ನರೇಗಾ ಯೋಜನೆಯಡಿ ಕಾಯಕ ಬಂಧುಗಳಿಗೆ ತರಬೇತಿ
ಚನ್ನಪಟ್ಟಣ: ಮೇ 23 22., ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಸೋಗಾಲ ಗ್ರಾಮ ಪಂಚಾಯತಿಯ ಸಂಜೀವಿನಿ ಭವನದಲ್ಲಿ ಇಗ್ಗಲೂರು, ಹಾರೋಕೊಪ್ಪ, ಬಾಣಗಹಳ್ಳಿ, ಸೋಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಹಕ ಬಂಧುಗಳನ್ನು ಒಗ್ಗೂಡಿಸಿ ಕಾಯಕ ಬಂಧು ತರಬೇತಿಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಸೋಗಾಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ್ ಮೂತಿ೯ ಹೆಚ್ ಹಾಗೂ ಅಧ್ಯಕ್ಷರಾದ ಶ್ರೀಮತಿ ಸವಿತ ಅವರು ದೀಪ ಬೆಳಗುವ ಮೂಲಕ ಕಾಯಕ ಬಂಧುಗಳ ತರಬೇತಿಗೆ ಚಾಲನೆ ನೀಡಿದರು ಹಾಗೂ ಇದೇ ಸಂದರ್ಭದಲ್ಲಿ ದುಡಿಯೋಣ ಬಾ ಅಭಿಯಾನದ ಮಾಹಿತಿ ನೀಡಲಾಯಿತು.
ತರಬೇತಿಯಲ್ಲಿ 26 ಕಾಯಕ ಬಂಧುಗಳು ಹಾಜರಾಗಿದ್ದು ತಾಂತ್ರಿಕ ಸಹಾಯಕ ಅಭಿಯಂತರರಾದ ಚೈತ್ರ ಕೆ.ಪಿ ಹಾಗೂ ಐಇಸಿ ಸಂಯೋಜಕರಾದ ಭವ್ಯ ಅವರು ತರಬೇತಿ ನೀಡಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯಡಿ ಕಾಯಕಬಂಧುಗಳ ಪಾತ್ರವೇನು ದಿನದ ಕೂಲಿ 309 ರೂ ಜೊತೆಗೆ 5 ರೂ ಮಹಿಳೆಯರಿಗೆ ಹಾಗೂ 4 ರೂ ಹೆಚ್ಚುವರಿ ಕೂಲಿ ಇರುವುದನ್ನು ತಿಳಿಸಲಾಯಿತು, ಕೆಲಸಕ್ಕಾಗಿ ಉಪಯೋಗಿಸುವ ಹಾರೆ, ಗುದ್ದಲಿ, ಮಂಕರಿ ತಂದಲ್ಲಿ ಪ್ರತಿ ದಿನಕ್ಕೆ ಹೆಚ್ಚುವರಿಯಾಗಿ 10 ರೂ. ಗಳನ್ನು ನೀಡಲಾಗುವುದು. ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸಿದ ಕೂಡಲೇ, ಗ್ರಾಮ ಪಂಚಾಯತಿಯಿಂದ ಉಚಿತವಾಗಿ ಜಾಬ್ ಕಾರ್ಡ್ ನೀಡಲಾಗುವುದು.
ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ, ವಾರದ ಕೂಲಿಯನ್ನು 15 ದಿನಗಳ ಒಳಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು, 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅಂಗವೀಕಲರಿಗೆ ಕೆಲಸದಲ್ಲಿ 50 ರಷ್ಟು ರಿಯಾಯಿತಿ ಇರುವ ಮಾಹಿತಿಯನ್ನು ನೀಡಲಾಯಿತು.
ಕಾಯಕ ಬಂಧುಗಳು ಸ್ಥಳಿಯವಾಗಿ ಹೆಚ್ಚು ಒತ್ತುನೀಡಿ ಆದಷ್ಟು ಮಟ್ಟಿಗೆ ನರೇಗಾ ಯೋಜನೆಯಡಿ ಕೆಲಸಗಳು ಗ್ರಾಮದ ವ್ಯಾಪ್ತಿಯ ಜನರ ಮೂಲಕವೇ ನಡೆಯುವಂತೆ ಮಾಡಿ ಗ್ರಾಮದ ಬಡ ಜನರು ಸ್ವಲ್ಪ ಮಟ್ಟಿಗಾದರು ಆರ್ಥಿಕವಾಗಿ ಸಬಲರಾಗುವಂತೆ ಮಾಡಬೇಕು.
ನರೇಗಾ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಕೆಲಸದ ಸಮಯದಲ್ಲಿ ಕೂಲಿಕಾರರಿಗೆ ಗಾಯಗಳಾದಲ್ಲಿ ಪ್ರಥಮ ಚಿಕಿತ್ಸೆ ಸೌಲಭ್ಯ ಹಾಗೂ ಕೂಲಿಕಾರರ ಆರು ವರ್ಷಕ್ಕೂ ಕಡಿಮೆ ವಯಸ್ಸಿನ ಮಕ್ಕಳು ಕೂಲಿ ಕಾರ್ಮಿಕರೊಂದಿಗೆ ಬಂದಲ್ಲಿ, ಅವರನ್ನು ನೋಡಿಕೊಳ್ಳಲು ಕಾರ್ಮಿಕರ ಪೈಕಿ ಒಬ್ಬರನ್ನು ನೇಮಿಸಿ ದಿನದ ಕೂಲಿಯನ್ನು ಅವರಿಗೆ ನೀಡುವುದು.
ಕೆಲಸಕ್ಕೆ ನಿಯೋಜಿಸಿದ ಗ್ರಾಮದಿಂದ 5 ಕೀ.ಮಿ ಗಿಂತ ಹೆಚ್ಚಿನ ದೂರದಲ್ಲಿ ಸ್ಥಳ ಇದ್ದಲ್ಲಿ ಕೂಲಿಯ ಹಣಕಿಂತ 10 ರಷ್ಟನ್ನು ಹೆಚ್ಚುವರಿಯಾಗಿ ಸಾರಿಗೆ ವೆಚ್ಚ ಬರಿಸಲಾಗುವ ಹಾಗೂ ವಯಕ್ತಿಕ ಹಾಗೂ ಸಮುದಾಯಿಕ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸೋಗಾಲ ಗ್ರಾಮ ಪಂಚಾಯತಿಯ ಅಧಿಕಾರಿಗಳಾದ ಶ್ರೀನಿವಾಸ್ ಮೂತಿ೯ ಹೆಚ್ ಹಾಗೂ ಅಧ್ಯಕ್ಷರಾದ ಶ್ರೀಮತಿ ಸವಿತ ಅವರು ತಾಂತ್ರಿಕ ಸಹಾಯಕ ಅಭಿಯಂತರರಾದ ಚೈತ್ರ, ಐಇಸಿ ಸಂಯೋಜಕರಾದ ಭವ್ಯ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಗ್ರಾಮ ಕಾಯಕ ಮಿತ್ರರುಗಳಾದ ರಜಿನಿ, ಶೃತಿ, ಕಾವ್ಯ ಹಾಗೂ 26 ಗ್ರಾಮ ಕಾಯಕ ಬಂಧುಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ;9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು