ಸರ್ಕಾರಿ ರೇಷ್ಮೆ ತರಬೇತಿ ಕೇಂದ್ರದಲ್ಲಿ ಖಾಸಗಿ ವ್ಯಕ್ತಿಯಿಂದ ಬೇಲಿ
ಚನ್ನಪಟ್ಟಣ.ಮಾ.೨೮: ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ಹೆಚ್ಚಾಗುತ್ತಿದ್ದು ಇದಕ್ಕೆ ನಿದರ್ಶನವೆಂಬಂತೆ ನಗರದ ಹೊರವಲಯದಲ್ಲಿರುವ ಸರ್ಕಾರಿ ರೇಷ್ಮೆ ತರಬೇತಿ ಕೇಂದ್ರದ ಆವರಣದ ಮುಂಭಾಗ ಹೈವೇ ರಸ್ತೆಯ ಪಕ್ಕದಲ್ಲಿರುವ ತರಬೇತಿ ಕೇಂದ್ರದ ತಡೆಗೋಡೆ ಸೇರಿಸಿಕೊಂಡು ೧ ಎಕರೆ ೨೦ ಗುಂಟೆ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡು ಒಂದೇ ದಿನದಲ್ಲಿ ತಂತಿ ಬೇಲಿ ನಿರ್ಮಿಸಿ, ಒಂದು ಶೆಡ್ ಸಹ ನಿರ್ಮಿಸಿರುವ ಘಟನೆ ನಡೆದಿದೆ.
ನೂರಾರು ವರ್ಷಗಳ ಇತಿಹಾಸವಿರುವ ಈ ಸರ್ಕಾರಿ ಜಾಗವನ್ನು ಏಕಾ ಏಕಿ ಖಾಸಗಿ ವ್ಯಕ್ತಿಗಳಾದ ಡಾ ಎಫ್ಎಂ ಮೊಯಿದ್ದೀನ್ ಅಹಮದ್ ಹಾಗೂ ಹೊಂಗನೂರು ಪ್ರಕಾಶ್ ಮತ್ತಿತರರು ನುಸುಳಿ ಈ ರೀತಿಯಲ್ಲಿ ವಶಪಡಿಸಿಕೊಂಡಿರುವುದು ತುಕ್ಕು ಹಿಡಿದಿರುವ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎನ್ನಬಹುದು. ಈ ತರಬೇತಿ ಆವರಣದಲ್ಲಿ ಮೂರು ಮುಖ್ಯ ಅಂಗ ಸಂಸ್ಥೆಗಳು ಕೆಲಸ ನಿರ್ವಹಿಸುತ್ತಿದ್ದು, ಅಧಿಕಾರಿಗಳು ಇದು ತಮ್ಮ ವ್ಯಾಪ್ತಿಗೆ ಬರುವುದಿಲ್ಲ, ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಬೇಜಾವಬ್ದಾರಿ ವಹಿಸಿದ್ದರಿಂದಲೇ ಈ ರೀತಿಯ ಅಕ್ರಮನುಸುಳಿವಿಕೆಗೆ ಕಾರಣವಾಗಿದೆ ಎನ್ನಬಹುದು.
ಡಾ.ಎಫ್.ಎಂ ಮೊಹಿದ್ದೀನ್ ಅಹಮದ್ ಎಂಬುವವರು ಕಳೆದ ೧೨ರಂದು ಅಕ್ರಮವಾಗಿ ತರಬೇತಿ ಕೇಂದ್ರದ ಜಾಗಕ್ಕೆ ನುಸುಳಿ ಈ ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ೧೪ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು ಇದಕ್ಕೆ ಇನ್ನು ಮುಕ್ತಿ ಯಾವಾಗ ದೊರೆಯುತ್ತದೆಯೋ ಕಾಯುವುದಷ್ಟೇ ತಾಲ್ಲೂಕಿನ ಜನರ ಕೆಲಸವಾಗಿದೆ.
ಸಾರ್ವಜನಿಕವಾಗಿ ಕಣ್ಣಿಗೆ ಕಾಣುವ ಸರ್ಕಾರಿ ಜಾಗಗಳಿಗೆ ಈ ರೀತಿಯ ದುರವಸ್ಥೆ ಉಂಟಾದರೆ ಇನ್ನು ಕಾಣದ ಜಾಗಗಳು ಇನ್ನೆಷ್ಟು ಒತ್ತುವರಿಯಾಗಿಬೇಡ? ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ನ್ಯಾಯಾಲಯದ ಮುಂದೆ ಪ್ರಕರಣ ಹೋದರೆ ಎಷ್ಟು ವರ್ಷಗಳಾಗುತ್ತವೋ ಎಂಬುದು ಯಾರಿಗೂ ತಿಳಿಯುವುದಿಲ್ಲ. ಸಂಬಂಧಿಸಿದ ಉನ್ನತ ಅಧಿಕಾರಿಗಳು ಭೇಟಿ ನೀಡಿ, ಶೀಘ್ರವಾಗಿ ದಾಖಲೆಗಳನ್ನು ಪರಿಶೀಲಿಸಿ, ತಂತಿ ಬೇಲಿ ಮತ್ತು ಶೆಡ್ ತೆರವುಗೊಳಿಸಬೇಕು. ಅಕ್ರಮವಾಗಿ ನಿರ್ಮಿಸಿದ ವ್ಯಕ್ತಿಗಳಿಗೆ ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಾನೂನು ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರು ಒತ್ತಾಸೆಯಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು