ಮೋದಿ ಬಂದು ಟಾಟಾ ಮಾಡುತ್ತಾರೆ, ನೀವು ಟಾಟಾ ಮಾಡಿ ಕಳುಹಿಸಿ. ಸಂಸದ ಡಿ ಕೆ ಸುರೇಶ್ ವ್ಯಂಗ್ಯ
ಚನ್ನಪಟ್ಟಣ:ಏ-29: ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗೊತ್ತಿರೋದು ಎರಡೇ, ಒಂದು ಟಾಟಾ ಮಾಡೋದು ಮತ್ತೊಂದು ಮನ್ ಕೀ ಬಾತ್ ನಲ್ಲಿ ಮಾತನಾಡೋದು. ವೇದಿಕೆ ಸಿಕ್ಕಾಗ ಒಬ್ಬರೇ ಮಾತನಾಡೋದು. ಹಾಗಾಗಿ ಟಾಟಾ ಮಾಡಲು ಬರುವ ಪ್ರಧಾನಿ ಮೋದಿರವರಿಗೆ ಮತ್ತು ಬಿಜೆಪಿ ಪಕ್ಷಕ್ಕೆ ಈ ರಾಜ್ಯದಿಂದಲೇ ಟಾಟಾ ಮಾಡಿ ಮನೆಗೆ ಕಳುಹಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಪ್ರಧಾನಿ ನರೇಂದ್ರ ಮೋದಿರವರ ಬಗ್ಗೆ ವ್ಯಂಗ್ಯ ಮಾಡಿದರು.
ಅವರು ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ, ಚನ್ನಪಟ್ಟಣ ತಾಲ್ಲೂಕು ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್.ಗಂಗಾಧರ್ ರವರ ಮತ ಪ್ರಚಾರದ ಸಂದರ್ಭದಲ್ಲಿ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಬರಲಿಲ್ಲ ನೆರೆ ಬಂದು ಹಾಳು ಮಾಡಿದಾಗ ಬರಲಿಲ್ಲ ಕೇವಲ ಚುನಾವಣೆ ಅಂದಾಕ್ಷಣ ಟಾಟಾ ಮಾಡಲು ಬರುತ್ತಿದ್ದಾರೆ ಇದು ಅವರಿಗೆ ಸರಿಯೇ ಎಂದು ಟೀಕಾ ಪ್ರಹಾರ ನಡೆಸಿದರು.
ಸ್ವಾಭಿಮಾನಿಗಳು ಅವರಲ್ಲಾ, ಕನ್ನಡಿಗರಾದ ನಾವು ಸ್ವಾಭಿಮಾನಿಗಳು. ನಮಗೆ ಅವರು ಮಾಡಿರುವ ಟಾಟಾ ಸಾಕುಸಾಕಾಗಿದೆ. ಇನ್ನು ಅವರ ಟಾಟಾ ಬೇಕಾಗಿಲ್ಲ, ಟಾಟಾ ಮಾಡಿಯೇ ರಾಜ್ಯದ ಸರ್ವಜನರ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಬರೆ ಎಳೆದಿದ್ದು ಸಾಕು, ಜನರು ಈ ರಾಜ್ಯದಿಂದ ಬಿಜೆಪಿಯನ್ನು ಎಷ್ಟು ಹೊತ್ತಿಗೆ ಓಡಿಸಬೇಕು ಎಂದು ಕಾತುರತೆಯಿಂದ ಕಾಯುತ್ತಿದ್ದಾರೆ, ಈ ಭಾರಿ ಬಿಜೆಪಿ ಯ ಆಟ ಏನೂ ನಡೆಯುವುದಿಲ್ಲ. ಅಭಿವೃದ್ದಿಗೆ ಮತ್ತೊಂದು ಹೆಸರಾಗಿರುವ ಕಾಂಗ್ರೆಸ್ ಪಕ್ಷವನ್ನು ಅದರಲ್ಲೂ ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್.ಗಂಗಾಧರ್ ವರನ್ನು ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
ಸಾಮಾನ್ಯ ಕಾರ್ಯಕರ್ತರಾದ ಎಸ್.ಗಂಗಾಧರ್ ರವರಿಗೆ ಕಾಂಗ್ರೆಸ್ ಹೈಕಾಮಾಂಡ್ ಚನ್ನಪಟ್ಟಣದ ಅಭ್ಯರ್ಥಿಯಾಗಿ ಬಿ ಪಾರಂ ನೀಡಿರುವುದು, ಕಾಂಗ್ರೆಸ್ ಪಕ್ಷದ ಹಿಂದುಳಿದವರ ಬಡವರ್ಗದವರ ಪಕ್ಷ ಎಂದು ಸಾಬೀತಾಗಿದೆ, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ವಿಧಾನಪರಿಷತ್ತು ಸದಸ್ಯರು ಇನ್ನು ನಾಲ್ಕುವರ್ಷಗಳು ಶಾಸಕರಾಗಿಯೇ ಅಧಿಕಾರ ನಡೆಸಬಹದು ಅವರಿಗೆ ಈ ಚುನಾವಣೆ ಅವಶ್ಯಕವಲ್ಲ ಅಲ್ಲದೆ ಕೇವಲ ಭರವಸೆಗಳನ್ನೇ ನೀಡಿ ಕ್ಷೇತ್ರದ ಜನರನ್ನು ದಿಕ್ಕು ತಪ್ಪಿಸಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿರವರಿಗೆ ಈ ಕ್ಷೇತ್ರದ ಜನರು ಯಾವುದೇ ಕಾರಣಕ್ಕೂ ಆಶೀರ್ವಾದ ಮಾಡುವುದಿಲ್ಲ ಅದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರ ಹಿಡಿಯಲಿದ್ದು ಕಾಂಗ್ರೆಸ್ ಅಭ್ಯರ್ಥಿಯಾದ ನಿಮ್ಮ ಮನೆ ಮಗ ಗಂಗಾಧರ್ ಗೆ ಒಂದು ಅವಕಾಶ ಮಾಡಿಕೊಡಬೇಕೆಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಹೊಂಗನೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ರಂಗನಾಥ್ ಕಳೆದ ಐದು ವರ್ಷಗಳಿಂದ ಅಧಿಕಾರ ನಡೆಸಿದ ಬಿಜೆಪಿ ಪ್ರತಿಯೊಂದು ಸಮುದಾಯದಲ್ಲಿನ ಸರ್ವಜನಾಂಗೀಯರಿಗೆ ಒಂದಲ್ಲ ಒಂದು ರೀತಿಯಲ್ಲಿ ಶೋಷಣೆಯನ್ನು ಮಾಡಿರುವುದರಿಂದ ಜನರು ರೋಸಿಹೋಗಿದ್ದು ಎದುರಾಗಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆಂದರು.
ಕಾಂಗ್ರೆಸ್ ಅಭ್ಯರ್ಥಿ ಎಸ್.ಗಂಗಾಧರ್ ಮಾತನಾಡಿ, ರಾಜ್ಯದಲ್ಲಿ ಜನಪರ ಆಡಳಿತ ನೀಡಲು ಸಮರ್ಥವಾದ ಪಕ್ಷ ಇದ್ದರೇ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಸಾಧನೆ ಏನೆಂದರೆ ಕೇವಲ ಬರಿ ಹಗರಣಗಳನ್ನು ಬಿಟ್ಟರೆ ರಾಜ್ಯದ ಜನರ ಕಷ್ಟಸುಖಗಳನ್ನು ಆಲಿಸದೆ ಕೇವಲ ದುಡ್ಡು ಮಾಡುವ ಸರ್ಕಾರವಾಗಿ ನಿರ್ಮಾಣವಾಯಿತು ಎಂದರು.
ಜನಸಾಮಾನ್ಯರ ದಿನಸಿ ಪದಾರ್ಥಗಳ ಮೇಲೆ ಜಿಎಸ್ಟಿ ಎಂಬ ಬರೆಯನ್ನು ಹಾಕಿ ಭಾರತ ದೇಶದಲ್ಲಿ ಇಲ್ಲಿಯವರೆಗೂ ಆಳಿದ ಯಾವ ಪಕ್ಷಗಳು ಎಸಗದ ಅನ್ಯಾಯವನ್ನು ಬಿಜೆಪಿಯವರು ಮಾಡಿದ್ದಾರೆಂದರೆ ಆಶ್ಚರ್ಯವಿಲ್ಲ, ತಿನ್ನುವ ಅನ್ನ, ಕುಡಿಯುವ ಕಾಫಿ-ಟೀ ಮೇಲೆ ಜಿಎಸ್ಟಿ ಹಾಕಿ ದೇಶದ ಜನರ ಮೇಲೆ ಸವಾರಿ ಮಾಡಿರುವ ಬಿಜೆಪಿಗೆ ಈ ಭಾರಿ ಸೋಲು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗೃಹಜ್ಯೋತಿಯ ಮುಖಾಂತರ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆ ಮುಖಾಂರತರ ಪ್ರತಿಮನೆಗೆ 2,000 ರೂ ಹಣ, ಅನ್ನಭಾಗ್ಯ ಯೋಜನೆಯ ಮುಖಾಂತರ ಪ್ರತಿಮನೆಯ ಪ್ರತಿವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ, ಯುವನಿಧಿ ಯೋಜನೆಯ ಮುಖಾಂತರ ಪ್ರತಿಮನೆಯ ನಿರುದ್ಯೋಗಿ ಪದವೀಧರನಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1,500ರೂ ಉಚಿತ ಹಾಗೂ ಹಲವಾರು ಯೋಜನೆಗಳ ಭರವಸೆಯನ್ನು ನೀಡಿರುವ ಕಾಂಗ್ರೆಸ್ ಪಕ್ಷವನ್ನು ಅಂದರೆ ಪಕ್ಷದ ಅಭ್ಯರ್ಥಿಯಾದ ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಬೇಕೆಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದಿಗ್ಗರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವರಿಗೆ ಶಕ್ತಿ ನೀಡಲು ಕಾಂಗ್ರೆಸ್ ಪಕ್ಷವನ್ನು ಈ ಭಾರಿ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಚಂದ್ರಸಾಗರ್, ಸುರೇಶ್, ಪಾಪು( ಯೋಗೇಶ್), ಎಲೆತೋಟದಹಳ್ಳಿ ಶಿವು, ಸುಣ್ಣಘಟ್ಟದ ಪಾಪಣ್ಣ, ಎ.ಸಿ.ವೀರೇಗೌಡ, ಶಿವಮಾದು, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ಮಹಿಳಾ ಮುಖಂಡರುಗಳಾದ ಕೊಕೀಲ. ಪದ್ಮ ಹಾಗೂ ಹಲವಾರು ಮಂದಿ ಮುಖಂಡರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು