Tel: 7676775624 | Mail: info@yellowandred.in

Language: EN KAN

    Follow us :


ಮಾಹಿತಿ ನೀಡದ ದಶವಾರ ಗ್ರಾಮ ಪಂಚಾಯತಿ ಕಾರ್ಯದರ್ಶಿಗೆ ದಂಡ ವಿಧಿಸಿದ ಮಾಹಿತಿ ಆಯೋಗ. ಮಾಹಿತಿ ನೀಡದೆ ಸತಾಯಿಸುವ ಅಧಿಕಾರಿಗಳಿಗೆ ಎಚ್ಚರಿಕೆ ಗಂಟೆ

Posted date: 25 Nov, 2021

Powered by:     Yellow and Red

ಮಾಹಿತಿ ನೀಡದ ದಶವಾರ ಗ್ರಾಮ ಪಂಚಾಯತಿ ಕಾರ್ಯದರ್ಶಿಗೆ ದಂಡ ವಿಧಿಸಿದ ಮಾಹಿತಿ ಆಯೋಗ. ಮಾಹಿತಿ ನೀಡದೆ ಸತಾಯಿಸುವ ಅಧಿಕಾರಿಗಳಿಗೆ ಎಚ್ಚರಿಕೆ ಗಂಟೆ

ತಾಲ್ಲೂಕಿನ ದಶವಾರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಹಾಗೂ ಮಾಹಿತಿ ಹಕ್ಕು ಅಧಿಕಾರಿಯಾದ ಶ್ರೀಕಂಠ ರವರಿಗೆ 'ಸಾಮಾಜಿಕ, ಲೆಕ್ಕಪರಿಶೋಧನೆಯ ಸಭೆಯ ಕರಪತ್ರ ಮತ್ತು ವಿಧಿಯನ್ನು' ನೀಡುವಂತೆ ಕೋರಿ ಹೊಸೂರುದೊಡ್ಡಿ ಗ್ರಾಮದ ಹೆಚ್ ಎಂ ಶಿವಮಾದೇಗೌಡ ಎಂಬುವವರು ಮಾಹಿತಿ ಹಕ್ಕಿನಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಸಕಾಲಕ್ಕೆ ಮಾಹಿತಿ ನೀಡದ್ದರಿಂದ ಕರ್ನಾಟಕ ಮಾಹಿತಿ ಆಯೋಗವು ಐದು ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿ ಆದೇಶಿಸಿದೆ.


ಹೆಚ್ ಎಂ ಶಿವಮಾದೇಗೌಡ ರವರು ಕಾರ್ಯದರ್ಶಿ ಹಾಗೂ ಮಾಹಿತಿ ಅಧಿಕಾರಿಯವರಿಗೆ 31/08/2020 ರಂದು ಚನ್ನಪಟ್ಟಣ ತಾಲ್ಲೂಕಿನ ಮಳೂರು ಹೋಬಳಿಯ ದಶವಾರ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಸಾಮಾಜಿಕ, ಲೆಕ್ಕಪರಿಶೋಧನೆಯ ಸಭೆಯ ಕರಪತ್ರ ಮತ್ತು ವಿಧಿಯನ್ನು ಕೋರಿ ಅರ್ಜಿ ಸಲ್ಲಿಸಿದರು. ಮಾಹಿತಿ ನೀಡದ್ದರಿಂದ ಅವರು 03/10/2020 ರಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾದ ಮಹೇಶ್ ರವರಿಗೆ ಮಾಹಿತಿ ಕಾಯ್ದೆ 19(1)ರನ್ವಯ ಪ್ರಥಮ ಮೇಲ್ಮನವಿ ಸಲ್ಲಿಸಿದರು. ತದನಂತರ ಏರಡನೇ ಮೇಲ್ಮನವಿಯನ್ನು ಮಾಹಿತಿ ಹಕ್ಕು ಕಾಯ್ದೆ ನಿಯಮ 19(3) ರನ್ವಯ 21/01/2021 ರಂದು ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ಆಯೋಗವು 12/02/2021 ರಂದು ಉಭಯತ್ರರಿಗೂ ನೋಟೀಸ್ ಜಾರಿಮಾಡಿತ್ತು.


ವಿಚಾರಣೆ ವೇಳೆ ಅಧಿಕಾರಿಯು 22/10/2021 ರಂದು ನೋಂದಾಯಿತ ಅಂಚೆಯ ಮೂಲಕ ಹೊದಿಕೆ ಪತ್ರದೊಂದಿಗೆ ಮಾಹಿತಿ ನೀಡಿರುವುದಾಗಿ ಹೇಳಿಕೆ ನೀಡಿದ್ದು, ಮೇಲ್ಮನವಿದಾರರು ನಾನು ಕೋರಿರುವ ಮಾಹಿತಿಯಲ್ಲಿ ಕರಪತ್ರ ಮಾತ್ರ ಒದಗಿಸಲಾಗಿದ್ದು, ನಡಾವಳಿಯನ್ನು ಒದಗಿಸಿಲ್ಲಾ ಎಂದು ವಿಚಾರಣಾಧಿಕಾರಿಗಳಿಗೆ ತಿಳಿಸಿದರು. ಮೇಲ್ಮನವಿದಾರರ ಆಕ್ಷೇಪಣೆಗೆ ಮೇರೆಗೆ ಅಧಿಕಾರಿಯು ನಡಾವಳಿಯನ್ನು ಒದಗಿಸಲು ಕಾಲಾವಕಾಶ ಕೋರಿದ್ದರ ಹಿನ್ನೆಲೆಯಲ್ಲಿ ವಿಚಾರಾಣಾಧಿಕಾರಿಗಳು ಕಾಲಾವಕಾಶವನ್ನು ನೀಡಿದ್ದರು.


ಮೇಲ್ಮನವಿದಾರರ ಆಕ್ಷೇಪಣೆಯನ್ನು ಪುರಸ್ಕರಿಸಿದ ವಿಚಾರಣಾಧಿಕಾರಿಗಳು ಹದಿನೈದು ದಿನಗಳೊಳಾಗಿ ಉಚಿತವಾಗಿ 2019/20 ಅವಧಿಯ ನಡಾವಳಿಯನ್ನು ಮುಂದಿನ ವಿಚಾರಣೆ ವೇಳೆ ಖುದ್ದು ನೀಡಬೇಕೆಂದು 2005 ರ ಕಲಂ 18(3) (ಎ) ಮತ್ತು (ಡಿ) ಅನ್ವಯ ಆದೇಶಿಸಿತ್ತು. ಕಾಯ್ದೆಯ ಕಲಂ 7ನೇ ಪ್ರಕರಣದ (1) ನೇ ಉಪ ಪ್ರಕರಣದಲ್ಲಿ ನಿರ್ದಿಷ್ಟ ಪಡಿಸಿದ ಸಮಯದೊಳಗೆ ಮಾಹಿತಿಯನ್ನು ಒದಗಿಸದೆ ಅಪೂರ್ಣ ಮಾಹಿತಿ ಇರುವುದರಿಂದ ಆಯೋಗವು ಗಂಭಿರವಾಗಿ ಪರಿಗಣಿಸಿ ಮಾಹಿತಿ ಹಕ್ಕು ಅಧಿನಿಯಮ 2005ರ ಕಲಂ 20(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ದಶವಾರ ಗ್ರಾಮ ಪಂಚಾಯತಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಕಾರ್ಯದರ್ಶಿ ಶ್ರೀಕಂಠ ರವರಿಗೆ  5,000 ರೂಪಾಯಿಗಳ ದಂಡ ವಿಧಿಸಿ, ದಂಡದ ಮೊತ್ತವನ್ನು 2021 ರ ಡಿಸೆಂಬರ್ ಮತ್ತು 2022 ರ ಜನವರಿ ತಿಂಗಳುಗಳಲ್ಲಿನ ಸಂಬಳದಲ್ಲಿ ತಲಾ 2,500 ರೂ ಕಡಿತಗೊಳಿಸಿ ಸರ್ಕಾರದ ಲೆಕ್ಕ ಶೀರ್ಷಿಕೆ RTI Act ಖಾತೆಗೆ ಜಮಾ ಮಾಡಿ ಮೇಲ್ಮನವಿದಾರ ಹೆಚ್ ಎಂ ಶಿವಮಾದೇಗೌಡ ರಿಗೆ ಮತ್ತು ಜಮಾ ಮಾಡಿದ ರಶೀತಿಯೊಂದಿಗೆ ಅನುಪಾಲನಾ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕೆಂದು ಅಭಿವೃದ್ಧಿ ಅಧಿಕಾರಿಯಾದ ಮಹೇಶ್ ರವರಿಗೆ 2005 ರ ಕಲಂ 19(8)(ಎ) ಅನ್ವಯ ಆದೇಶಿಸಿರುವ ಜೊತೆಗೆ ದಂಡ ಪ್ರಕ್ರಿಯೆ ಬಾಕಿ ಇರುವುದರಿಂದ ಮುಂದಿನ ಕ್ರಮಕ್ಕಾಗಿ ಪ್ರಕರಣದ ಕಡತವನ್ನು ಬೆಂಗಳೂರಿನ ಕಛೇರಿಗೆ ವರ್ಗಾಯಿಸಲಾಗಿದೆ ಎಂದು ಮಾಹಿತಿಯ ಆದೇಶದಲ್ಲಿ ತಿಳಿಸಿದೆ.


ಗೋ ರಾ ಶ್ರೀನಿವಾಸ...

ಮೊ9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑