ಚುನಾವಣೆಯಲ್ಲಿ ಮತದಾರರೆಲ್ಲರೂ ರಾಯಭಾರಿಗಳಾಗಬೇಕು. ಗಂಗಾಧರ್
ರಾಮನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಚುನಾವಣಾ ರಾಯಭಾರಿಗಳಾಗಿ ಮತದಾನ ಮಾಡುವ ಮೂಲಕ ನಿಮ್ಮ ಕುಟುಂಬದವರನ್ನು ಪ್ರೇರಿಪಿಸಿ ಮತ ಹಾಕಿಸಿ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ತಿಳಿಸಿದರು.
ತಾಲ್ಲೂಕಿನ ದೊಡ್ಡಗಂಗವಾಡಿ ಗ್ರಾಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ತಮ್ಮ ಮಗಳಾದ ಆರ್. ಯಶಿಕಾ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲರೂ ಪ್ರಜ್ಞಾವಂತ ಮತದಾರರಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಆಶಯ ಈಡೇರಿಸಬೇಕು ಎಂದು ತಿಳಿಸಿದರು.
ಮತದಾನ ಎಂಬುದು ಪವಿತ್ರ ಕಾರ್ಯವಾಗಿದ್ದು, ಮೇ.10ರಂದು ನಡೆಯಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ನೀವೂ, ನಿಮ್ಮ ಕುಟುಂಬವರ್ಗದವರು ಸೇರಿದಂತೆ ಸುತ್ತಮುತ್ತಲಿನ ಸ್ನೇಹಿತರು, ಬಂಧು-ಮಿತ್ರರಿಗೆಲ್ಲಾ ಮತದಾನ ಮಾಡುವಂತೆ ಉತ್ತೇಜಿಸಬೇಕು ಎಂದರು.
ಶಿಕ್ಷಕ ವೀರೇಶಮೂರ್ತಿ ಮಾತನಾಡಿ ಮತದಾನದ ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬಾರದು. ಮತದಾನ ದಿನದಂದು ಯಾವುದೇ ಕೆಲಸ, ಕಾರ್ಯಗಳಿದ್ದರೂ ಬದಿಗೊತ್ತಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಮತಗಟ್ಟೆಗಳಲ್ಲಿ ನೆರಳು, ಕುಡಿಯುವ ನೀರು, ಶೌಚಾಲಯ ಒಳಗೊಂಡಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ವಿ. ಬಾಲಕೃಷ್ಣ ಮಾತನಾಡಿ ಯಾವುದೇ ಆಮಿಷಕ್ಕೆ ಒಳಗಾಗದೆ ವಿವೇಚನೆಯಿಂದ ಮತ ಚಲಾಯಿಸಿಬೇಕು. ದೇಶದ ಅಭಿವೃದ್ಧಿಗೆ ಶ್ರಮಿಕ ವರ್ಗದವರ ಪಾತ್ರ ಪ್ರಮುಖವಾಗಿದ್ದು, ಎಲ್ಲರೂ ಮತದಾನ ಮಾಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೂಡುಗೆ ನೀಡಬೇಕು ಎಂದು ತಿಳಿಸಿದರು.
ವಿಕಲಚೇತನರ ಜಿಲ್ಲಾ ಸ್ವೀಪ್ ಐಕಾನ್ ಕೆ.ಎಸ್. ಮಂಜುನಾಥ್ ಮಾತನಾಡಿ ಒಂದು ಮತದಿಂದ ಬದಲಾವಣೆ ತರಲು ಸಾಧ್ಯ. ಸಂವಿಧಾನ ನೀಡಿರುವ ಮತದಾನ ಹಕ್ಕುನ್ನು ಎಲ್ಲರೂ ತಪ್ಪದೆ ಚಲಾಯಿಸಿ. 80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದ ಮತದಾನ ನೀಡಲು ಅವಕಾಶ ನೀಡಲಾಗಿದೆ. ಮೇ 10ರಂದು ಪ್ರತಿಯೊಬ್ಬ ಮತದಾರರು ವೋಟ್ ಮಾಡಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಿರಿ ಎಂದು ತಿಳಿಸಿದರು.
ಸಾಹಿತಿ ವಿಜಯ್ ರಾಂಪುರ ಮಾತನಾಡಿ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಮತ ಚಾಲಾಯಿಸುವ ಅವಕಾಶವಿದೆ. ಮತದಾನ ಮಾಡುವುದು ಅತ್ಯಮೂಲ್ಯವಾದದ್ದು, ಎಲ್ಲ ಮತದಾರರು ತಪ್ಪದೇ ಮತದಾನ ಮಾಡಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕವಿ ಎಚ್.ವಿ. ಮೂರ್ತಿ ಅವರು ರಚಿಸಿರುವ `ಮತದಾನ' ಗೀತೆಯನ್ನು ಗಾಯಕ ಕೆಂಗಲ್ ವಿನಯ್ ಕುಮಾರ್ ಹಾಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಲೋಕೇಶ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಹಕಾರ್ಯದರ್ಶಿ ಕೆ.ಎಚ್. ಚಂದ್ರಶೇಖರಯ್ಯ, ವಕೀಲ ಹರೀಶ್ ಕುಮಾರ್, ಎಸ್ಡಿಎಂಸಿ ಅದ್ಯಕ್ಷ ರವಿಕುಮಾರ್, ಮುಖಂಡ ಚನ್ನವೀರಪ್ಪ, ಎಂ. ಕುಮಾರ್, ಕಾವ್ಯ, ವಿಕಲಚೇತನರಾದ ಕಬೀರ್, ಸೌರಾನಾಯಕ್, ಮನೋಜ್ ಇತರರು ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು