Tel: 7676775624 | Mail: info@yellowandred.in

Language: EN KAN

    Follow us :


ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಪ್ರಸನ್ನ ಸುಳ್ಳು ಆರೋಪ ಮಾಡಿದ್ದಾರೆ ಕಾಂಗ್ರೆಸ್ ಮುಖಂಡರ ಸ್ಪಷ್ಟನೆ

Posted date: 30 Mar, 2023

Powered by:     Yellow and Red

ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಪ್ರಸನ್ನ ಸುಳ್ಳು ಆರೋಪ ಮಾಡಿದ್ದಾರೆ ಕಾಂಗ್ರೆಸ್ ಮುಖಂಡರ ಸ್ಪಷ್ಟನೆ

ಚನ್ನಪಟ್ಟಣ:ಕಾಂಗ್ರೆಸ್ ಪಕ್ಷ ತೊರೆದು ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾದ ನಂತರ ಪಕ್ಷ ಹಾಗೂ ನಾಯಕರ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು ಆರೋಪವಾಗಿವೆ ಎಂದು ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಸ್ಪಷ್ಟನೆ ನೀಡಿದರು. ನಮ್ಮ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ಸುರೇಶ್ ಅವರು ಫೋನ್ ಕರೆ ಸ್ವೀಕರಿಸಲಿಲ್ಲ, ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ ಅನ್ನುವ ಕಾರಣಕ್ಕೆ ಹಾಗೂ ನಮ್ಮ ನಾಯಕರ ಮೇಲೆ ಮತ್ತು ಕಾಂಗ್ರೆಸ್ ಮುಖಂಡರುಗಳ ಮೇಲೆ ಆರೋಪ ಮಾಡಿ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಯಾಗಿರುವ ಪ್ರಸನ್ನ ಅವರ ಹೇಳಿಕೆ ಸರಿಯಾದುದಲ್ಲ ಎಂದರು. ಅವರು ಗುರುವಾರ ನಗರದ ಕೆಇಬಿ ಪಕ್ಕದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.


ಪ್ರಸನ್ನ ಪಿ. ಗೌಡರವರು ಕಾಂಗ್ರೆಸ್‍ನ ತತ್ವಸಿದ್ಧಾಂತಗಳನ್ನು ಒಪ್ಪಿ ಡಿ ಕೆ ಸಹೋದರರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ತಾಲ್ಲೂಕಿನ ಎಲ್ಲಾ ಮುಖಂಡರು, ಕಾರ್ಯಕರ್ತರು ಸ್ವಾಗತ ಮಾಡಿ ಅವರಿಗೆ ಬೆಂಬಲವಾಗಿ ನಿಂತು ತಾಲ್ಲೂಕಿನ ಪ್ರತಿ ಹಳ್ಳಿಗಳಿಗೂ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕೆಲಸಗಳು ತಲುಪಬೇಕು ಎಂದು ಅವರ ಜೊತೆ ಸೇರಿ ಅವರ ಕೈ ಬಲ ಪಡಿಸಿದೆವು. 

ಅವರು ಭಾರತ್ ಜೋಡೋ ಕಾರ್ಯಕ್ರಮದಲ್ಲಿ ನಮ್ಮ ನಾಯಕರ ನಡುವೆ ಸ್ವಲ್ಪ ಭಿನ್ನಾಭಿಪ್ರಾಯ ಉಂಟಾಗಿ ಸುಮಾರು ಎರಡು ತಿಂಗಳು ತಟಸ್ಥವಾಗಿದ್ದರು. ನಂತರ ಅವರೇ ಕಾಂಗ್ರೆಸ್ ಕಾರ್ಯಕ್ರಮಗಳಿಗೆ ಆಗಮಿಸಿ, ನಾನು ತಾಲ್ಲೂಕಿನಲ್ಲಿ ಪಕ್ಷ ಸಂಘಟನೆಗೆ ಮುಂದಾದರು.


ಇವರು ಬರುವ ಮುಂಚೆಯೇ ಕಾಂಗ್ರೆಸ್‍ನಿಂದ 7ಜನ ಅಭ್ಯರ್ಥಿ ಆಕಾಂಕ್ಷಿಗಳಾಗಿ ಕೆಪಿಸಿಸಿ ಕಛೇರಿಗೆ ಅರ್ಜಿ ಸಲ್ಲಿಸಿದ್ದೆವು, ಕೊನೆಯಲ್ಲಿ ಇವರು 8ನೇ ಅಭ್ಯರ್ಥಿ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದರು. ಅದೇ ಸಂದರ್ಭದಲ್ಲಿ ಅವರು ಕ್ಷಮೆ ಯಾಚಿಸಿ, ತದನಂತರ ತಾಲ್ಲೂಕಿನ ಜವಾಬ್ದಾರಿ ಕಾಂಗ್ರೆಸ್ ಇವರಿಗೆ ಕೊಟ್ಟಿತ್ತು. ಅವರಲ್ಲಿ ರಾಜಕಾರಣದ ಇಚ್ಛಾಶಕ್ತಿ ಕಡಿಮೆ ಇತ್ತು, ಎಲ್ಲರನ್ನೂ ಒಟ್ಟಾಗಿ ನಿಭಾಯಿಸುವ ಶಕ್ತಿ ಅವರಲ್ಲಿ ಇರಲಿಲ್ಲ. ನಾವಾಗಲೀ, ಬೇರೆಯವರ ಪ್ರಸನ್ನ ಅವರ ವಿರುದ್ಧ ಯಾವತ್ತೂ ಡಿ ಕೆ ಸಹೋದರರಿಗೆ ಚಾಡಿ ಹೇಳಿಲ್ಲ. ಅವರು ಸುಖಾಸುಮ್ಮನೆ ನಮ್ಮ ಮೇಲೆ ಆರೋಪ ಮಾಡಿದ್ದಾರೆ. 

ಮೊದಲ ಪಟ್ಟಿಯಲ್ಲಿಯೇ ನನ್ನ ಹೆಸರು ಬರಬೇಕು ಎಂದು ಹೇಳುತ್ತಾರೆ. ಎಐಸಿಸಿ ಯಲ್ಲಿ ಅನುಮೋದನೆಯಾಗಬೇಕು. ಸ್ಕ್ರೀನಿಂಗ್ ಕಮಿಟಿಯಲ್ಲಿ ಆಯ್ಕೆ ಪ್ರಕ್ತಿಯೆ ನಡೆಯುತ್ತದೆ. ನಂತರ ಅಭ್ಯರ್ಥಿಗಳನ್ನು ಘೋಷಿಸುತ್ತಾರೆ. ಇವರಿಗೆ ಕಾಯುವ ತಾಳ್ಮೆ ಇರಲಿಲ್ಲ. ಅವರ ಕಾಯಬೇಕಿತ್ತು.


ಕೆಂಗಲ್ ಸಭೆ ಮಾಡಿದ್ದಾಗ, ಡಿ.ಕೆ. ಸುರೇಶ್ ಅವರು ಪ್ರಸನ್ನ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ತನ್ನದೇ ಆದ ತತ್ವ ಸಿದ್ಧಾಂತವಿದ್ದು, ಪಕ್ಷದ ತತ್ವಸಿದ್ಧಾಂತಕ್ಕೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಹೇಳಿದ್ದರು. ಆದರೆ, ಫೋನ್ ತೆಗೆಯಲಿಲ್ಲ ಎಂದು ಕಾರಣ ಕೊಡುವುದು ಸರಿಯಾದುದಲ್ಲ. 

ರಾಜಕಾರಣಿಯಾಗಬೇಕಾದರೆ, ಶಾಸಕ ಆಗಬೇಕಾದರೆ ಅದರದ್ದೇ ಆದ ಶ್ರಮವಿರುತ್ತದೆ. ಪಕ್ಷ ಏನು ಹೇಳುತ್ತದೆ. ಅದಕ್ಕೆ ನಾವು ಬದ್ಧರಾಗಬೇಕು. ಅವರು ಪಕ್ಷ ತೊರೆದು ಹೋಗಬೇಕಿತ್ತು. ಅದಕ್ಕೆ ನಮ್ಮ ನಾಯಕರ ಮತ್ತು ಮುಖಂಡರುಗಳ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಹೋಗಿದ್ದಾರೆ. 

ನಾವು ಅವರಿಲ್ಲದ ಸಮಯದಲ್ಲಿಯೂ ಹಿಂದೆ ನಗರಸಭೆ ಚುನಾವಣೆ, ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಎದುರಿಸಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ  ಯಾರು ಅನಿವಾರ್ಯವಲ್ಲ, ಕಾಂಗ್ರೆಸ್‍ನಲ್ಲಿ ಪಕ್ಷವೇ ಮುಖ್ಯವಾಗಿದೆ. ವ್ಯಕ್ತಿಯಲ್ಲ ಎಂದು ತಿಳಿಸಿದರು.


ಸಂದರ್ಭದಲ್ಲಿ ನಗರಾಧ್ಯಕ್ಷ ಸುನೀಲ್, ತಾಲ್ಲೂಕು ಮಹಿಳಾ ಅಧ್ಯಕ್ಷೆ ಜಯಶೀಲ, ರೇಣುಕಮ್ಮ, ಮುಖಂಡರಾದ ಬೋರ್‍ವೆಲ್ ರಂಗನಾಥ್, ಡಾ ಭಗತ್‍ರಾಮ್, ಚಂದ್ರಸಾಗರ್, ವೈ.ಟಿ.ಹಳ್ಳಿ ಶಿವು, ನಗರಸಭೆ ಸದಸ್ಯರಾದ ವಾಸೀಲ್‍ಆಲಿಖಾನ್, ಮತೀನ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶರತ್, ಶಿವಕುಮಾರ್ ಮುಂತಾದವರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑