ಕಾಯಕ ಬಂಧುಗಳು ನರೇಗಾ ಕಾಮಗಾರಿಯ ಚಾಲಕ ಶಕ್ತಿಯಾಗಿದ್ದಾರೆ: ರೂಪೇಶ್ ಕುಮಾರ್
ಕಾಯಕ ಬಂಧುಗಳು ನರೇಗಾ ಕಾಮಗಾರಿಯ ಕಾರ್ಯಕ್ರಮದ ಚಾಲಕ ಶಕ್ತಿಗಳಾಗಿದ್ದು, ನರೇಗಾ ಪ್ರಗತಿಗೆ ಹಾಗೂ ಗ್ರಾಮೀಣ ಜನರ ಆರ್ಥಿಕ ಬದುಕಿಗೆ ಕಾಯಕ ಬಂಧುಗಳು ನರೇಗಾ ಆಪ್ತ ಸಹಾಯಕರಾಗಿದ್ದಾರೆ ಎಂದು ಸಹಾಯಕ ನಿರ್ದೇಶಕ (ಗ್ರಾ.ಉ) ರೂಪೇಶ್ ಕುಮಾರ್ ಹೆಚ್.ಆರ್ ತಿಳಿಸಿದರು.
ಅವರು ಇಂದು ರಾಮನಗರ ಜಿಲ್ಲೆ ಹಾಗೂ ತಾಲ್ಲೂಕಿನ ಗೋಪಹಳ್ಳಿ ಗ್ರಾಮ ಪಂಚಾಯತಿಯ ಸಂಜೀವಿನಿ ಹಮ್ಮಿಕೊಂಡಿದ್ದ ಬೈರಮಂಗಲ, ಕಂಚುಗಾರನಹಳ್ಳಿ ಹಾಗೂ ಗೋಪಹಳ್ಳಿ ಗ್ರಾಮ ಪಂಚಾಯತಿಯ ಕಾಯಕ ಬಂಧು ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಜನರ ಬದುಕನ್ನು ಹಸನು ಮಾಡಿ ವಲಸೆ ಹೋಗುವುದನ್ನು ತಪ್ಪಿಸಿ ತಮ್ಮ ಗ್ರಾಮದಲ್ಲೇ ಉದ್ಯೋಗವನ್ನು ಒದಗಿಸುವ ಮಹಾತ್ಮ ಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗೋಪಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಮಚಂದ್ರಯ್ಯ ಅವರು ಕಾಯಕ ಬಂಧುಗಳು ತಮ್ಮ ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಿ ಅವರು ಯೋಜನೆಯಲ್ಲಿ ಬಾಗಿಯಾಗುಂತೆ ಮಾಡಲು ತಿಳಿಸಿದರು.
ಹೋಬಳಿ ತರಬೇತಿಯನ್ನು ಆಯೋಜಿಸಿದ್ದು, ಗ್ರಾಮ ಕಾಯಕ ಮಿತ್ರರಿಗೆ ಜಾಬ್ ಚಾರ್ಟ್ ಕುರಿತು ಹಾಗೂ ನರೇಗಾ ಯೋಜನೆಯಡಿ ದೊರೆಯುವ ಸೌಲಭ್ಯ ಕುರಿತು ತಿಳಿಸಲಾಗುವುದು. ಕಾರ್ಯಾಗಾರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಸಿ ಅವರು ತಿಳಿಸಿದರು.
ತಾಂತ್ರಿಕ ಸಂಯೋಜಕರಾದ ಕಾರ್ತಿಕ್ ಕುಮಾರ್ ಅವರು ಮಾತನಾಡಿ ಯೋಜನೆಯ ಸೌಲಭ್ಯ, ವೈಯಕ್ತಿಕ ಕಾಮಗಾರಿ ಸಮುದಾಯ ಕಾಮಗಾರಿ, ಎಂ.ಎಂ.ಎಸ್ ಹಾಗೂ ಕಾಯಕ ಬಂಧು ಮೊಬೈಲ್ ಆಪ್ಲೀಕೆಷನ್ ಕುರಿತು ತರಬೇತಿ ನೀಡಿದರು.
ಜಿಲ್ಲಾ ಐ.ಇ.ಸಿ ಸಂಯೋಜಕರಾದ ಅರುಣ್ ಕುಮಾರ್ ಅವರು ಮಾತನಾಡಿ ಕಾಯಕ ಬಂಧುಗಳು ನರೇಗಾ ಯೋಜನೆಯ ಬಗ್ಗೆ ಕೂಲಿಕಾರಿಗೆ ಮಾಹಿತಿ ನೀಡಬೇಕು, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳಲ್ಲಿ ಭಾಗವಹಿಸಿ ಗುಂಪಿನ ನೇತೃತ್ವವನ್ನು ವಹಿಸಬೇಕು ಹಾಗೂ ಕಾಮಗಾರಿ ಸ್ಥಳದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಉತ್ತೇಜಿಸಬೇಕು ಎಂದರು.
ಕಾರ್ಯಗಾರದಲ್ಲಿ ತಾಲ್ಲೂಕು ಐಇಸಿ ಸಂಯೋಜಕರಾದ ಸುಶ್ಮಿತಾ, ಗ್ರಾಮ ಪಂಚಾಯತಿ ಗ್ರಾಮ ಕಾಯಕ ಮಿತ್ರರಾದ ಸುಶ್ಮಿತಾ, ಪಲ್ಲವಿ ಹಾಗೂ ಗೋಪಹಳ್ಳಿ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು