ಕಿರಿಯ ಸಹಾಯಕ ಅಭಿಯಂತರ ಅಮಾನತ್ತು ಮಾಡಿ ವಾರದ ನಂತರ ವಾಪಸ್ಸು
ಚನ್ನಪಟ್ಟಣ: ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಫಲರಾದ ಆರೋಪ ಮೇರೆಗೆ ಚನ್ನಪಟ್ಟಣದ ಕಿರಿಯ ಅಭಿಯಂತರರಾದ ಶ್ರೇಯಸ್ ಎಂ ಪಿ ಅಮಾನತ್ತುಗೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಶ್ರೇಯಸ್ ಎಂ.ಪಿ. ಕಿರಿಯ ಅಭಿಯಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚನ್ನಪಟ್ಟಣ ಇವರೇ ಅಮಾನತ್ತುಗೊಂಡಿದ್ದು, ದೇಶದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಮರ್ಪಕವಾಗಿ ಗ್ರಾಮೀಣ ಮಟ್ಟದಲ್ಲಿ ಕಾರ್ಯ ರೂಪಕ್ಕೆ ತರುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ನಾಗರೀಕ ಸೇವಾ ನಿಯಮ ಉಲ್ಲಂಘನೆ ಮಾಡಿ ಕರ್ತವ್ಯ ಲೋಪಗಳಿಸಿದ ಆರೋಪದ ಮೇರೆಗೆ ರಾಮನಗರ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಇಕ್ರಂ ರವರು ಅಮಾನತ್ತು ಆದೇಶ ಹೊರಡಿಸಿದ್ದಾರೆ.
ಚನ್ನಪಟ್ಟಣ ತಾಲೂಕಿನ ವಾಲೇತೋಪು, ಹೊಟ್ಟಿಗನಹೊಸಹಳ್ಳಿ, ಗಂಗೇದೊಡ್ಡಿ, ವಡ್ಡರದೊಡ್ಡಿ, ಗ್ರಾಮಗಳಲ್ಲಿ ಭಾರತ ಸರ್ಕಾರದ ಜಲ ಜೀವನ ಯೋಜನೆಯಡಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ವೀಕ್ಷಣೆಗೆಂದು ಕಳೆದ ನವೆಂಬರ್ 24 ರಂದು ರಾಮನಗರ ಸಿಇಓ ತಂಡ ಸ್ಥಳ ಪರಿಶೀಲನೆ ನಡೆಸಿದಾಗ ಈ ಗ್ರಾಮಗಳಲ್ಲಿ 7 ಮನೆಗಳಿಗೆ ವಿತರಣಾ ಕೊಳವೆಯಿಂದ ನಳ ಸಂಪರ್ಕ ಕಲ್ಪಿಸುವ ಬದಲಾಗಿ ಏರು ಕೊಳವೆ ಮೂಲಕ ನಳ ಸಂಪರ್ಕ ಮೂಲಕ ಸಂಪರ್ಕ ಕಲ್ಪಿಸಿರುವುದು. ಸಂಪರ್ಕದ ವೇಳೆ ಪ್ಲಾಟ್ ಫಾರಂ ಸರಿಯಾಗಿ ಮಾಡದಿರುವುದು. ಸಮರ್ಪಕವಾಗಿ ಡಕ್ ನಿರ್ಮಾಣ ಮಾಡದಿರುವುದು ಸೇರಿದಂತೆ ಕಾಮಾಗಾರಿಯಲ್ಲಿ ಲೋಪಗಳು ಕಂಡು ಬಂದ ಹಿನ್ನಲೆಯಲ್ಲಿ ನವೆಂಬರ್ 25 ರಂದೆ ಶ್ರೇಯಸ್ ರನ್ನ ಅಮಾನತ್ತು ಪಡಿಸಿ ಆದೇಶ ಮಾಡಲಾಗಿದೆ.
ಅಮಾನತ್ತುಗೊಂಡಿದ್ದ ಶ್ರೇಯಸ್ ನನ್ನು ಕಳೆದ ಫೆಬ್ರವರಿ 10, 2021 ರಂದೆ ಚನ್ನಪಟ್ಟಣದಿಂದ ರಾಮನಗರ ಯೋಜನಾ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು ಕೂಡ ಚನ್ನಪಟ್ಟಣದಲ್ಲೆ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಅಮಾನತ್ತು ವಾಪಸ್ಸು;
ಅಮಾನತ್ತುಗೊಂಡಿದ್ದ ಕಿರಿಯ ಅಭಿಯಂತರ ಶ್ರೇಯಸ್ ಕೂಡಲೆ ಕೆಲಸಕ್ಕೆ ಹಾಜರಾಗುವಂತೆ ಮತ್ತೊಮ್ಮೆ ಸಿಇಓ ಡಿ.4 ರಂದು ಮರು ಆದೇಶ ಹೊರಡಿಸಿದ್ದಾರೆ. ಜಲ ಜೀವನ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಸಮರ್ಪಕವಾಗಿ ನಡೆಸಿಲ್ಲ ಎಂಬ ಆರೋಪದ ಮೇರೆಗೆ ಅಮಾನತ್ತು ಮಾಡಲಾಗಿತ್ತು. ಕಾಮಗಾರಿ ಬಗ್ಗೆ ಇಲಾಖೆ ವತಿಯಿಂದ ತನಿಖೆ ನಡೆಸಿ ನಂತರ ಕ್ರಮಕ್ಕೆ ಆದೇಶಿಸಿದ್ದಾರೆ. ತನಿಖೆ ನಡೆಸಿದ ಮೇಲೆ ಕ್ರಮಕೈಗೊಳ್ಳಲಾಗುವುದು ಅಲ್ಲಿಯ ವರೆಗೆ ಸದ್ಯಕ್ಕೆ ಅಮಾನತ್ತು ಆದೇಶವನ್ನ ಹಿಂದಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು