Tel: 7676775624 | Mail: info@yellowandred.in

Language: EN KAN

    Follow us :


ಕ್ರಿಕೆಟ್ ಬೆಟ್ಟಿಂಗ್: ತಾಲ್ಲೂಕಿನ ನಾಲ್ಕು ಮಂದಿ ಬಂಧನ. 10,98,210₹, ಕಾರು, ಟಿವಿಗಳು, ಮೊಬೈಲ್ ಗಳು, ಚೆಕ್ ಗಳು, ಎಟಿಎಂ ಕಾರ್ಡುಗಳು ವಶಕ್ಕೆ

Posted date: 12 Oct, 2021

Powered by:     Yellow and Red

ಕ್ರಿಕೆಟ್ ಬೆಟ್ಟಿಂಗ್: ತಾಲ್ಲೂಕಿನ ನಾಲ್ಕು ಮಂದಿ ಬಂಧನ. 10,98,210₹, ಕಾರು, ಟಿವಿಗಳು, ಮೊಬೈಲ್ ಗಳು, ಚೆಕ್ ಗಳು, ಎಟಿಎಂ ಕಾರ್ಡುಗಳು ವಶಕ್ಕೆ

ರಾಮನಗರ: ಚನ್ನಪಟ್ಟಣ.ಅ/12/21.

ಇತ್ತೀಚೆಗೆ ಅಗಾಧವಾಗಿ ಬೆಳೆದು, ಯುವಕರು ಹಾಳಾಗಿ, ಮನೆಮಠ ಕಳೆದುಕೊಂಡು, ಭಿಕಾರಿಗಳಾಗಿ, ಕೆಲವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿದ್ದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡು(ಸು)ತ್ತಿದ್ದ ನಾಲ್ಕು ಬುಕ್ಕಿಗಳನ್ನು ರಾಮನಗರ ದ ಸಿಇಎನ್ ಪೋಲೀಸರು ದಾಳಿ ಮಾಡಿ, ಅಪಾರ ಹಣದ ಜೊತೆಗೆ ಹಲವಾರು ತಾಂತ್ರಿಕತೆಯ ವಸ್ತುಗಳನ್ನು ವಶಕ್ಕೆ ಪಡೆದು, ನಾಲ್ಕು ಮಂದಿಯನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿರುವುದಾಗಿ ರಾಮನಗರ ಪೋಲೀಸ್ ಅಧೀಕ್ಷಕ ಎಸ್ ಗಿರೀಶ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.


ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆಹೊಸಹಳ್ಳಿ ಗ್ರಾಮದ ಲೇಟ್ ಮರಿಗೌಡರ ಪುತ್ರ ಆತ್ಮಾನಂದ ಉ ಗ್ರೇನೇಜ್ ಆತ್ಮ ಎಂಬ ವ್ಯಕ್ತಿ ಮೊದಲ ಆರೋಪಿಯಾಗಿದ್ದಾನೆ. ಎ2 ಮಳೂರುಪಟ್ಟಣ ಗ್ರಾಮದ ಲೇಟ್ ಚನ್ನೇಗೌಡರ ಪುತ್ರ ಎಂ ಮನು, ಎ3 ಚನ್ನಪಟ್ಟಣ ದ ಮೂಲನಿವಾಸಿ ಹಾಲಿ ರಾಮನಗರ ದ ಅಗ್ರಹಾರ ವಾಸಿಯಾದ ಎ ಪಿ ಸೋಮಾಚಾರಿ ಪುತ್ರ ಕೃಷ್ಣಮೂರ್ತಿ ಎಸ್ ಉ ಕಿಟ್ಟಿ, ಎ4 ಸಂದೀಪ್ ಉ ಗೋಪಾಲ್ ಎಂಬ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಎ5 ಚನ್ನಪಟ್ಟಣ ನಗರದ ಎಂ ಜಿ ರಸ್ತೆಯ ವೆಂಕಟರಮಣಸ್ವಾಮಿ ಪುತ್ರ ನಾಗಾರ್ಜುನ ಉ ನಕುಲ ಎಂಬ ವ್ಯಕ್ತಿಗಳೇ ಕ್ರಿಕೆಟ್ ದಂಧೆಯ ಕಿಂಗ್ ಫಿನ್ ಗಳಾಗಿದ್ದಾರೆ.


ದಾಳಿಯ ಸಮಯದಲ್ಲಿ ಆರೋಪಿಗಳಿಂದ 10,98,210 ರೂಪಾಯಿ ನಗದು, ಒಂದು ಹುಂಡೈ ಐ 10 ಕಾರು, 2 ಸೋನಿ ಟಿವಿಗಳು, ಸೆಟ್ ಅಪ್ ಬಾಕ್ಸ್ ಗಳು, 8 ಮೊಬೈಲ್ ಗಳು, ವಿವಿಧ ಬ್ಯಾಂಕುಗಳ ಚೆಕ್ ಪುಸ್ತಕಗಳು ಮತ್ತು ಎಟಿಎಂ ಕಾರ್ಡುಗಳು ಹಾಗೂ ಐಪಿಎಲ್ ಕ್ರಿಕೆಟ್ ದಂಧೆಗೆ ಸಂಬಂಧಿಸಿದ ಇನ್ನಿತರ ಹಲವಾರು ದಾಖಲೆಗಳನ್ನು ಆರೋಪಿಗಳಿಂದ ಅಮಾನತು ಪಡಿಸಿಕೊಳ್ಳಲಾಗಿದೆ.


ಈ ದಾಳಿಯನ್ನು ಖಚಿತ ಮಾಹಿತಿ ಮೇರೆಗೆ ರಾಮನಗರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಸ್ ಗಿರೀಶ್ ರವರ ಮಾರ್ಗದರ್ಶನದಲ್ಲಿ ಸೈಬರ್, ಎಕನಾಮಿಕ್, ನಾರ್ಕೋಟಿಕ್ಸ್ (ಸಿಇಎನ್) ಪೋಲೀಸ್ ಠಾಣೆಯ ಉಪನಿರೀಕ್ಷಕ ಗೋವಿಂದ್ ಬಿ ಟಿ, ಕನಕಪುರ ಗ್ರಾಮಾಂತರ ಪೋಲೀಸ್ ಠಾಣೆಯ ಉಪನಿರೀಕ್ಷಕ ಹೇಮಂತ್ ಕುಮಾರ್, ರಾಮನಗರ ಪುರ ಠಾಣೆಯ ಉಪನಿರೀಕ್ಷಕ ಮುತ್ತುರಾಜ್, ಸಿಬ್ಬಂದಿಗಳಾದ ಅಶ್ವಥ್, ಮಾರಪ್ಪ, ಗುರುಮೂರ್ತಿ, ಮಂಜುನಾಥ ಬಾಬಾಜಿ, ನಾಗರಾಜಣ್ಣ, ಸವಿತಾ ಹೆಚ್ ಎಂ, ಸುಶೀಲಾ, ಕವಿತಾ ಕಿರಣಕುಮಾರ್, ಸಂತೋಷ ಪಾಂಡೆ, ದುಂಡಪ್ಪ ಮಾಳ್ಯಗೋಳ, ಶೇಖರ್ ರವರು ದಾಳಿ ಮಾಡುವಲ್ಲಿ ಯಶಸ್ವಿಯಾಗುದ್ದು, ಪತ್ತೆಕಾರ್ಯ ಮುಂದುವರೆದಿರುತ್ತದೆ ಎಂದು ಎಸ್ ಪಿ ಗಿರೀಶ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑