ಸ್ವಾತಂತ್ರ್ಯ ಪೂರ್ವದಿಂದಲೂ ನೆನೆಗುದಿಗೆ ಬಿದ್ದಿರುವ ಕಂದಾಯ ಇಲಾಖೆಯ ಕೆಲಸ. ನಿರಂತರ ಧರಣಿ
ಚನ್ನಪಟ್ಟಣ: ಮೇ 31 22. ಸ್ವಾತಂತ್ರ್ಯ ಪೂರ್ವದಿಂದಲೂ ಕಂದಾಯ ಇಲಾಖೆಯಲ್ಲಿ ರೈತರ ಮತ್ತು ದೀನ ದಲಿತರಿಗೆ ಸಂಬಂಧಿಸಿದ ರೈತರ ಕೆಲಸಗಳು ಬಾಕಿ ಇದ್ದು, ಅವುಗಳನ್ನು ಇತ್ಯರ್ಥ ಪಡಿಸುವವರೆಗೂ ತಾಲ್ಲೂಕು ಕಛೇರಿಯ ಮುಂಭಾಗ ಆಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪಾದಕರ ರೈತ ಸಂಘದ ರಾಜ್ಯಾಧ್ಯಕ್ಷ ಸುಜೀವನ್ ಕುಮಾರ್ ತಿಳಿಸಿದರು.
ಅವರು ಇಂದು ನಗರದ ತಹಶಿಲ್ದಾರ್ ಕಛೇರಿ ಮುಂಭಾಗ ನೊಂದ ರೈತರ ಜೊತೆಗೂಡಿ ಹಮ್ಮಿಕೊಂಡಿರುವ ನಿರಂತರ ಧರಣಿ ಯಲ್ಲಿ ಭಾಗವಹಿಸಿ ಮಾತನಾಡಿದರು.
ಹದಿನಾರು ಸಾವಿರಕ್ಕೂ ಹೆಚ್ಚು ದಲಿತರ ಜಮೀನುಗಳ ಕೆಲಸ ಬಾಕಿ ಉಳಿದಿವೆ. ಪ್ರತಿ ಸಮುದಾಯದ ಅದರಲ್ಲೂ ಹಿಂದುಳಿದ ವರ್ಗಗಳ ರೈತರ ಕೆಲಸ ಮಕಾಡೆ ಮಲಗಿವೆ. ಎಷ್ಟು ಪ್ರತಿಭಟನೆ ನಡೆಸಿದರೂ, ಮನವಿ ನೀಡಿದರೂ ಸಹ ಅಧಿಕಾರಿಗಳು ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಹ ಅಧಿಕಾರದ ಹಪಾಹಪಿಯಲ್ಲಿದ್ದು, ರೈತರ ಸಂಕಷ್ಟವನ್ನು ಅರಿಯಲು ಮುಂದಾಗುತ್ತಿಲ್ಲಾ. ಇದರಿಂದ ಬೇಸತ್ತು ನಾವು ನಿರಂತರ ಧರಣಿಯನ್ನು ಹಮ್ಮಿಕೊಂಡಿದ್ದೇವೆ ಎಂದರು.
ರೈತಮುಖಂಡ ಶಿವಕುಮಾರ್ ಮಾತನಾಡಿ ಪ್ರತಿಭಟನೆ ಮತ್ತು ಮನವಿ ಕೊಟ್ಟಾಗ ಮಾತ್ರ ಅಧಿಕಾರಿಗಳು ತಲೆಯಲ್ಲಾಡಿಸುತ್ತಾರೆ. ನಂತರ ಮೌನವಹಿಸಿ ಅವರದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಅವರೇ ಮಾಡಿದ ಒಂದು ತಿದ್ದುಪಡಿ ತಪ್ಪಿಗೆ ಹಲವಾರು ದಾಖಲೆ ಇಟ್ಟುಕೊಂಡು ತಿಂಗಳಾರುಗಟ್ಟಲೆ ಅಲೆಯಬೇಕು. ಖಾತೆ ಬದಲಾವಣೆ, ಸರ್ವೇ, ಹದ್ದುಬಸ್ತು ಸೇರಿದಂತೆ ಯಾವ ಕೆಲಸವೂ ನಿಗದಿತ ಸಮಯದಲ್ಲಾಗುವುದಿಲ್ಲ. ಇದರಿಂದ ಬೇಸತ್ತ ನಾವು ನಿರಂತರ ಧರಣಿಯನ್ನು ಹಮ್ಮಿಕೊಂಡಿದ್ದೇವೆ ಎಂದರು.
ಅರಳಾಳುಸಂದ್ರ ಗ್ರಾಮದ ಬಳಿ ಇರುವ ಸೋಮೇಗೌಡನದೊಡ್ಡಿ ಗ್ರಾಮದ ರೈತ ಮಹಿಳೆ ಶಾಲಿನಿ ಮಲ್ಲಿಕಾರ್ಜುನ ಮಾತನಾಡಿ ಆನೆಗಳು ಪ್ರತಿನಿತ್ಯ ಬಂದು ಬೆಳೆದ ಬೆಳೆಗಳನ್ನು ನಾಶಪಡಿಸುತ್ತಿವೆ. ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಕೇಳಿದರೆ ಗಿಡಗಳಿಗೆ ಗುಣಿ(ಳಿ) ಮಾಡಿಕೊಟ್ಟು ಹೋಗಿವೆ ಹೋಗಮ್ಮಾ ಎಂದು ಕುಹಕವಾಡುತ್ತಾರೆ. ಪರಿಹಾರ ನಗಣ್ಯವಾಗಿದೆ. ಇದರಿಂದ ನಮ್ಮ ಬದುಕು ಬರಡಾದಂತಾಗಿದೆ ಎಂದು ತಹಶಿಲ್ದಾರ್ ಹರ್ಷವರ್ಧನ್ ಮತ್ತು ವಲಯ ಅರಣ್ಯಾಧಿಕಾರಿ ದಿನೇಶ್ ರವರನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡರು. ನಮಗೆ ಸೋಲಾರ್ ನೀಡುತ್ತಿಲ್ಲ. ವರ್ಷದ ಬೆಳೆ ಕ್ಷಣಾರ್ಧದಲ್ಲಿ ಹಾಳಾಗುತ್ತಿದೆ. ನಿಮ್ಮ ಮೂರುಕಾಸಿನ ಪರಿಹಾರ ನಮಗೆ ಬೇಡ. ದಯವಿಟ್ಟು ಕಾಡು ಪ್ರಾಣಿಗಳನ್ನು ನೀವು ಕಟ್ಟಿಹಾಕಿಕೊಂಡು ನಮ್ಮ ಬೆಳೆಗೆ ರಕ್ಷಣೆ ನೀಡಿ ಎಂದು ಆಗ್ರಹಿಸಿದರು.
ಹರ್ಷವರ್ಧನ್ ರವರು ಮಾತನಾಡಿ ಶೀಘ್ರವಾಗಿ ಎಲ್ಲಾ ಅಧಿಕಾರಿಗಳ ಸಭೆ ಕರೆಯುತ್ತೇನೆ. ಸಾಧ್ಯವದರೆ ಮುಂದಿನ ಕೆಡಿಪಿ ಸಭೆಗೆ ತಮ್ಮನ್ನು ಆಹ್ವಾನಿಸುತ್ತೇವೆ. ಈ ಹಿಂದಿನದರ ಬಗ್ಗೆ ನನಗೆ ಮಾಹಿತಿ ಇದೆ. ಇನ್ನೂ ಮೂರ್ನಾಲ್ಕು ತಿಂಗಳಲ್ಲಿ ಆನೆಗಳ ಬಗ್ಗೆ ನಿಗಾವಹಿಸಿ ಶಾಶ್ವತವಾಗಿ ಕಾಡಿಗೆ ಅಟ್ಟುವುದಾಗಿ ಭರವಸೆ ನೀಡಿದರು.
ಪ್ರತಿಭಟನೆ ಮುಂದುವರೆಸಿದ ನೊಂದ ರೈತರು ಕಛೇರಿಯ ಮುಂಭಾಗವೇ ಸೌದೆ ಒಲೆ ಹಚ್ಚಿ ಅಡುಗೆ ಮಾಡಿ ಊಟ ಮಾಡಿ ಸರದಿ ಮೂಲಕ ರಾತ್ರಿ ವೇಳೆಯೂ ಕಛೇರಿಯ ಮುಂಭಾಗವೇ ಮಲಗುವ ಮೂಲಕ ಪ್ರತಿಭಟನೆ ಮುಂದುವರೆಸಿದರು.
ಪ್ರತಿಭಟನೆಯಲ್ಲಿ ದಸಂಸ ಮುಖಂಡ ವೆಂಕಟೇಶ್ (ಶೇಟು) ರೈತ ಮಹಿಳೆಯರಾದ ನಾಗಮ್ಮ, ಸಿದ್ದಮ್ಮ, ನೀಲಮ್ಮ, ಕೆಂಚಮ್ಮ, ಪುಟ್ಟಮ್ಮ, ಬೋರಲಿಂಯ್ಯ, ನಾಗರಾಜು, ರಾಜಣ್ಣ, ಜಯಕಾಂತ ಚಾಲುಕ್ಯ, ಪಿ ಜೆ ಗೋವಿಂದರಾಜು ಸೇರಿದಂತೆ ಹಲವಾರು ಮಂದಿ ಭಾಗಿಯಾಗಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು