ನಕರಾತ್ಮಕ ವಿಷಯಗಳಿಂದ ದೂರವಿದ್ದು, ಸಕಾರಾತ್ಮಕ ವಿಷಯಗಳಿಗೆ ಒತ್ತು ನೀಡಿ. ಪಿಟಿಎಸ್ ನಲ್ಲಿ ಡಾ ಸಿ ಆರ್ ಚಂದ್ರಶೇಖರ್
ಚನ್ನಪಟ್ಟಣ: ಅ/12/21. ಜನರಲ್ಲಿ ಆಧುನಿಕತೆ, ಆಡಂಬರ ಮತ್ತು ವೈಯುಕ್ತಿಕ ಅಭಿಲಾಷೆಗಳು ಹೆಚ್ಚಾದಂತೆ ಮಾನಸಿಕ ಖಿನ್ನತೆಗೊಳಗಾಗುತ್ತಿದ್ದು, ಅಂತಹ ವ್ಯಕ್ತಿಗಳು ದುರ್ಬಲವಾಗುವುದರ ಜೊತೆಗೆ ಮಾನಸಿಕವಾಗಿ ಖಿನ್ನತೆಗೊಳಗಾಗುತ್ತಿದ್ದಾರೆ. ನಕಾರಾತ್ಮಕ ಚಿಂತನೆಗಳನ್ನು ಬದಿಗೆ ಸರಿಸಿ ಸಕಾರಾತ್ಮಕ ಚಿಂತನೆಗಳಿಗೆ ಸ್ಪಂದಿಸಬೇಕು ಎಂದು ಖ್ಯಾತ ಮನೋವೈದ್ಯ ಡಾ ಸಿ ಆರ್ ಚಂದ್ರಶೇಖರ್ ತಿಳಿಸಿದರು.
ಅವರು ಇಂದು ತಾಲ್ಲೂಕಿನ ವಂದಾರಗುಪ್ಪೆ ಬಳಿ ಇರುವ ಪೋಲಿಸ್ ತರಬೇತಿ ಕೇಂದ್ರದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ರಾಮನಗರ ಇವರ ಸಹಯೋಗದೊಂದಿಗೆ ಅಸಮಾನ ಜಗತ್ತಿನಲ್ಲಿ ಮಾನಸಿಕ ಸ್ವಾಸ್ಥ್ಯ ಎಂಬ ಘೋಷವಾಕ್ಯದಡಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಗತ್ತಿನಲ್ಲಿ ಲಿಂಗ, ಸಾಮರ್ಥ್ಯ, ಬಣ್ಣ, ಆರ್ಥಿಕತೆ, ಧರ್ಮ, ಮತ, ಭಾಷೆ ಹೀಗೆ ಹಲವಾರು ವಿಷಯಗಳಲ್ಲಿ ಅಸಮಾನತೆ ಕಂಡುಬರುತ್ತದೆ, ಇದರಿಂದ ಶೋಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಇದರೊಂದಿಗೆ ಖಿನ್ನತೆ, ಆತಂಕ, ಆತ್ಮಹತ್ಯೆ ಆಲೋಚನೆಗಳು ಅತಿಯಾದ ಒತ್ತಡ ಹೀಗೆ ಹಲವಾರು ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ, ಮಾನಸಿಕ ಸಮಸ್ಯೆಗಳನ್ನು ಇತರರಲ್ಲಿ ಹಂಚಿಕೊಳ್ಳುವುದು, ಯೋಗ, ಧ್ಯಾನ, ಸಂಗೀತ ಕೇಳುವಂತಹ ಅಭ್ಯಾಸ ಮಾಡಿಕೊಳ್ಳುವುದು, ನಕರಾತ್ಮಕ ವಿಷಯಗಳಿಂದ ದೂರವಿರುವುದು ಮತ್ತು ಸಕಾರಾತ್ಮಕ ವಿಷಯಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಮತ್ತು ಮನೋರೋಗ ತಜ್ಞರನ್ನು ಭೇಟಿ ಮಾಡಿ ಸಲಹೆ ಪಡೆದುಕೊಳ್ಳುವುದೇ ಉತ್ತಮ ಎಂದು ತಿಳಿಸಿದರು.
ಕಾರ್ಯಕ್ರಮಾಧಿಕಾರಿಗಳಾದ ಡಾ|| ಮಂಜುನಾಥ್, ಸಿ ರವರು, ಮಾತನಾಡಿ ಇಂದಿನ ದಿನದಲ್ಲಿ ಎಲ್ಲರೂ ಅತಿ ಹೆಚ್ಚು ಒತ್ತಡದಿಂದ ಹಲವಾರು ರೀತಿಯ ಮಾನಸಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದು, ತಮಗೆ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಯಾವುದೇ ಹಿಂಜರಿಕೆ ಇಲ್ಲದೇ ಮನೋರೋಗ ತಜ್ಞರನ್ನು ಭೇಟಿ ಮಾಡಿ, ಮಕ್ಕಳಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪಾರಿಣಾಮಗಳ ಬಗ್ಗೆ ತಿಳಿಹೇಳಿ ಮತ್ತು ಪೋಷಕರು ಮಕ್ಕಳ ಮಾನಸಿಕ ಸ್ಥಿತಿಯ ಮೇಲೆ ನಿಗಾವಹಿಸಿ ಈ ಮೂಲಕ ಮಕ್ಕಳಲ್ಲಿ ಉಜ್ವಲ ಭವಿಷ್ಯ ರೂಪಿಸಿ ಎಂದು ತಿಳಿಸಿದರು.
ಮನೋರೋಗ ತಜ್ಞರಾದ ಡಾ|| ಆದರ್ಶ, ಎ.ಎಂ ರವರು, ಮಾತನಾಡಿ ರಾಮನಗರ ಜಿಲ್ಲೆಯ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಶಿಬಿರ ನಡೆಸಲಾಗುವುದು ಮತ್ತು ಪ್ರತಿದಿನ ಜಿಲ್ಲಾ ಆಸ್ಪತ್ರೆಯಲ್ಲಿ ಮನೋರೋಗ ತಜ್ಞರು ಲಭ್ಯವಿರುತ್ತಾರೆ. ಖಿನ್ನತೆಗೊಳಗಾದವರು ಭೇಟಿ ನೀಡಿ ತಮ್ಮ ಖಿನ್ನತೆಯನ್ನು ದೂರ ಮಾಡಿಕೊಳ್ಳವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಎಸ್ಪಿಟಿಎಸ್ ನ ಪ್ರಾಂಶುಪಾಲರಾದ ವಿ ಶೈಲೇಂದ್ರ ರವರು, ಅಧ್ಯಕ್ಷತೆಯನ್ನು ವಹಿಸಿದ್ದರು. ಕೆಎಸ್ಪಿಟಿಎಸ್ ನ ಡಿವೈಎಸ್ ಪಿ ಆದ ಎಲ್ ಕೆ ರಮೇಶ್ ರವರು, ಸ್ವಾಗತ ಕೋರಿದರು. ಬೋದಕರಾದ ಸಂಪತ್ ಕುಮಾರ್ ರವರು ವಂದನಾರ್ಪಣೆ ಮಾಡಿದರು, ಎಸ್ ಎನ್ ರಮೇಶ್ ರವರು ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕೆಎಸ್ಪಿಟಿಎಸ್ ನ ಪ್ರಶಿಕ್ಷಣಾರ್ಥಿಗಳೊಂದಿಗೆ ಮನೋರೋಗ ತಜ್ಞರಾದ ಡಾ|| ಸಿ ಆರ್ ಚಂದ್ರಶೇಖರ್ ರವರು ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ನಿರಂಜನ್, ಬಿ.ಎಸ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ|| ಪದ್ಮ, ಜಿ.ಎಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಕಿರಣ್ ಶಂಕರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ|| ಕುಮಾರ್, ಕೆ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲೆ ಡಾ|| ಮಂಜುಳಾ ಕೆ, ಉಪಸ್ಥಿತರಿದ್ದರು. ಆರೋಗ್ಯ ಇಲಾಖೆ, ಕೆಎಸ್ಪಿಟಿಎಸ್ ಚನ್ನಪಟ್ಟಣದ ಸಿಬ್ಬಂದಿಗಳು ಮತ್ತು ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು