ಪಾನಿಪೂರಿ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ತುಂಡಾದ ಬಾಲಕನ ಕೈಬೆರಳುಗಳು
ಚನ್ನಪಟ್ಟಣ.ಏ.೦೭: ಪಾನಿ ಪುರಿ ತಯಾರಿಸುವ ಪ್ಯಾಕ್ಟರಿಯಲ್ಲಿ ಅಕ್ರಮವಾಗಿ ಬಾಲಕಾರ್ಮಿಕನನ್ನು ಕೆಲಸಕ್ಕೆ ಬಳಸಿಕೊಂಡಿದ್ದು, ಮೆಷಿನ್ನಲ್ಲಿ ಕೆಲಸ ಮಾಡುವಾಗ ಬಾಲಕ ಕೈ ಬೆರಳುಗಳು ತುಂಡಾಗಿರುವ ಘಟನೆ ನಡೆದು ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ತಾಲ್ಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ನಿವಾಸಿ ಸಾಕಮ್ಮ ಎಂಬುವವರು ಅದೇ ಗ್ರಾಮದ ವಿಕಾಸ್ ಎಂಬುವವರ ಪಾನಿಪುರಿ ಪ್ಯಾಕ್ಟರಿಯಲ್ಲಿ ಕಳೆದ ೨ ತಿಂಗಳಿನಿಂದ ಕೆಲಸ ಮಾಡುತ್ತಿದ್ದರು. ಇವರ ಮಗನಾದ ಚೇತನ್(೧೫) ೮ನೇ ತರಗತಿಯಲ್ಲಿ ಓದುತ್ತಿದ್ದು, ಈಗ ಬೇಸಿಗೆ ರಜೆ ಇದ್ದುದರಿಂದ ತಾಯಿ ಕೆಲಸ ಮಾಡುವ ಸ್ಥಳಕ್ಕೆ ಆಗಾಗ್ಗೆ ಹೋಗುತ್ತಿದ್ದಾಗ ಪ್ಯಾಕ್ಟರಿ ಮಾಲೀಕರು ಅವನ ಕೈಯಲ್ಲಿ ಪಾನಿಪುರಿ ಹಿಟ್ಟನ್ನು ತುಳಿಸುವ ಕೆಲಸ ಮಾಡಿಸಿತ್ತಿದ್ದರು. ಅದಕ್ಕೆ ಹಣವನ್ನು ಕೊಡುತ್ತಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಸಾಕಮ್ಮನವರಿಗೆ ಹುಷಾರಿಲ್ಲದ ಕಾರಣ ಕೆಲಸಕ್ಕೆ ಹೋಗುವುದು ತಡವಾಗಿದ್ದು ಅದನ್ನು ತಿಳಿಸಲು ಮಗನನ್ನು ಪ್ಯಾಕ್ಟರಿಗೆ ಕಳುಹಿಸಿಕೊಟ್ಟಿದ್ದಾರೆ. ಆಗ ಮಾಲೀಕ ನಿಮ್ಮ ತಾಯಿ ಬರುವವರೆಗೂ ಕೆಲಸ ಮಾಡು ಎಂದು ಮೆಷಿನ್ ಬಳಿ ಕೆಲಸಕ್ಕೆ ಬಿಟ್ಟಿದ್ದಾರೆ. ಅವರ ತಾಯಿ ಪ್ಯಾಕ್ಟರಿಯ ಬಳಿ ಬಂದು ನೋಡಿದಾಗ ಮಗನ ಕೈಯಲ್ಲಿ ರಕ್ತ ಬರುತ್ತಿದ್ದು, ಆತ ಮೆಷಿನ್ ನಲ್ಲಿ ಕೆಲಸ ಮಾಡುವಾಗ ಬಲಗೈ ಮೆಷಿನ್ಗೆ ಸಿಕ್ಕಿ ಎರಡು ಬೆರುಗಳಿಗೆ ಗಾಯವಾಗಿದ್ದು ಆತನನ್ನು ಸಾರ್ವಜನಿಕರ ಸಹಾಯದಿಂದ ಇಲ್ಲಿನ ಬಿಜೆ ಲಿಂಗೇಗೌಡ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಈ ಸಂಬಂಧ ಬಾಲಕನ ತಾಯಿ ಸಾಕಮ್ಮ ಪೂರ್ವ ಪೊಲೀಸ್ ಠಾಣೆಯಲ್ಲಿ ವಿಕಾಸ್ ಎಂಬುವವರ ವಿರುದ್ಧ ದೂರು ನೀಡಿದ್ದು, ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಆಕಾಶ್ ಬಿ ಪತ್ತಾರ್ ರವರು ಠಾಣಾ ಮೊಕದ್ದಮೆ ೨೦/೨೦೨೩, ಮಕ್ಕಳ ಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು