ ಓಲೈಸಿಕೊಳ್ಳಲು ಕಾರ್ಯಾಗಾರ ಮಾಡಿಲ್ಲ. ಓಲೈಸೊ ರಾಜಕಾರಣ ಏನಿದ್ರು ಬಿಜೆಪಿ ಪಕ್ಷದ್ದು ಹಿಂದುತ್ವದ ಹೆಸರಿನಲ್ಲಿ ಸಂದೇಶ ಕೊಡಲು ಬಿಜೆಪಿಯವರು ಹೊರಟ್ಟಿದ್ದಾರೆ.
ಹಿಂದುತ್ವದ ರಾಜಕಾರಣ ಮಾಡಿಕೊಂಡು ಮತಗಳಿಗೊಸ್ಕರ ನಾನು ಓಟ್ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲವೆಂದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು