Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಅಪರ ಜಿಲ್ಲಾಧಿಕಾರಿ

Posted date: 23 Oct, 2021

Powered by:     Yellow and Red

ಜಿಲ್ಲೆಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಅಪರ ಜಿಲ್ಲಾಧಿಕಾರಿ

ರಾಮನಗರ.ಅ.23:21. ಜಿಲ್ಲಾಡಳಿತದ ವತಿಯಿಂದ ನವೆಂಬರ್ 01 ರಂದು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಿಸಲು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರ  ಅಧ್ಯಕ್ಷತೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೋವಿಡ್ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು ಆದರೆ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಕ್ರಮಬದ್ಧವಾಗಿ ಆಚರಣೆಯಾಗಬೇಕು. ಯಾವುದೇ ಲೋಪ ಉಂಟಾಗದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.


ನವೆಂಬರ್ 01 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಧ್ವಜಾರೋಹಣದ ಸಂಬಂಧ ಮೊದಲೇ ಸಿದ್ಧತೆ ಮಾಡಿಕೊಳ್ಳಿ. ಹೊಸ ಧ್ವಜ ಖರೀದಿಸಿ ಧ್ವಜರೋಹಣದ ಕಂಬದ ಅಳತೆಯನ್ನು ನೋಡಿಕೊಳ್ಳಿ. ಕಚೇರಿ ಕಟ್ಟಡವನ್ನು ದೀಪಾಲಂಕಾರ ಮಾಡಿ ಹಬ್ಬದ ರೀತಿ ಆಚರಿಸಿ. ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲೂ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ ಯಾವುದೇ ಲೋಪವಾಗದಂತೆ ಆಚರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.


ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಕ್ರೀಡಾಂಗಣವನ್ನು ಹೂ ಕುಂಡಗಳಿಂದ ಅಲಂಕರಿಸಿ. ಶಾಮಿಯಾನ, ಧ್ವನಿವರ್ಧಕ ಹಾಗೂ ಆಸನದ ವ್ಯವಸ್ಥೆ ಮಾಡಿ. ಕೋವಿಡ್ ಹಿನ್ನಲೆಯಲ್ಲಿ ಸರ್ಕಾರ ನೀಡಿರುವ ಸೂಚನೆಗಳನ್ನು ಪಾಲಿಸಿ ಸಾಮಾಜಿಕ ಅಂತರದೊಂದಿಗೆ ಆಸನದ ವ್ಯವಸ್ಥೆ ಮಾಡಿ, ಕಾರ್ಯಕ್ರಮದ ಮೊದಲು ಹಾಗೂ ನಂತರ ಕಾರ್ಯಕ್ರಮದ ಸ್ಥಳವನ್ನು ಸ್ಯಾನಿಟೈಸ್ ಮಾಡಿ ಎಂದರು.

ಕನ್ನಡ ರಾಜ್ಯೋತ್ಸವ ದಿನದಂದು ನಡೆಯುವ ಎಲ್ಲಾ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿರಬೇಕು. ರಾಷ್ಟ್ರಗೀತೆ, ನಾಡಗೀತೆ, ಪೆರೇಡ್ ನಡೆಸುವ ಪೊಲೀಸ್, ಎನ್.ಸಿ.ಸಿ, ಎನ್.ಎಸ್.ಎಸ್, ಗೃಹ ರಕ್ಷಕ ದಳ ಹಾಗೂ ಪ್ರವಾಸಿ ಮಿತ್ರರು ಪೂರ್ವಾಭ್ಯಾಸ ನಡೆಸುವಂತೆ ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಮೇಶ್, ರಾಮನಗರ ತಹಶೀಲ್ದಾರ್ ವಿಜಯ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑