ಉತ್ತಮ ಚಿಂತನೆಗಳು ವ್ಯಕ್ತಿತ್ವ ರೂಪಿಸುತ್ತದೆ: ಜವರೇಗೌಡ ಟಿ
ರಾಮನಗರ, ಡಿ.01/21. ಸಮಾಜದಲ್ಲಿ ಪ್ರತಿಯೊಬ್ಬರು ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ಒಳ್ಳೆಯ ಪ್ರಜೆಯಾಗಬೇಕು. ಇದಕ್ಕೆ ನಮ್ಮ ಆಲೋಚನೆಗಳು ಹಾಗೂ ಚಿಂತನೆಗಳು ಉತ್ತಮ ರೀತಿಯಲ್ಲಿ ಇರಬೇಕು ಎಂದು ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳಿಗೆ ಆಯೋಜಿಸಲಾಗಿದ್ದ, ಯೋಗ ಶಿಬಿರ, ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಮನಃ ಪರಿವರ್ತನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಕಸ್ಮಿಕ ದುರ್ಘಟನೆ, ತಪ್ಪು ಆಲೋಚನೆ, ಗಳಿಂದ ಬಂದಿಗಳು ಕಾರಾಗೃಹ ಸೇರಿರುತ್ತಾರೆ. ಬಂದಿಗಳು ಕಳೆದು ಹೋದ ಘಟನೆಗಳ ಬಗ್ಗೆ ಚಿಂತಿಸುವ ಬದಲು ಕಾರಾಗೃಹದಿಂದ ಹೊರ ಹೋದ ನಂತರ ಸಮಾಜದಲ್ಲಿ ಜೀವನವನ್ನು ಕಟ್ಟಿಕೊಂಡು ಒಳ್ಳೆಯ ಪ್ರಜೆಯಾಗುವ ಬಗ್ಗೆ ಯೋಚನೆ ಮಾಡಬೇಕು ಎಂದರು.
ಕಾರಾಗೃಹಗಳು ಮನಃ ಪರಿವರ್ತನಾ ಕೇಂದ್ರವಾಗಿವೆ. ಇಲ್ಲಿ ಬಂದಿಗಳಿಗೆ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಿಕೊಡಲಾಗುತ್ತದೆ. ಯೋಗ, ಧ್ಯಾನಗಳು ಮನಸ್ಸಿನಲ್ಲಿ ಒಳ್ಳೆಯ ಆಲೋಚನೆಗಳನ್ನು ವೃದ್ಧಿಸುತ್ತದೆ. ಮನಸ್ಸಿನ ಮೇಲೆ ಹಿಡಿತ ಹೊಂದಲು ಸಹಕರಿಸುತ್ತದೆ. ನಿತ್ಯ ಯೋಗಾಭ್ಯಾಸದಿಂದ ಆರೋಗ್ಯ ಹಾಗೂ ರೋಗ ನಿರೋಧಕ ಶಕ್ತಿ ಸಹ ಹೆಚ್ಚುತ್ತದೆ. ಇಶಾ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಯೋಗ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.
ಕಾರಾಗೃಹದ ಜೀವನದ ನಂತರ ಸಮಾಜದ ಮುಖ್ಯವಾಹಿನಿಗೆ ಬಂದಿಗಳನ್ನು ಕರೆತರಲು ಆರ್ಥಿಕ ಚಟುವಟಿಕೆಗಳಾದ ಹೊಲಿಗೆ, ವಿದ್ಯುನ್ಮಾನ ವಸ್ತುಗಳ ರಿಪೇರಿ, ಪ್ಲಂಬಿಂಗ್ ಸೇರಿದಂತೆ ವಿವಿಧ ತರಬೇತಿಗಳನ್ನು ನೀಡಲಾಗುವುದು. ತರಬೇತಿ ಪಡೆದು ಕೌಶಲ್ಯತೆ ಹೆಚ್ಚಿಸಿಕೊಳ್ಳಿ. ಇದರಿಂದ ಮುಂದೆ ಸ್ವ ಉದ್ಯೋಗ ಕೈಗೊಂಡು ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಿ ಜೀವನ ನಡೆಸಬಹುದು ಎಂದು ಹೇಳಿದರು.
ಇಶಾ ಫೌಂಡೇಶನ್ನ ಯೋಗ ತರಬೇತಿ ಉಪನ್ಯಾಸಕ ಎಸ್. ರಾಘವೇಂದ್ರ ಅವರು ಮಾತನಾಡಿ ಕಾರಾಗೃಹದಲ್ಲಿ ಯೋಗ ಶಿಬಿರ ನಡೆಸುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಪ್ರತಿಯೊಬ್ಬರು ಯೋಗವನ್ನು ರೂಡಿಸಿಕೊಂಡು ಅಭ್ಯಾಸ ಮಾಡಿದರೆ ಆರೋಗ್ಯದಲ್ಲಿ ಉಂಟಾಗುವ ಪೂರಕ ಬದಲಾವಣೆಗಳನ್ನು ನೋಡಬಹುದು. ಯೋಗ ರೋಗ ನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪರಂಧಾಮ ಓ, ಅಮೃತ ವಿಕಲಚೇತನರ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ನಿರಂಜನ, ಸಂಚಾಲಕ ಗೋವಿಂದರಾಜು, ಜಿಲ್ಲಾ ಕಾರಾಗೃಹ ಅಧೀಕ್ಷಕ ಎಂ.ಹೆಚ್. ಆಶೇಖಾನ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು