ಜನ ಸ್ನೇಹಿಯಾದ ಕಾವೇರಿ 2.0 ತಂತ್ರಾಶ ಇಂದಿನಿಂದಲೇ ಜಾರಿ. ಜಿಲ್ಲಾ ನೋಂದಣಾಧಿಕಾರಿ ಸವಿತಾಲಕ್ಷ್ಮಿ
ಚನ್ನಪಟ್ಟಣ: ಕಷ್ಟಪಟ್ಟು ದುಡಿದು ಮನೆ, ಒಂದಷ್ಟು ಆಸ್ತಿಯನ್ನು ಕೊಳ್ಳಲು ಹಾಗೂ ಕಷ್ಟಕ್ಕಾಗಿಯೋ, ಹೆಚ್ಚಿನ ಉದ್ದಿಮೆಗಾಗಿಯೋ ಮಾಡಿಟ್ಟ ಆಸ್ತಿಯನ್ನು ಮಾರುವವರು ದಿನಗಟ್ಟಲೆ ಕಾಯುವುದನ್ನು ತಪ್ಪಿಸಲೆಂದೇ ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವ ಸಲುವಾಗಿ ಕಾವೇರಿ 2.0 ತಂತ್ರಾಂಶವನ್ನು ಅನುಷ್ಟಾನಕ್ಕೆ ತರಲಾಗಿದೆ. ಮಾರುವವರು, ಕೊಳ್ಳುವವರ ಜೊತೆಗೆ ಹಲವಾರು ದಾಖಲೆಗಳನ್ನು ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಪಡೆಯಲು ಸಹ ಈ ತಂತ್ರಾಂಶ ಉಪಯುಕ್ತವಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ಸವಿತಾಲಕ್ಷ್ಮಿ ತಿಳಿಸಿದರು. ಅವರು ನಗರದ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾವೇರಿ 2.0 ತಂತ್ರಾಂಶವನ್ನು ಇದೇ ವರ್ಷದ ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಾಗಿದ್ದು, ರಾಜ್ಯದಲ್ಲಿ ಈಗಾಗಲೇ ಹಲವಾರು ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ತಂತ್ರಾಂಶವು ಜನಸ್ನೇಹಿ ನೋಂದಣಿ ವ್ಯವಸ್ಥೆಯಾಗಿದೆ. ಅರ್ಜಿದಾರರಿಗೆ ಸುಲಭ ಹಾಗೂ ಸರಳವಾಗಿ ನೋಂದಣಿ ಮಾಡಿಕೊಳ್ಳಲು ಸಹಾಯ ಮಾಡುತ್ತಿದ್ದು, ಸಂಪೂರ್ಣ ಆನ್ಲೈನ್ ಆಗಿದೆ. ಸರ್ವರ್ ಡೌನ್ ಸಹ ಆಗುವುದಿಲ್ಲ ಎಂದರು.
ನೋಂದಣಿಯಾದ ನಂತರ ಪ್ರತಿಯನ್ನು ನೇರವಾಗಿ ಪಡೆಯಬಹುದು ಅಥವಾ ಡಿಜಿ ಲಾಕರ್ ತಂತ್ರಾಂಶದಲ್ಲಿಯೂ ಸಹ ಪ್ರತಿ ಲಭ್ಯವಿರುತ್ತದೆ. ಈ ತಂತ್ರಾಂಶದ ಸಹಾಯದಿಂದ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳ ಮಾಹಿತಿಯು ಲಭ್ಯವಾಗಲಿದೆ. ಅಲ್ಲದೇ ಇ-ಆಸ್ತಿ ಮತ್ತು ಇ-ಸ್ವತ್ತು ಸಹ ಜೋಡಣೆಯಾಗಿರುತ್ತದೆ ಎಂದು ತಿಳಿಸಿದರು.
ಅರ್ಜಿ ಸಲ್ಲಿಸಿದ ನಂತರ ತಿದ್ದುಪಡಿ ಮಾಡಲು ಸಹ ಕಾವೇರಿ 2.0 ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಕೆ2 ಚಲನ್ ಪಡೆದು ನೋಂದಣಿ ಕಾರ್ಯಮಾಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.
ಚನ್ನಪಟ್ಟಣ ದ ನೋಂದಣಾಧಿಕಾರಿ ಕಛೇರಿಯು ವಿಸ್ತಾರವಾಗಿಲ್ಲದಿರುವುದರಿಂದ ಇಲಾಖೆಯಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿಲ್ಲ. ಬಹುತೇಕ ಎಲ್ಲಾ ರಾಜ್ಯದ ಹಲವಾರು ಕಚೇರಿಗಳಲ್ಲಿ ಈಗಾಗಲೇ ಕಾಯ್ದಿರಿಸಲಾದ ಕೊಠಡಿ, ಶಿಶು ಪಾಲನ ಸ್ಥಳ, ಅವಶ್ಯವಿರುವ ಕಡೆ ಲಿಫ್ಟ್, ವಿಶೇಷಚೇತನರಿಗೆ ವೀಲ್ಹ್ ಚೇರ್ಗಳ ವ್ಯವಸ್ಥೆ, ನೋಂದಣಿ ಪ್ರದೇಶ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇಲ್ಲಿಯೂ ಸರ್ಕಾರ ಉತ್ತಮ ಜಾಗ ನೀಡಿದರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಉತ್ತಮ ಜಾಗಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಸ್ಪನ್ ಸಿಲ್ಕ್ ಮಿಲ್ ನಲ್ಲಿ ನೀಡಿದ ಜಾಗ ನೆನೆಗುದಿಗೆ ಬಿದ್ದಿದೆ. ನಗರಸಭೆ, ಪ್ರಾಧಿಕಾರ ಅಥವಾ ರೆವಿನ್ಯೂ ಜಾಗವನ್ನು ಸಂಬಂಧಿಸಿದವರು ನೀಡಲು ಕೋರಲಾಗಿದೆ ಎಂದರು.
ಕಾವೇರಿ 2.0 ತಂತ್ರಾಂಶದ ಕುರಿತು ಈಗಾಗಲೇ ಸಹಾಯವಾಣಿ ಸಹ ಸ್ಥಾಪಿಸಲಾಗಿದ್ದು, ಸಂಖ್ಯೆ: 080-68265316 ಯಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ದಸ್ತಾವೇಜು ನೋಂದಣಿ, ಸಾಮಾನ್ಯ ಅಧಿಕಾರ ಪತ್ರ, ಚರ ಮತ್ತು ಸ್ಥಿರಾಸ್ತಿ ಅಡಮಾನ ಪತ್ರಗಳು, ಗುತ್ತಿಗೆ ಒಪ್ಪಂದ ಕರಾರು, ಮರಣ ಶಾಸನಗಳು, ದಾನ, ವಿಭಾಗ ಪತ್ರಗಳು, ಇಸಿ ಮತ್ತು ಸಿಸಿ ಇತ್ಯಾದಿಗಳನ್ನು ಇನ್ನು ಮುಂದೆ ಕಾವೇರಿ ತಂತ್ರಾಂಶದ ಮುಖಾಂತರವೇ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪನೋಂದಣಾಧಿಕಾರಿ ಮೇನಕಾ, ಸೀಡಾಕ್ ಇಂಜಿನಿಯರ್ ಲೋಕೇಶ್, ಸಿಬ್ಬಂದಿ ವರ್ಗ, ಪತ್ರ ಬರಹಗಾರರು ಹಾಗೂ ನೋಂದಣಿಗಾಗಿ ಬಂದಿದ್ದ ಗ್ರಾಹಕರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು