Tel: 7676775624 | Mail: info@yellowandred.in

Language: EN KAN

    Follow us :


ನಗರದ ನೀರಿನ ಪೈಪಿನಲ್ಲಿ ಶವದ ಅಂಗ ಮತ್ತೊಮ್ಮೆ ಪತ್ತೆ. ಆಕ್ರೋಶಗೊಂಡ ನಗರಿಗರು

Posted date: 27 Oct, 2021

Powered by:     Yellow and Red

ನಗರದ ನೀರಿನ ಪೈಪಿನಲ್ಲಿ ಶವದ ಅಂಗ ಮತ್ತೊಮ್ಮೆ ಪತ್ತೆ. ಆಕ್ರೋಶಗೊಂಡ ನಗರಿಗರು

ಚನ್ನಪಟ್ಟಣ:ಅ/27/21. ಚನ್ನಪಟ್ಟಣ ನಗರದಲ್ಲಿ ಮತ್ತೊಮ್ಮೆ ಸದ್ದು ಮಾಡಿದ ಅಪರಿಚಿತ ಮೃತ ದೇಹದ ಅಂಗಗಳು. ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ನಗರವಾಸಿಗಳು.  ನಗರದ ಮಂಗಳವಾರಪೇಟೆಯ 10 ನೇ ಕ್ರಾಸ್ ನ ಕುಡಿಯುವ ನೀರಿನ ಪೈಪ್ ನಲ್ಲಿ ಮತ್ತೆ ಮಾಂಸದ ಮುದ್ದೆ ಮೂಳೆಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.


ಇತ್ತೀಚಿಗೆ ಕೆಲ ದಿನಗಳ ಹಿಂದೆ ಚನ್ನಪಟ್ಟಣ ನಗರದ ಕೋರ್ಟ್ ಬಳಿಯ ಓವರ್ ಹೆಡ್ ವಾಟರ್ ಟ್ಯಾಂಕ್​ನಲ್ಲಿ ಅಪರಿಚಿತ ಮಹಿಳೆ ಶವದ ಕಾಲೊಂದು ಪತ್ತೆಯಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯ ವರದಿಯೂ ಸಹ ಬಂದಿದ್ದು 20 ವರ್ಷ ವಯಸ್ಸಿನ ಯುವತಿಯ ಬಲತೊಡೆ ಎಂದು ಷರಾ ನೀಡಿದ್ದಾರೆ. ನೀರಿನ ಟ್ಯಾಂಕ್ ಬಳಿ ಮಹಿಳೆಯ ಬಟ್ಟೆ ಹಾಗೂ ಚಪ್ಪಲಿಯೂ ಸಹ ಅಂದೇ ಪತ್ತೆಯಾಗಿತ್ತು.


ಟ್ಯಾಂಕ್ ಮೇಲೇರಿ ನೀರಿಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ…! ಅಥವಾ ಕೊಲೆ ಮಾಡಿ ದೇಹವನ್ನ ತುಂಡು ತುಂಡು ಮಾಡಿ ಟ್ಯಾಂಕಿನ ಒಳಗಡೆ ಹಾಕಿರಬಹುದೆಂದು ಶಂಕಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣದ ಕೆಲ ಪ್ರದೇಶಗಳಿಗೆ ನೀರು ಪೂರೈಕೆ ಕೂಡ ಹಲವು ದಿನಗಳಿಂದ ಸ್ಥಗಿತಗೊಂಡಿದ್ದು ಟ್ರ್ಯಾಕ್ಟರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರೆ ಸಾರ್ವಜನಿಕರು ಅಲ್ಲಗಳೆದಿದ್ದಾರೆ.


ಕಳೆದ ಹಲವು ದಿನಗಳಿಂದ ಟ್ಯಾಂಕ್​ನಿಂದ ನೀರು ಪೂರೈಕೆ ಸ್ಥಗಿತಗೊಳಿಸಿ. ಎಲ್ಲೆಲ್ಲಿ ವಾಲ್ ಪೈಪ್ ಗಳಿವೆ ಅಲ್ಲಲ್ಲಿ ಪೈಪುಗಳನ್ನು‌ ಕತ್ತರಿಸಿ ದೇಹ ಒಂದು ವೇಳೆ ನೀರಿನ ಪೈಪ್ ನಲ್ಲಿ ಅಂಗಾಂಗಗಳು ಸಿಕ್ಕಿ ಹಾಕಿಕೊಂಡಿವೆಯೆಂದು ಹೊರ ತೆಗೆಯುವ ಕಾರ್ಯಾಚರಣೆ ನಡೆಸಬೇಕಾದ ಅಧಿಕಾರಿಗಳು ತಟಸ್ಥರಾಗಿದ್ದರು. ಇಂದು ಬೆಳಿಗ್ಗೆ ವಾಲ್ವ್ ಬಳಿ ಊದಿಕೊಂಡಂತಹ ಮಾಂಸದ ಮುದ್ದೆ ಕಾಣಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು ಮತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ.


ಕಳೆದ 15 ದಿನಗಳ ಹಿಂದೆ ಕೋರ್ಟ್ ಪಕ್ಕದ ಓವರ್ ಟ್ಯಾಂಕ್ ನ ಪೈಪ್ ನಲ್ಲಿ ಕಾಲು ಪತ್ತೆಯಾಗಿ ಇಲ್ಲಿನ ಜನರನ್ನ ತೀವ್ರ ಆತಂಕಕ್ಕೀಡು ಮಾಡಿತ್ತು. ಇದೀಗ ಅದರ ಕೂಗಳತೆ ದೂರದಲ್ಲಿನ ಪೈಪ್ ನಲ್ಲಿ ಮೂಳೆ ಹಾಗೂ ಮಾಂಸದ ಇಂದು ಮುದ್ದೆ ಪತ್ತೆಯಾಗಿರುವುದು ಸ್ಥಳೀಯ ವಾರ್ಡ್ ನ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.


ಜೆಸಿಬಿ ಮೂಲಕ ಪೈಪ್ ಶೋಧ ಕಾರ್ಯ ನಡೆಸಲಾಗುತ್ತಿದೆ ಸ್ಥಳಕ್ಕೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಗೂ ನಗರಸಭೆಯ ಇಂಜಿನಿಯರ್ ಹಾಗೂ ಕಾವೇರಿ ನೀರಾವರಿ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಂಸದ ಮುದ್ದೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಎಫ್ ಎಸ್ ಎಲ್ ಗೆ ಕಳುಹಿಸಿಕೊಟ್ಟಿದ್ದು, ಸ್ಥಳದಲ್ಲಿ ಕೊಳೆತ ಮಾಂಸ ವಾಸನೆಯಿಂದ ಸಾರ್ವಜನಿಕರು ಆತಂಕ್ಕೀಡಾಗಿದ್ದಾರೆ.


ಕಾರ್ಯಾಚರಣೆ ಇನ್ನು‌ ಮುಂದು ವರೆದಿದ್ದು, ಸಿಕ್ಕ ಮಾಂಸದ ಮುದ್ದೆ ಅದೇ ಮಹಿಳೆಗೆ ಸೇರಿದೆಯೋ ಅಥವಾ ಬೇರೆಯವರಿಗೆ ಸೇರಿದೆಯೋ‌ ಇನ್ನೂ ಗೊತ್ತಿಲ್ಲ.‌ ಪೋಲೀಸರ ತನಿಖೆಯಿಂದ ಮಾತ್ರವಷ್ಟೆ ಬೆಳಕಿಗೆ ಬರಬೇಕಿದೆ.


*ಕಾಲ್ಕಿತ್ತ ಇಂಜಿನಿಯರ್*

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಲಮಂಡಳಿ ಅಧಿಕಾರಿ ಗಂಗಾಧರಯ್ಯ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳ ಹಿಂದೆ ಮತ್ತೊಂದು ಟ್ಯಾಂಕಿನಲ್ಲಿ ಮಹಿಳೆಯ ಕಾಲು ಪತ್ತೆಯಾಗಿತ್ತು. ಅಂದಿನಿಂದ ಇಂದಿನವರೆಗೂ ಟ್ಯಾಂಕುಗಳನ್ನು ಪರಿಶೀಲನೆ ಮಾಡದೆ ಏನ್ಮಾಡ್ತಿದ್ದೀರಿ ಎಂದು ನಾಗರೀಕರು ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದರು. ಜೊತೆಗೆ ಈ ತಿಂಗಳು ನಮಗೆ ನೀರು ಬಿಟ್ಟಿಲ್ಲಾ, ಆದರೂ ಸಹ ಬಿಲ್ ಹೇಗೆ ನೀಡಿದ್ದೀರಿ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸುನೀಲ್ ಮತ್ತು ಹಲವು ಮುಖಂಡರು ತರಾಟೆಗೆ ತೆಗೆದುಕೊಂಡರು.


ಈ ಸಂದರ್ಭದಲ್ಲಿ ಜನರ ಪ್ರಶ್ನೆಗೆ ಉತ್ತರಿಸಲಾಗದೆ ಕರ್ನಾಟಕ ನೀರು ಸರಬರಾಜು ಮಂಡಳಿ ಎಇಇ ಗಂಗಾಧರಯ್ಯ ಸ್ಥಳದಿಂದ ಕಾಲ್ಕಿತ್ತರು.

ಪೋಲೀಸ್ ಇಲಾಖೆಯ ಎಎಸ್ಐ ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿದರೆ, ಪಿಎಸ್ಐ, ಸಿಪಿಐ ಮತ್ತು ಡಿವೈಎಸ್ಪಿ ಗಳ ಸುಳಿವೇ ಇರಲಿಲ್ಲ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑