ಬುಕ್ಕಸಾಗರ ಗ್ರಾಮದ ಬಳಿ ದರೋಡೆ ಮಾಡಿದ ಕಳ್ಳರನ್ನು ಬಂಧಿಸಿದ ಅಕ್ಕೂರು ಪೋಲಿಸರು
ಚನ್ನಪಟ್ಟಣ, ಮಾ.20: ಕೆಲ ದಿನಗಳ
ಹಿಂದೆ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ಬುಕ್ಕಸಾಗರದ
ಬಳಿ ನಡೆದ ದರೋಡೆ ಪ್ರಕರಣವನ್ನು ಬೇಧಿಸಿದ ಗ್ರಾಮಾಂತರ
ವೃತ್ತ ನಿರೀಕ್ಷಕರ ತಂಡ ಐದು ಮಂದಿ ಹೈನಾತಿ ಆರೋಪಿಗಳನ್ನು
ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ಬಂಧನಕ್ಕೆ ಒಳಗಾಗಿರುವ ಹೈನಾತಿ
ದರೋಡೆಕೋರರನ್ನು ಅಕ್ಕೂರಿನ ಆಟೋಚಾಲಕ ಆನಂದ್
(37)), ಎಸ್.ಎಂ.ಹಳ್ಳಿಯ ಆಟೋಚಾಲಕ ನಾಗ ಆಲಿಯಾಸ್
ಸತ್ತಾರ್ (35), ಚನ್ನಪಟ್ಟಣದ ನಿವಾಸಿಗಳಾದ ನರಸಿಂಹ
(34),ವಿಷ್ಣು (34), ರೇಣುಕುಮಾರ್ (40) ಬಂಧಿತರಾಗಿದ್ದಾರೆ.
ಈ ಐದುಮಂದಿ ದರೋಡೆಕೋರರು ಬುಕ್ಕಸಾಗರದ
ಬಳಿ ನಗರದ ಎ ಜಿ ಸ್ವಾಮಿ (ಎಜಿಎಸ್)ಗೆ ಸೇರಿದ ಕೋಳಿ ಸರಬರಾಜು
ಮಾಡಿದ ಹಣವನ್ನು ಸಂಗ್ರಹಣೆ ಮಾಡಿಕೊಂಡು ಮಾರುತಿ
ಓಮ್ನಿಯಲ್ಲಿ ಬರುವಾಗ ವಾಹನವನ್ನು ಅಡ್ಡಹಾಕಿ, ಕಾರಿನಲ್ಲಿದ್ದ
ಚಾಲಕ ಹಾಗೂ ರೈಟರ್ ಗೆ ಕಣ್ಣಿಗೆ ಖಾರದಪುಡಿ ಎರಚಿ ಹಾಗೂ
ಮಾರಕಾಯುಧಗಳಿಂದ ಹಲ್ಲೆ ನಡೆಸಿ, ರೈಟರ್ ಕೈಯಲ್ಲಿದ್ದ
ಲಕ್ಷಾಂತರರೂ ಹಣವನ್ನು ಕಿತ್ತು ಕತ್ತಲೆಯಲ್ಲಿ ಪರಾರಿಯಾಗಿದ್ದರು.
ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ
ದೂರು ದಾಖಲಾಗಿತ್ತು, ದೂರು ದಾಖಲಿಸಿಕೊಂಡ ಗ್ರಾಮಾಂತರ
ವೃತ್ತ ನಿರೀಕ್ಷಕ ಟಿ ಟಿ ಕೃಷ್ಣಪ್ಪ ತಮ್ಮದೇ ತಂಡವನ್ನು ಕಟ್ಟಿಕೊಂಡು
ದರೋಡೆಕೋರರ ಬೇಟೆಗೆ ಬಲೆ ಬೀಸಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ರೆಡ್ಡಿ, ತಾಲ್ಲೂಕು
ಪೊಲೀಸ್ ಉಪವಿಭಾಗಾಧಿಕಾರಿ ಮೋಹನ್ಕುಮಾರ್
ಮಾರ್ಗದರ್ಶನದಲ್ಲಿ ದರೋಡೆಕೋರರ ಬಗ್ಗೆ ಹಲವಾರು
ಮಾಹಿತಿಯನ್ನು ಕಲೆ ಹಾಕಿದ ಗ್ರಾಮಾಂತರ ವೃತ್ತ
ನಿರೀಕ್ಷಕ ಕೃಷ್ಣಪ್ಪ, ಅಕ್ಕೂರು ಪಿಎಸ್ಐ ಬಸವರಾಜು ಮತ್ತು ತಂಡದವರು ದರೋಡೆ ಮಾಡಿ ಏನು ಗೊತ್ತಿಲ್ಲದಂತೆ
ಓಡಾಡುತ್ತಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ತಗೆದುಕೊಳ್ಳುವಲ್ಲಿ
ಯಶಸ್ವಿಯಾಗಿದ್ದಾರೆ.
ಅನಿವಾರ್ಯವಾಗಿ ದರೋಡೆಗೆ ಇಳಿದಿದ್ದ ಈ ಐದು
ಮಂದಿ ದರೋಡೆಕೋರರಲ್ಲಿ ಕೆಲವರು ವಿಪರೀತ ಸಾಲಕ್ಕೆ
ಒಳಗಾಗಿದ್ದರೆ, ಕೆಲವರು ತಮ್ಮ ಅನೈತಿಕ ಸಂಬಂಂಧಗಳ
ಮೋಜುಮಸ್ತಿಯ ಹಣಕ್ಕಾಗಿ ದರೋಡೆಗೆ ಕೈಹಾಕಿ ಹಲವಾರು
ಕಡೆ ಯಶಸ್ವಿಯಾಗಿದ್ದರು ಎಂದು ಹೇಳಲಾಗಿದೆ.
ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ
ದೂರು ದಾಖಲಾಗಿದ್ದು, ಐದು ಮಂದಿ ಆರೋಪಿಗಳನ್ನು
ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು