ಮೂರು ಮಂದಿ ಪಕ್ಷೇತರರರಿಂದ ನಾಮಪತ್ರ ವಾಪಸ್, ಯೋಗೇಶ್ವರ್ ಗೆ ಬೆಂಬಲ
ಚನ್ನಪಟ್ಟಣ: ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿದ್ದ ಮೂರು ಮಂದಿ ಸೋಮವಾರ ನಾಮಪತ್ರಗಳನ್ನು ವಾಪಸ್ ಪಡೆದು ಯೋಗೇಶ್ವರ್ ಗೆ ಬೆಂಬಲ ಸೂಚಿಸಿದ್ದಾರೆ. ಸ್ಥಳೀಯ ಅಭ್ಯರ್ಥಿಗಳೇ ಗೆಲ್ಲಬೇಕು, ಮತ್ತಷ್ಟು ನೀರಾವರಿ ಜೊತೆಗೆ ತಾಲ್ಲೂಕು ಅಭಿವೃದ್ಧಿ ಹೊಂದಬೇಕು. ಜೊತೆಗೆ ಅವರಿಗೆ ರಾಜಯೋಗವಿದ್ದು, ಮುಖ್ಯಮಂತ್ರಿ ಆಗುವ ಭಾಗ್ಯವಿರುವುದರಿಂದ, ಬೆಂಬಲ ಸೂಚಿಸಿ ನಾಮಪತ್ರ ಹಿಂದಕ್ಕೆ ಪಡೆದ ಮೂರು ಮಂದಿ ಅಭ್ಯರ್ಥಿಗಳು ಹಾಡಿ ಹೊಗಳಿದರು.
ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ ಮೂರು ಮಂದಿ ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದು, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ನಗರದ 5ನೇ ಅಡ್ಡರಸ್ತೆಯಲ್ಲಿರುವ ತಾಲೂಕು ಬಿಜೆಪಿ ಕಚೇರಿಯಲ್ಲಿ ಸೋಮವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಾಮಪತ್ರ ಹಿಂದಕ್ಕೆ ಪಡೆದ ಅಭ್ಯರ್ಥಿಗಳು, ಸ್ಥಳೀಯರು ಹಾಗೂ ತಾಲೂಕಿನ ನೀರಾವರಿ ಯೋಜನೆಗೆ ಯೋಗೇಶ್ವರ್ ಕೊಡುಗೆ ನೀಡಿದ್ದಾರೆ ಎಂಬುದನ್ನು ಸ್ಮರಿಸಿಕೊಂಡು ನಾಮಪತ್ರ ಹಿಂದಕ್ಕೆ ಪಡೆದು ಯೋಗೇಶ್ವರ್ ಅವರಿಗೆ ಬೆಂಬಲ ನೀಡುತ್ತಿರುವುದಾಗಿ ಘೋಷಿಸಿದರು.
ಸ್ಥಳೀಯರನ್ನೇ ಬೆಂಬಲಿಸಿ:
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಾಮಪತ್ರ ಹಿಂದಕ್ಕೆ ಪಡೆದ ಅಭ್ಯರ್ಥಿ ಹನಿಯೂರು ಚಂದ್ರೇಗೌಡ, ಪ್ರಾದೇಶಿಕ ಪಕ್ಷ ಎಂದು ಹೇಳಿಕೊಂಡು ಹೊರಗಿನ ಅಭ್ಯರ್ಥಿಗಳನ್ನು ಮತ್ತೊಂದು ಕ್ಷೇತ್ರದಲ್ಲಿ ಕಣಕ್ಕಿಳಿಸುವುದು ನೈತಿಕವಾಗಿ ಹಾಗೂ ಸೈದ್ದಾಂತಿಕವಾಗಿ ಸರಿಯಲ್ಲ. ಸ್ಥಳೀಯರೇ ನಮ್ಮ ಪ್ರತಿನಿಧಿಯಾಗಬೇಕು ಎಂಬುದು ಪ್ರಜಾಪ್ರಭುತ್ವದ ಆಶಯ. ಇದನ್ನು ಮೂಲಮಂತ್ರವಾಗಿಸಿಕೊಂಡು ನಾವು ಸ್ಥಳೀಯರನ್ನು ಆಯ್ಕೆಮಾಡೋಣ ಎಂಬ ಉದ್ದೇಶದಿಂದ ಯೋಗೇಶ್ವರ್ ಅವರಿಗೆ ಬೆಂಬಲ ಸೂಚಿಸುತ್ತಿದ್ದೇವೆ ಎಂದು ತಿಳಿಸಿದರು.
ಇನ್ನು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹಿರಿಯ ವಕೀಲ ಜೆ.ಟಿ.ಪ್ರಕಾಶ್, ನನ್ನ ತಾತ ಬಿ.ಜೆ.ಲಿಂಗೇಗೌಡರು ಈ ಕ್ಷೇತ್ರದ ಶಾಸಕರಾಗಿ ಜನಹಿತಕ್ಕಾಗಿ ದುಡಿಯುತ್ತಿದ್ದರು. ಅವರಂತೆ ಯೋಗೇಶ್ವರ್ ಅವರು ಸಹ ಜನರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ. ಇವರ ಈ ಗುಣವನ್ನು ಮೆಚ್ಚಿ ನಾನು ನನ್ನ ನಾಮಪತ್ರ ಹಿಂದಕ್ಕೆ ಪಡೆದು ಯೋಗೇಶ್ವರ್ ಅವರನ್ನು ಗೆಲ್ಲಿಸಲು ಈ ಬಾರಿ ಅವರೊಂದಿಗೆ ಶ್ರಮಿಸುತ್ತಿದ್ದೇನೆ ಎಂದು ಘೋಷಿಸಿದರು.
ಬೆಂಬಲಕ್ಕೆ ಧನ್ಯವಾದ:
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್,ಈ ಬಾರಿಯ ಚುನಾವಣೆಯಲ್ಲಿ ನನ್ನ ಸ್ವಾಭಿಮಾನದ ಸಂಕಲ್ಪಕ್ಕೆ ಸ್ಪಂದಿಸಿದ, ಹಿರಿಯ ವಕೀಲ ಜೆ.ಟಿ.ಪ್ರಕಾಶ್, ಉಪನ್ಯಾಸಕ ಹನಿಯೂರು ಚಂದ್ರೇಗೌಡ, ಮಾಜಿ ಗ್ರಾಪಂ ಸದಸ್ಯ ಮಾರ್ಚನಹಳ್ಳಿ ಯೋಗೇಶ್ ನಾಮಪತ್ರ ಹಿಂದಕ್ಕೆ ಪಡೆದು ಬೆಂಬಲ ಸೂಚಿಸಿದ್ದಾರೆ. ಇನ್ನೂ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ಪಡೆದು ನನ್ನನ್ನು ಬೆಂಬಲಿಸಲಿದ್ದಾರೆ. ಇವರೆಲ್ಲರ ಬೆಂಬಲಕ್ಕೆ ನಾನು ಅಬಾರಿ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ಕುಮಾರ್, ಬಿಜೆಪಿ ಮುಖಂಡ ಮಾಸ್ತೀಗೌಡ, ಕೆ.ವಿ.ಪುಟ್ಟಸ್ವಾಮಿಗೌಡ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು