ದಲಿತರ ನಡೆ ಯೋಗೇಶ್ವರ್ ಕಡೆ ಕಾಂಗ್ರೆಸ್ ಗೆ ರಾಜಿನಾಮೆ ಘೋಷಿಸಿದ ಅಕ್ಕೂರು ಶೇಖರ್
ಚನ್ನಪಟ್ಟಣ: ಮೇ 14 22. ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ನಲ್ಲಿ ದಲಿತರಿಗೆ ಇದುವರೆಗೂ ಸ್ಥಾನಮಾನ ನೀಡದೆ ಇರುವುದರಿಂದ ಜೊತೆಗೆ ಗುಂಪುಗಾರಿಕೆಯಿಂದ ನೊಂದು ನಾವು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸಲು ಮುಂದಾಗಿದ್ದೇವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ರಾಮನಗರ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಎಸ್ ಸಿ ಶೇಖರ್ (ಅಕ್ಕೂರು ಶೇಖರ್) ಘೋಷಿಸಿದರು.
ಅವರು ಶನಿವಾರ ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ತಾಲ್ಲೂಕು ಕಾಂಗ್ರೆಸ್ ನಲ್ಲಿ ನಾಲ್ಕೈದು ಗುಂಪುಗಳಿವೆ. ಈ ಗುಂಪುಗಾರಿಕೆಯಲ್ಲಿ ಹೊಂದಾಣಿಕೆ ಇಲ್ಲದ ಕಾರಣ ತಾಲ್ಲೂಕಿನ ದಲಿತರಿಗೆ ಅದರಲ್ಲೂ ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭವಾಗಿರುವ ದಲಿತರನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ನೆಪಮಾತ್ರಕ್ಕೆ ಹುದ್ದೆ ನೀಡುತ್ತಾರೆಯೇ ವಿನಹ ಅಧಿಕಾರ ಮಾತ್ರ ಶೂನ್ಯ. ಇದು ವೇದಿಕೆ ಹಂಚಿಕೊಳ್ಳುವ ಸಂದರ್ಭದಲ್ಲಿಯೂ ಮುಂದುವರೆದು ಅಲ್ಲಿಯೂ ಕಡೆಗಣಿಸುತ್ತಾರೆ. ಪ್ರತಿ ಚುನಾವಣೆಯಲ್ಲೂ ಹೊಸಹೊಸ ಅಭ್ಯರ್ಥಿಗಳನ್ನು ಕರೆತಂದು ಚುನಾವಣೆಗೆ ನಿಲ್ಲಿಸಿ ಸೋಲಿಸುತ್ತಾರೆ. ಈ ಎಲ್ಲಾ ಕಾರಣಗಳಿಂದ ನಾವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ದಲಿತರ ನಡೆ ಯೋಗೇಶ್ವರ್ ಕಡೆ ಎಂಬ ಧ್ಯೇಯೋದ್ದೇಶದೊಂದಿಗೆ ಅಡಿ ಇಟ್ಟಿದ್ದೇವೆ ಎಂದರು.
ಡಾ ಲೋಕಾನಂದ ರವರು ಮಾತನಾಡಿ ಕಳೆದ ಇಪ್ಪತ್ತು ವರ್ಷಗಳ ಹಿಂದೆ ನಾವೆಲ್ಲರೂ ಸಿ ಪಿ ಯೋಗೇಶ್ವರ್ ಜೊತೆಯಲ್ಲೇ ಇದ್ದು ಹಲವಾರು ಕಾರಣಗಳಿಂದ ತಾಲ್ಲೂಕಿನ ಎಲ್ಲಾ ದಲಿತ ಮುಖಂಡರು ಬೇರೆ ಬೇರೆ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರೆಲ್ಲರನ್ನೂ ಒಗ್ಗೂಡಿಸಿ ಮುಂದಿನ ಚುನಾವಣೆಯಲ್ಲಿ ಸಿ ಪಿ ಯೋಗೇಶ್ವರ್ ರವರ ಕೈ ಬಲಪಡಿಸಲು ಅನ್ಯ ಪಕ್ಷಗಳಲ್ಲಿರುವ ಎಲ್ಲಾ ದಲಿತರು ಒಗ್ಗಟ್ಟಾಗುತ್ತಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಮಾಜಿ ನಗರಸಭಾ ಸದಸ್ಯ ನಾರಾಯಣಮೂರ್ತಿ ಮಾತನಾಡಿ ರಾಜ್ಯ ಮಟ್ಟದ ನಾಯಕರು ಸಹ ತಾಲ್ಲೂಕಿನ ದಲಿತ ಮುಖಂಡರ ಬಗ್ಗೆ ಕಿಂಚಿತ್ತೂ ವಿಶ್ವಾಸ ಗಳಿಸಲು ಪ್ರಯತ್ನಿಸಲಿಲ್ಲ. ದಲಿತರನ್ನು ಮುಖ್ಯಮಂತ್ರಿ ಮಾಡಲೂ ಸಹ ರಾಜ್ಯದಲ್ಲಿ ಅಡ್ಡಗಾಲು ಹಾಕಿ ನಿಂತವರೇ ಹೆಚ್ಚು. ಸಮಸ್ಯೆಗೆ ಸಂಬಂಧಿಸಿದಂತೆ ಪತ್ರ ನೀಡಿದಾಗಲೂ ಸಹ ಸಂಸದ ಡಿ ಕೆ ಸುರೇಶ್ ರವರು ದುರಹಂಕಾರದಿಂದ ಪತ್ರವನ್ನು ಹರಿದುಹಾಕುವ ಮೂಲಕ ದಲಿತರಿಗೆ ಅವಮಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಸಿ ಪಿ ಯೋಗೇಶ್ವರ್ ಬೆಂಬಲಿಸಲು ಬಿಜೆಪಿ ಸೇರ್ಪಡೆಯಾಗುತ್ತಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ ಎಸ್ ಕೇಶವಮೂರ್ತಿ, ನಗರಸಭಾ ಮಾಜಿ ಸದಸ್ಯ ಪುರುಷೋತ್ತಮ, ಜಗದಾಪುರ ಗ್ರಾಪಂ ಮಾಜಿ ಸದಸ್ಯ ಭೀಮಯ್ಯ, ಎಸ್ ಎಸ್ಟಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್, ಅಂಬಾಡಹಳ್ಳಿ ಜೆಡಿಎಸ್ ಮುಖಂಡ ಪಾಪಣ್ಣ, ಜಯಸಿಂಹ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು