ಸಿಎಂ ಮುಂದೆಯೇ ಸಚಿವ, ಎಂಪಿ, ಎಂಎಲ್ಸಿ ಜಟಾಪಟಿ
ರಾಮನಗರ: ಅದೂ ಗೌರವ ತರುವ ಸಭೆ. ನಾಡದೊರೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಆಗಮಿಸಿ ಅಭಿವೃದ್ಧಿಗೆ ಒತ್ತು ನೀಡುವ ಸಭೆ. ಇಂತಹ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಸಂಸದ ಡಿ.ಕೆ.ಸುರೇಶ್ ಮತ್ತು ಉನ್ನತ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ಜೊತೆಗೆ ವಿಧಾನ ಪರಿಷತ್ ಸದಸ್ಯ ಎಸ್ ರವಿ ರವರು ಪರಸ್ಪರ ಕೈ ಕೈ ಮಿಲಾಯಿಸಲು ಮುಂದಾದ ಘಟನೆ ರಾಮನಗರದಲ್ಲಿಂದು ನಡೆಯಿತು.
ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿಂದು ನೆನೆಗುದಿಗೆ ಬಿದ್ದಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ ಮತ್ತು ವಿವಿ ಅಭಿವೃಧ್ದಿ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ ನೆರೆವೇರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿಯೇ ಈ ಘಟನೆ ನಡೆದು ಇಡೀ ಜಿಲ್ಲೆಗೆ ಇದು ಅಗೌರವ ತಂದಂತಹಸಭೆ ಎಂದು ಜನಸಾಮಾನ್ಯರ ಮಾತಾಗಿದೆ.
ವೇದಿಕೆ ಕಾರ್ಯಕ್ರಮದ ಆರಂಭದಲ್ಲೇ ದಲಿತ ಪ್ರಮುಖರು ಪ್ರತಿಭಟನೆ ನಡೆಸಿ ಅಂಬೇಡ್ಕರ್ ಮತ್ತು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶ್ರಮಿಸಿದ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಮುಖಂಡರನ್ನು ಜಿಲ್ಲಾಡಳಿತ ಕಡೆಗಣಿಸಿದ್ದು, ಕಾಟಾಚಾರಕ್ಕಾಗಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತಿಯ ಪಾಲು ಹೆಚ್ಚಿದೆ. ಅವರನ್ನು ಕಡೆಗಣಿಸಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ತದ ನಂತರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ತಮ್ಮ ಭಾಷಣದಲ್ಲಿ ಈ ವಿಚಾರವನ್ನು ಉಲ್ಲೇಖಿಸಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದಿದ್ಧಾರೆ. ಏನು ತಪ್ಪಾಗಿದೆ ಎಂದು ಘೋಷಣೆ ಕೂಗುತ್ತಿದ್ದೀರಿ. ನಾಲ್ಕು ಜನ ಕಟ್ಟಿಕೊಂಡು ಸಭೆಗೆ ಅಡ್ಡಿಪಡಿಸುತ್ತಿದ್ದೀರಿ. ಯಾರಪ್ಪ ಗಂಡ್ಸು ! ಕೆಲಸ ಮಾಡಿ ಗಂಡಸ್ತನ ತೋರಿಸ್ರೀ ಎಂದರು. ಈ ಮಾತುಗಳಿಗೆ ಕೆರಳಿದ ಸಂಸದ ಸುರೇಶ್ ಅಶ್ವತ್ಥನಾರಾಯಣರತ್ತ ಕೋಪದಿಂದ ಮಾತನಾಡುತ್ತಾ ಅಶ್ವಥ್ ನಾರಾಯಣ ಕಡೆಗೆ ನುಗ್ಗಿ ಬಂದರು.
ಈ ಸಂದರ್ಭದಲ್ಲಿ ಇಬ್ಬರ ನಡುವೆ ಮಾತಿನ ಜಟಾಪಟಿ ನಡೆಯಿತು. ಸಂಸದರ ಹಿಂದೆಯೇ ಆಸನದಿಂದ ಎದ್ದು ಬಂದ ಎಂ.ಎಲ್.ಸಿ ಎಸ್ ರವಿ ಸಹ ಅಶ್ವಥನಾರಾಯಣರ ಮೇಲೆ ಮುಗಿಬಿದ್ದರು. ಸಚಿವರು ಮಾತನಾಡುತ್ತಿದ್ದ ಮೈಕ್ ಕಿತ್ತುಕೊಂಡು ಮಾತನಾಡಲು ಯತ್ನಿಸಿದರು. ಸಚಿವರು ಮೈಕ್ ಕೊಡದ ಕಾರಣ ಎಂಎಲ್ಸಿ ರವಿ ರವರು ಸಚಿವರ ಮುಂದಿದ್ದ ಮೈಕ್ ಕಿತ್ತು ಬಿಸಾಡಿದರು. ತಕ್ಷಣ ಎಸ್ ಪಿ ಗಿರೀಶ್ ಮತ್ತು ತಂಡ ಪ್ರವೇಶಿಸಿ ಇಬ್ಬರು ನಾಯಕರು ಕೈ ಕೈ ಮಿಲಾಯಿಸುವುದನ್ನು ತಪ್ಪಿಸಿದರು. ಅವರವರ ಆಸನ ಕ್ಕೆ ಕರೆದೊಯ್ದರು.
ತದ ನಂತರ ಎಸ್.ರವಿ ಮತ್ತು ಡಿ.ಕೆ.ಸುರೇಶ್ ವೇದಿಕೆಯಲ್ಲೇ ಧರಣಿ ಕುಳಿತರು. ಸ್ವತಃ ಮುಖ್ಯಮಂತ್ರಿಗಳು ಅವರನ್ನು ಸಮಾಧಾನ ಪಡಿಸಿದರು. ಅಲ್ಲಿಗೆ ಅಶ್ವಥನಾರಾಯಣ ಅವರ ಭಾಷಣ ಮೊಟಕಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಮಾತನಾಡಿ ರಾಜಕೀಯವನ್ನು ಮಾತು, ಕೋಪದ ಮೂಲಕ ತೋರಿಸುವುದಲ್ಲ. ನಾವು ಜನಪರವಾಗಿ ಕೆಲಸ ಮಾಡಬೇಕೇ ಹೊರತು ಭಿನ್ನಾಭಿಪ್ರಾಯವನ್ನೇ ದೊಡ್ಡದು ಮಾಡಬಾರದು. ಜನರು ಮುಗ್ದರು. ನಮ್ಮ ವರ್ತನೆಗಳು ಅವರ ಮೇಲೆ ಪರಿಣಾಮ ಬೀರುತ್ತದೆ ಎಂದು ಇಬ್ಬರಿಗೂ ಕಿವಿಮಾತು ಹೇಳಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು