ಮಹಿಳೆಯರು ಸ್ವಾವಲಂಬನೆ ಜೊತೆಗೆ ಆರ್ಥಿಕವಾಗಿ ಬೆಳೆಯಬೇಕು. ಸಿ ಪುಟ್ಟಸ್ವಾಮಿ
ರಾಮನಗರ: ಮಹಿಳೆಯರು ಎಂದರೆ ಅಡುಗೆ ಮನೆಗೆ ಸೀಮಿತ ಎಂಬ ಭಾವನೆ ಇಂದಿಲ್ಲ. ಸೇಕ್ರೆಡ್ ಸಂಸ್ಥೆಯಂತಹ ಹಲವಾರು ಮಹಿಳಾ ಎನ್ ಜಿ ಓ ಗಳು, ಸಹಕಾರಿ ಸಂಸ್ಥೆಗಳು, ಬ್ಯಾಂಕುಗಳು ಸೇರಿದಂತೆ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಆಕೆಯನ್ನು ಮಾನಸಿಕವಾಗಿ, ಆರ್ಥಿಕವಾಗಿ ಸದೃಢಗೊಳಿಸಿವೆ. ಹಾಗಾಗಿ ಮಹಿಳೆಯರು ಇಂದು ಪುರುಷರಷ್ಟೇ ಅಲ್ಲಾ, ಪುರುಷರಿಗಿಂತಲೂ ಒಂದು ಹೆಜ್ಜೆ ಬಹುತೇಕ ಎಲ್ಲಾ ರೀತಿಯಲ್ಲೂ ಮುಂದುವರೆದಿದ್ದಾರೆ ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ತಿಳಿಸಿದರು.
ಅವರು ಇಂದು ನಗರದ ಗುರುಭವನದಲ್ಲಿ ಸಿಂಧ್ಯಾ ರಾಮನಗರ ಕಾರ್ಯಕ್ಷೇತ್ರ ದವರು ಹಮ್ಮಿಕೊಂಡಿದ್ದ 'ಮಹಿಳಾ ಮೇಳ' ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೆನರಾ ಬ್ಯಾಂಕ್ ನ ಎಡಿಪಿಐ ವತಿಯಿಂದ ನೀಡುವ ತರಬೇತಿಗಳನ್ನು ಪಡೆದು, ಬ್ಯಾಂಕಿನಿಂದ ಸಾಲಪಡೆದು, ತಾವು ಬೆಳೆಯುವುದರ ಜೊತೆಗೆ ನಾಲ್ಕಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ನೀವುಗಳು ಸಹ ಎಲ್ಲಾ ಅವಕಾಶಗಳನ್ನು ಉಪಯೋಗಿಸಿಕೊಂಡು, ಉದ್ಯಮಿಗಳಾಗಿ ಬೆಳೆಯಬೇಕು. ಅದಕ್ಕೆ ಸಿಂಧ್ಯಾ ರಾಮನಗರ ಕಾರ್ಯಕ್ಷೇತ್ರ ಸಂಸ್ಥೆ, ಕೆನರಾ ಬ್ಯಾಂಕ್ ಜೊತೆಗೆ ರೈತರಾದ ನಾವೂ ಬೆಂಬಲ ನೀಡುತ್ತೇವೆ. ಸಾಧ್ಯವಾದಷ್ಟೂ ರೈತೋತ್ಪಗಳನ್ನೇ ತಯಾರಿಸುವ ಬೃಹತ್ ಕಾರ್ಖಾನೆಗಳಾಗಬೇಕು ಎಂದು ನೆರೆದಿದ್ದ ಮಹಿಳೆಯರಿಗೆ ಕರೆ ನೀಡಿದರು.
ಬೆಂಗಳೂರಿನ ಬದುಕು ಸಂಸ್ಥೆಯ ಪ್ರಾಂಶುಪಾಲರಾದ ಕಿರಣಕುಮಾರಿ ಯವರು ಮಾತನಾಡಿ, ಮಹಿಳೆಯರು ಇಂದು ಎಲ್ಲಾ ಅಡೆತಡೆಗಳನ್ನು ಮೀರಿ ಬೆಳೆದಿದ್ದಾರೆ. ಅವರು ಸ್ಪರ್ಧಿಸದ ಕ್ಷೇತ್ರವಿಲ್ಲ. ಮಾಡದ ಉದ್ಯೋಗವಿಲ್ಲಾ, ಕೆಲವು ಕಡೆ ಈಗಲೂ ಸಹ ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ, ವರದಕ್ಷಿಣೆ ಕಿರುಕುಳದಂತಹ ಪೈಶಾಚಿಕ ಕೃತ್ಯಗಳು ನಡೆಯುತ್ತಿವೆ. ಎಲ್ಲಾ ಗಂಡಸರೂ ಈ ರೀತಿ ಇಲ್ಲದೆ ಇರಬಹುದು. ಆದರೆ ಕೆಲ ಗಂಡಸರು ಮಾಡುತ್ತಿರುವುದಕ್ಕೆ ಸಾಕ್ಷಿಗಳಿವೆ. ಇದನ್ನು ತಡೆಗಟ್ಟಲು ನಾವೆಲ್ಲರೂ ಒಗ್ಗಟ್ಟಾಗಬೇಕಿದೆ. ಯಾವುದೇ ಹೆಣ್ಣಿಗೆ ತೊಂದರೆಯಾದರೂ ನನಗೆ ತೊಂದರೆ ಆಗಿದೆ ಎಂದೇ ಭಾವಿಸಿ ಬೀದಿಗಿಳಿದು ಹೋರಾಟ ಮಾಡಬೇಕು. ಆಗ ಮಾತ್ರ ನಾವು ಸಮಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದರು.
ಬಿಡದಿಯ ಎಡಿಪಿಐ ಉಪನ್ಯಾಸಕರಾದ ದೇವೇಂದ್ರಪ್ಪ ಮಾತನಾಡಿ, ನಮ್ಮ ಸಂಸ್ಥೆಯು ಒಂದು ವಾರದ ತರಬೇತಿಯಿಂದ, ಆರು ತಿಂಗಳುಗಳ ಕಾಲದ ವಿವಿಧ ರೀತಿಯ ಇನ್ನೂರಕ್ಕೂ ಹೆಚ್ಚಿನ ತರಬೇತಿಯನ್ನು ನೀಡುತ್ತದೆ. ತರಬೇತಿಯನ್ನು ಪಡೆದು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ನಮ್ಮದೇ ಕೆನರಾ ಬ್ಯಾಂಕಿನ ವತಿಯಿಂದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಮಹಿಳೆ ಎಂದು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುತ್ತಾಳೋ ಅಂದು ನಮ್ಮ ದೇಶವೇ ಆರ್ಥಿಕವಾಗಿ ಸದೃಢವಾಗುತ್ತದೆ. ಹಾಗಾಗಿ ಸಂಘಸಂಸ್ಥೆಗಳ ಸದಸ್ಯರುಗಳು ಬಂದು ತರಬೇತಿ ಪಡೆಯಬೇಕು ಎಂದು ಮಹಿಳಾ ಸದಸ್ಯರಿಗೆ ಕರೆ ನೀಡಿದರು.
ಸಾಮಾಜಿಕ ಕಾರ್ಯಕರ್ತ ಗೋ ರಾ ಶ್ರೀನಿವಾಸ ಮಾತನಾಡಿ, ಭಾರತೀಯರಾದ ನಾವು ಪುರಾಣ ಮತ್ತು ಇತಿಹಾಸದಲ್ಲೂ ಹೆಣ್ಣಿಗೆ ಪೂಜನೀಯ ಸ್ಥಾನ ನೀಡಿದ್ದೇವೆ. ಇಂದು ಆಕೆ ಅಬಲೆಯಲ್ಲಾ, ಸಬಲೆ. ಆಕೆ ಒಬ್ಬ ದಿಟ್ಟ ಮಹಿಳೆಯಾಗಿ, ಸಾಮಾನ್ಯ ಮಹಿಳೆಯಿಂದ ಹಿಡಿದು ರಾಷ್ಟ್ರಪತಿ ಹುದ್ದೆಯ ತನಕ, ಸಾಮಾನ್ಯ ಕಾರಕೂನ ಹುದ್ದೆಯಿಂದ ಗಗನಯಾತ್ರಿಯ ತನಕ ಆಕೆ ಬೆಳೆದು ನಿಂತಿದ್ದಾಳೆ. ಗ್ರಾಮೀಣ ಮಹಿಳೆಯರು ಆ ಸಾಲಿನಲ್ಲಿ ನಿಲ್ಲಬೇಕು. ಅದರಲ್ಲೂ ರೈತ ಮಹಿಳೆಯರಿಗೆ ವಿಶೇಷವಾಗಿ ಪರಿಸರ ಸ್ನೇಹಿ, ವ್ಯವಸಾಯಕ್ಕೆ ಸಂಬಂಧಿಸಿದ ತರಬೇತಿಗಳನ್ನು ನೀಡಿ, ಕೃಷಿಯಿಂದಲೇ ಆಕೆ ಬದುಕು ಕಟ್ಟಿಕೊಳ್ಳಲು ಅನುವು ಮಾಡಿಕೊಡಬೇಕು. ಆಗಲೇ ನಮ್ಮ ಪ್ರಕೃತಿ ಸಮತೋಲನ ಕಾಯ್ದುಕೊಳ್ಳಲು, ಮಹಿಳೆಯರು ತಮ್ಮ ಆರೋಗ್ಯದ ಜೊತೆಗೆ ಆರ್ಥಿಕವಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಸೇಕ್ರೆಡ್ ಸಂಸ್ಥೆಯ ಸಿಇಓ ಮೇರಿ ಫಿಲೋಮಿನಾ ರವರು ಪ್ರಾಸ್ತಾವಿಕ ನುಡಿಗಳನ್ನಾಡಿ, ವಿಶ್ವದಲ್ಲೇ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಬಲೀಕರಣವಾಗಬೇಕು. ಸಂಘಟನೆಗಳ ಮೂಲಕ ಬಲಿಷ್ಠರಾಗಬೇಕು ಎಂದರು. ಗ್ರಾಮಾಂತರ ಎಎಸ್ಐ ರುದ್ರೇಶ್ ರವರು ಮಹಿಳೆಯರು ಒಡವೆಗಳನ್ನು ಪ್ರದರ್ಶನ ಮಾಡಬಾರದು. ಅದರಿಂದ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ, ಪೋಲೀಸರು ಜನಸ್ನೇಹಿಯಾಗಿದ್ದು ಯಾವುದೇ ಹಿಂಜರಿಕೆ ಇಲ್ಲದೆ, ದೂರು ನೀಡಿ ನ್ಯಾಯ ಕೋರಬೇಕು ಎಂದರು. ಹುಣಸನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಅಚ್ಚಲುದೊಡ್ಡಿ ಪುಟ್ಟಸ್ವಾಮಿ ರವರಿಗೆ ಸನ್ಮಾನಿಸಲಾಯಿತು. ಹಲವಾರು ಮಹಿಳಾ ಸಂಘಗಳು ತಾವೇ ತಯಾರಿಸಿದ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡಿದರು. ರಾಮನಗರ ತಾಲ್ಲೂಕಿನ ಹಲವಾರು ಗ್ರಾಮಗಳ ಮಹಿಳಾ ಸಂಘಗಳ ಪದಾಧಿಕಾರಿಗಳು, ಸದಸ್ಯೆಯರು ಭಾಗವಹಿಸಿದ್ದರು. ಅತಿ ಹೆಚ್ಚು ಸಾಧನೆ ಮಾಡಿದ ಮಹಿಳಾ ಸಂಘಗಳ ಪದಾಧಿಕಾರಿಗಳಿಗೆ ನೆನಪಿನ ಕಾಣಿಕೆ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳು ನೃತ್ಯ ಮಾಡುವ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು