ಜೆಡಿಎಸ್ ನಡೆ ಅಭಿವೃದ್ಧಿ ಕಡೆ ಜೆಡಿಎಸ್ ಪಕ್ಷದ ದಲಿತ ಮುಖಂಡರು
ಚನ್ನಪಟ್ಟಣ: ಮೇ: 18/22 ಬುಧವಾರ.
ತಾಲ್ಲೂಕಿನ ದಲಿತರ ನಡಿಗೆ ಅಭಿವೃದ್ಧಿ ಕಡೆಗೆ ವಿನಹ ಯೋಗೇಶ್ವರ್ ಕಡೆಗಲ್ಲಾ. ಜೆಡಿಎಸ್ ಪಕ್ಷದಲ್ಲಿರುವ ಎಲ್ಲಾ ದಲಿತ ಮುಖಂಡರಿಗೂ, ಮತದಾರರಿಗೂ ಪಕ್ಷವು ಅಧಿಕಾರದ ಜೊತೆಗೆ ಗೌರವವನ್ನು ನೀಡಿದೆ. ನಾವೆಲ್ಲರೂ ಯಾವುದೇ ಕಾರಣಕ್ಕೂ ಪಕ್ಷವನ್ನು ತೊರೆಯುವುದಿಲ್ಲಾ. ತಾಲ್ಲೂಕಿನ ದಲಿತರ ನಡಿಗೆ ಯೋಗೇಶ್ವರ್ ಕಡೆಗೆ ಎಂದು ಹೇಳಿಕೆ ನೀಡಿರುವ ಮಹನೀಯರು ಈ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ತಾಲ್ಲೂಕು ಜೆಡಿಎಸ್ ಪಕ್ಷದ ಹಲವಾರು ಮುಖಂಡರುಗಳು ಆಗ್ರಹಿಸಿದರು.
ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಎಸ್.ಸಿ.ಶೇಖರ್ ಮತ್ತಿತರ ದಲಿತ ಮುಖಂಡರು, ದಲಿತರ ನಡೆ ಯೋಗೇಶ್ವರ್ ಕಡೆ ಎಂಬ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅವರು ಹಿಂದಕ್ಕೆ ಪಡೆಯಬೇಕು ಎಂದು ಜೆಡಿಎಸ್ ಪಕ್ಷದ ಹಲವಾರು ದಲಿತ ಮುಖಂಡರು ಆಗ್ರಹಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್
ದಲಿತ ಮುಖಂಡರು, ಯಾರೋ ಒಂದಿಬ್ಬರು
ಹೇಳಿಕೆ ನೀಡಿದ ಮಾತ್ರಕ್ಕೆ ಇಡೀ ದಲಿತ
ಸಮುದಾಯ ಬಿಜೆಪಿ ಕಡೆ ವಾಲುವುದಿಲ್ಲ. ಅವರು
ಈ ರೀತಿ ಸುಳ್ಳು ಹೇಳಿಕೆಗಳನ್ನು
ನೀಡುವುದನ್ನು ನಿಲ್ಲಿಸಬೇಕು ಎಂದು
ಆಗ್ರಹಿಸಿದರು.
ದಲಿತರ ನಡೆ ಯೋಗೇಶ್ವರ್ ಕಡೆ ಎಂಬ
ಸುಳ್ಳು ಹೇಳಿಕೆ ನೀಡುವ ಮೂಲಕ ದಲಿತ
ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ
ಮಾಡುತ್ತಿದ್ದಾರೆ. ಜೆಡಿಎಸ್ನ ಎಲ್ಲಾ ದಲಿತ
ಮುಖಂಡರು ಒಗ್ಗಟ್ಟಾಗಿದ್ದು, ಯಾರೂ ಸಹ
ಪಕ್ಷ ಬಿಟ್ಟು ಹೋಗುವಂತಹ ಯೋಚನೆ
ಮಾಡಿಲ್ಲ, ಮಾಡುವುದೂ ಇಲ್ಲಾ. ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ದಲಿತ ಸಮುದಾಯದ ದಿಕ್ಕುತಪ್ಪಿಸುವ ಪ್ರಯತ್ನವನ್ನು
ಮಾಡಲಾಗುತ್ತಿದೆ. ಕಳೆದ ಚುನಾವಣೆಗಿಂತ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ
ಎಚ್.ಡಿ.ಕುಮಾರಸ್ವಾಮಿವರಿಗೆ ಹೆಚ್ಚು ದಲಿತ
ಮತಗಳು ಬೀಳಲಿದ್ದು, ನಾವೆಲ್ಲರೂ ಅವರನ್ನು
ಬೆಂಬಲಿಸಲಿದ್ದೇವೆ ಎಂದು ತಿಳಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶ
ಮತ್ತು ರಾಜ್ಯದಲ್ಲಿ ಅವರು ಯಾವ ರೀತಿ ಆಡಳಿತ
ನಡೆಸುತ್ತಿದ್ದಾರೆ ಎಂಬುದನ್ನು ಜನ
ನೋಡಿದ್ದಾರೆ. ದಲಿತರ ಮೀಸಲಾತಿಯನ್ನು
ಕಡಿತಗೊಳಿಸುವ ಪ್ರಯತ್ನಗಳನ್ನು
ಮಾಡಲಾಗುತ್ತಿದೆ. ಖಾಸಗೀಕರಣ ಉತ್ತೇಜಿಸುವ
ಭರದಲ್ಲಿ ಬಡವರು ದಲಿತರ ಬದುಕಿನ ಜತೆ
ಚೆಲ್ಲಾಟವಾಡಲಾಗುತ್ತಿದೆ ಎಂದು ಆಕ್ರೋಶ
ವ್ಯಕ್ತಪಡಿಸಿದರು.
ಬಿಜೆಪಿಗೆ ದಲಿತ ಸಮುದಾಯದ ಪರ
ಯಾವುದೇ ಒಲವಿಲ್ಲ. ಕೇವಲ ಮತಕ್ಕಾಗಿ
ಮಾತ್ರ ಅವರು ದಲಿತರ ಅಭಿವೃದ್ಧಿಯ
ಕುರಿತು ಮಾತನಾಡುತ್ತಾರೆ. ಪ್ರಧಾನಿಯವರು ಅವರು ಹಾಕುವ ಸೂಟ್ ಬಣ್ಣಗಳನ್ನೇ ನೋಟಿಗೆ ಇಡುತ್ತಾರೆ. ಇಂಥ ಪಕ್ಷಕ್ಕೆ
ದಲಿತ ಸಮುದಾಯ ಯಾವುದೇ ಕಾರಣಕ್ಕೂ
ಬೆಂಬಲ ನೀಡುವುದಿಲ್ಲ. ಜಾತ್ಯಾತೀಕ ನಿಲುವು
ಹೊಂದಿರುವ ಜೆಡಿಎಸ್ ಪಕ್ಷಕ್ಕೆ ನಮ್ಮ ಬೆಂಬಲ
ಎಂದು ತಿಳಿಸಿದರು.
ಕುಮಾರಸ್ವಾಮಿಯವರು ಕ್ಷೇತ್ರದ
ಶಾಸಕರಾದ ನಂತರ ಸಾಕಷ್ಟು ಅಭಿವೃದ್ಧಿ
ಕಾಮಗಾರಿಗಳನ್ನು ಮಾಡಿದ್ದಾರೆ. ಕ್ಷೇತ್ರದ
ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು
ತಂದಿದ್ದಾರೆ. ರಸ್ತೆ, ಚರಂಡಿ ಸೇರಿದಂತೆ
ಮೂಲಮೂತ ಸೌಕರ್ಯಗಳನ್ನು ಕಲ್ಪಿಸಲು
ಸಾಕಷ್ಟು ಅನುದಾನ ತಂದಿದ್ದಾರೆ. ಆದ್ದರಿಂದ
ಜೆಡಿಎಸ್ನಲ್ಲಿರುವ ದಲಿತ ಮುಖಂಡರು
ಯಾವುದೇ ಕಾರಣಕ್ಕೂ ಬೇರೆ ಪಕ್ಷಕ್ಕೆ
ಹೋಗುವುದಿಲ್ಲ. ಬಿಜೆಪಿಯವರು ಇಂಥ
ಸುಳ್ಳುಗಳನ್ನು ಹಬ್ಬಿಸುವುದನ್ನು
ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ದಲಿತ ಮುಖಂಡರಾದ ಡಾ ಮಲ್ಲೇಶ್ ದ್ಯಾವಪಟ್ಟಣ, ಕೂಡ್ಲೂರು ಸಿದ್ದರಾಮು, ಕೆಂಗಲ್
ಮೂರ್ತಿ, ಕೋಟೆ ಶ್ರೀನಿವಾಸ್, ಅಪ್ಪಗೆರೆ
ಕುಮಾರಮ್ಮ, ಗಂಗಾಧರ್, ಗಿರೀಶ್,
ಗೋವಿಂದರಾಜು, ಸಿದ್ದೇಶ್, ಮಾರ್ಚನಹಳ್ಳಿ
ಪ್ರದೀಪ್ ಮುಂತಾದವರು ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು