Tel: 7676775624 | Mail: info@yellowandred.in

Language: EN KAN

    Follow us :


ಮನೆಯೇ ಮೊದಲ ಪಾಠ ಶಾಲೆ: ಸೇಂಟ್ ಆನ್ಸ್ ಇಂಗ್ಲಿಷ್ ಶಾಲೆಯ ಮುಖ್ಯ ಶಿಕ್ಷಕಿ ಆಲ್ಫೋನ್ಸ್.

Posted date: 03 Jun, 2022

Powered by:     Yellow and Red

ಮನೆಯೇ ಮೊದಲ ಪಾಠ ಶಾಲೆ: ಸೇಂಟ್ ಆನ್ಸ್ ಇಂಗ್ಲಿಷ್ ಶಾಲೆಯ ಮುಖ್ಯ ಶಿಕ್ಷಕಿ ಆಲ್ಫೋನ್ಸ್.

ಚನ್ನಪಟ್ಟಣ: ಮನೆಯೇ ಮೊದಲ ಪಾಠ ಶಾಲೆ ನಂತರ ಶಾಲೆಯ ಗುರುಗಳು, ಆದ್ದರಿಂದ ಮಕ್ಕಳ ವಿದ್ಯಾ ಬೆಳವಣಿಗೆಗೆ ಪೋಷಕರೇ ಹೆಚ್ಚು ಜವಾಬ್ದಾರಿ ಹೊರಬೇಕು. ಶಾಲಾ ಶಿಕ್ಷಕರು ಸಹ ಅವರ ಜೊತೆ ನಿರಂತರ ಎಂಟು ಗಂಟೆಗಳ ಕಾಲ ಬೋಧಿಸುವ ಮೂಲಕ ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿರುತ್ತಾರೆ ಎಂದು ನಗರದ ಸೇಂಟ್ ಆನ್ಸ್ ಇಂಗ್ಲಿಷ್ ಶಾಲೆಯ ವ್ಯವಸ್ಥಾಪಕ ರಾದ ಸಿಸ್ಟರ್ ಆಲ್ಫೋನ್ಸ್ ಅಭಿಪ್ರಾಯ ಪಟ್ಟರು.

ಅವರು ನಗರದ ಸೆಂಟ್ ಆನ್ಸ್ ಇಂಗ್ಲೀಷ್  ಹೈಯ್ಯರ್ ಪ್ರೈಮರಿ ಶಾಲೆಯ ಪ್ರಾರಂಭೋತ್ಸವ ವನ್ನು ಉದ್ದೇಶಿ ಮಾತನಾಡಿದರು.


ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ 

ತಾಯಿಯೇ ಮೊದಲು ಗುರು ನಂತರದಲ್ಲಿ ಗುರುಗಳು ಬರಲಿದ್ದಾರೆ ಅವರ ಪ್ರಯತ್ನದ ಜೊತೆಗೆ ತಂದೆ ತಾಯಿಗಳಾದ ತಾವುಗಳು ಮನೆಯಲ್ಲಿ ಮಕ್ಕಳನ್ನ ಗಮನಿಸಿ ಶಿಕ್ಷಣ ಕಲಿಸಲು ಸಹಕಾರ ಕೊಡಬೇಕಿದೆ ಎಂದ ಅವರು 

ಮಕ್ಕಳು ಈ ದೇಶದ ಭವಿಷ್ಯ ಅವರನ್ನ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಗುರುತರ ಜವಾಬ್ದಾರಿಯು ನಮ್ಮ ನಿಮ್ಮೆಲ್ಲರ ಮೇಲಿದೆ.

ಆದ್ದರಿಂದ ನಮ್ಮ ಈ ಶಿಕ್ಷಣ ಸಂಸ್ಥೆ ಕಳೆದ ಮೂವ್ವತ್ತೈದು ವರ್ಷಗಳಿಂದ ಸಾವಿರಾರು ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಆದ್ದರಿಂದ ನಮ್ಮ ಶಾಲೆಯಲ್ಲಿ ಕಲಿಯುವ ಮಕ್ಕಳ ಪೋಷಕರಿಗೆ ಅನಗತ್ಯ ಆತಂಕ ಬೇಡ. ತಮ್ಮ ಸಹಕಾರ ಸದಾ ಇರಲಿ ಎಂದು ತಿಳಿಸಿದ ಅವರು ಸದರಿ ಈ ಶೈಕ್ಷಣಿಕ ವರ್ಷಕ್ಕೆ ಮೊದಲ ಹೆಜ್ಜೆಯಿಟ್ಟ ಎಲ್ ಕೆ ಜಿ ಯುಕೆಜಿ.ಮಕ್ಕಳಿಗೆ  ಶುಭಹಾರೈಸಿದರು.


ನಂತರ ಮಾತನಾಡಿದ ಮುಖ್ಯ ಶಿಕ್ಷಕಿ ಸಿಸ್ಟರ್ ಜೊಸ್ಮಿನ್ ತಮ್ಮ ಮಕ್ಕಳು ಮೊದ ಮೊದಲು ಶಾಲೆಗೆ ಬರಲು ಹಠ ಮಾಡುವುದು ಸಹಜ ಪ್ರಕ್ರಿಯೆ ನಂತರ ನಮ್ಮ ಶಾಲಾ ವಾತಾವರಣಕ್ಕೆ ಒಗ್ಗಿಕೊಂಡನಂತರ ಅವರೇ ಓಡೋಡಿ ಬರುತ್ತಾರೆ. ಅವರನ್ನು ಉತ್ತಮ ಸುಶಿಕ್ಷಿತರನ್ನಾಗಿ ಮಾಡಬಲ್ಲ ಗುಣಮಟ್ಟದ ಶಿಕ್ಷಕ ಸಮೂಹ ಇರುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಸಹ ನಮ್ಮಲ್ಲಿ ನಿರಂತರವಾಗಿ ನಡೆಯುತ್ತವೆ ಎಂದರು.


ಆ ನಿಟ್ಟಿನಲ್ಲಿ ತಮ್ಮ ಮಕ್ಕಳಿಗೆ ಇಲ್ಲಿ 

ಶಿಕ್ಷಣದ ಜೊತೆಗೆ ಶಿಸ್ತು, ಸಂಯಮ, ಸಹನೆ, ಪಠ್ಯೇತರ ಚಟುವಟಿಕೆಗಳ ಅವಶ್ಯಕತೆ ಇರುವುದರಿಂದ ಇಲ್ಲಿ ಎಲ್ಲದಕ್ಕೂ ಆದ್ಯತೆ ಕೊಡಲಾಗುತ್ತಿದೆ. ನಮ್ಮ ಈ ಶಿಕ್ಷಣ ಸಂಸ್ಥೆಗೆ ಪೋಷಕ ಸಮೂದಾಯದ ಅಮೂಲ್ಯ ಸಹಕಾರ ಇರಲಿ ಎಂದರು.


ನಗರದ ತಾಲ್ಲೂಕಿನ ನ್ಯಾಯಾಲಯದ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಮಹೇಂದ್ರ ರವರ ಸಹದರ್ಮಿಣಿ  ತೇಜಸ್ವಿನಿ ಮಹೇಂದ್ರ ರವರು ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ಕೊಠಡಿಗಳನ್ನು ಟೇಪ್ ಕತ್ತರಿಸುವ ಮೂಲಕ ಕೊಠಡಿ ಉದ್ಘಾಟನೆ ಮಾಡಿ ಪುಟಾಣಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಶುಭಹಾರೈಸಿ ಶಾಲೆಗೆ ಬರಮಾಡಿಕೊಂಡರು. 

ಈ ಸಂದರ್ಭದಲ್ಲಿ ಶಾಲೆಯ ಆಡಳಿತ ವರ್ಗ, ಶಿಕ್ಷಕವರ್ಗ ಹಾಗೂ ನೂರಾರು  ಪೋಷಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑