Tel: 7676775624 | Mail: info@yellowandred.in

Language: EN KAN

    Follow us :


ದಲಿತರ ಅಭಿವೃದ್ಧಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕೊಡುಗೆ ಶೂನ್ಯ-ಮತ್ತೀಕೆರೆ ಹನುಮಂತಯ್ಯ ಆರೋಪ

Posted date: 02 May, 2023

Powered by:     Yellow and Red

ದಲಿತರ ಅಭಿವೃದ್ಧಿಗೆ ಮಾಜಿ ಸಿಎಂ ಕುಮಾರಸ್ವಾಮಿ ಕೊಡುಗೆ ಶೂನ್ಯ-ಮತ್ತೀಕೆರೆ ಹನುಮಂತಯ್ಯ ಆರೋಪ

ಚನ್ನಪಟ್ಟಣ: ಕಳೆದ ಚುನಾವಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿಯವರನ್ನು ಅತಿಯಾದ ನಿರೀಕ್ಷೆಯಿಟ್ಟು ಗೆಲ್ಲಿಸಿದಕ್ಕಾಗಿ, ತಾಲ್ಲೂಕಿನ ಜನತೆ ಹಾಗೂ ಅತಿ ಹೆಚ್ಚಾಗಿ ದಲಿತ ಸಮುದಾಯಕ್ಕೆ ಭಾರೀ ನಿರಾಸೆಯನ್ನುಂಟು ಮಾಡಿದ್ದಾರೆ. ತಾಲ್ಲೂಕಿನ ದಲಿತರಿಗೆ ಯಾವುದೇ ಶಾಶ್ವತವಾದ ಕೊಡುಗೆ ನೀಡಿರುವುದಿಲ್ಲ. ದಲಿತ ಅಭಿವೃದ್ಧಿಗೆ ಅವರ ಕೊಡುಗೆ ಶೂನ್ಯ. ದಲಿತ ಸಮಾಜವನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ಅವರು ಗಂಭೀರ ಆರೋಪ ಮಾಡಿದರು.

ಅವರು ನಗರದ 5ನೇ ಕ್ರಾಸ್‍ನಲ್ಲಿನ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.


ಶಾಸಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಮತ್ತೀಕೆರೆ ಹನುಮಂತಯ್ಯ ಅವರು, ಶಾಸಕರಾಗಿ, ಮುಖ್ಯಮಂತ್ರಿಯಾಗಿ, 5 ವರ್ಷ ಅಧಿಕಾರ ನಡೆಸಿದ್ದಾರೆ. ಅವರು ಗುರುತರವಾದ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ತಾಲೂಕಿನ ದಲಿತರ ಬಹು ದಿನಗಳ ಕನಸಾದ ಡಾ. ಬಿ.ಆರ್.ಅಂಬೇಡ್ಕರ್ ಭವನ ಉದ್ಘಾಟಿಸಿದ ಸಂದರ್ಭದಲ್ಲಿ ಇನ್ನೂ 15 ದಿನಗಳಲ್ಲಿ ಸುಸಜ್ಜಿತಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಮಾಡಿ ಕೊಡುತ್ತೇನೆಂದು ವೇದಿಕೆಯಲ್ಲೇ ಭರವಸೆ ನೀಡಿದ್ದರು. ಆ ಭರವಸೆ ಯಾವುದೇ ಕಾರ್ಯರೂಪಕ್ಕೆ ಬಾರದೇ ಇಂದಿಗೂ ಅನಾಥವಾಗಿ ಭರವಸೆಯಾಗಿಯೇ ಉಳಿದಿದೆ ಎಂದು ಕಿಡಿಕಾರಿದರು.


5 ವರ್ಷದ ಶಾಸಕರ ಅವಧಿಯಲ್ಲಿ ಒಂದು ಅಧಿಕಾರಿಗಳ ಸಭೆ ಮಾಡಲಿಲ್ಲ. ಪ್ರಗತಿ ಪರಿಶೀಲನೆ ಸಭೆ ಕರೆಯಲಿಲ್ಲ. ಗ್ರಾಮ ಸಭೆ ಮಾಡಲಿಲ್ಲ. ರೈತರು, ದಲಿತರ ಕುಂದು ಕೊರತೆ ಸಭೆ ಕರೆದು ಚರ್ಚಿಸಲಿಲ್ಲ. ಹಲವು ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನದ ಸಮಸ್ಯೆ,  ದಲಿತರ ಕಷ್ಟ ಸಮಸ್ಯೆಗಳೇನು ಎಂದು ಕೇಳಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಲಿಲ್ಲ. ನಗರ ಪ್ರದೇಶದಲ್ಲಿ ಕಸದ ತ್ಯಾಜ್ಯ ಸಮಸ್ಯೆ, ಖಾಸಗಿ ಬಸ್ ನಿಲ್ದಾಣ, ಯುಜಿಡಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಮುಕ್ತಿ ದೊರಕಿಸಿಕೊಡದೇ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿ, ಭ್ರಷ್ಟಾಚಾರದಲ್ಲಿ ಮುಳುಗುವಂತೆ ಮಾಡಿರುವುದೇ ಕುಮಾರಸ್ವಾಮಿಯವರ ಸಾಧನೆ ಎಂದು ಲೇವಡಿ ಮಾಡಿ, ತಮ್ಮ ದಲಿತ ವಿರೋಧಿ ಧೋರಣೆ, ಉದಾಸೀನತೆಯಿಂದ ಬೇಸತ್ತು ಕೆಲವರು ಈಗಾಗಲೇ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿ ಪ್ರತಿಯೊಬ್ಬ ಸಾಮಾನ್ಯರ ಕೈಗೆ ಸಿಗುವ ಸಿ,ಪಿ.ಯೋಗೇಶ್ವರ್ ಅವರನ್ನು ಬೆಂಬಲಿಸಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆ ಅಗಿದೆ ಎಂದು ತಿಳಿಸಿದರು.

 

ಬಿಜೆಪಿ ಸರ್ಕಾರದ ಕೆಲವು ನಡೆಗೆ ನಮಗೆ ಕೆಲವು ವಿಷಯಗಳಲ್ಲಿ ಅಸಮಾಧಾನವಿದ್ದರೂ, ತಾಲ್ಲೂಕಿನ ಹಿತದೃಷ್ಟಿಯಿಂದ ನಮ್ಮ ತಾಲ್ಲೂಕಿನವರೇ, ನಮ್ಮ ಕೈಗೆ ಸಿಗುವ, ನಮ್ಮ ಕಷ್ಟ, ಸಮಸ್ಯೆಗಳನ್ನು ಆಲಿಸುವ ಮತ್ತು ತಾಲ್ಲೂಕಿನ ದಲಿತರ ಆಶಯಗಳಾದ ಸುಸಜ್ಜಿತ ಬುದ್ಧ ವಿಹಾರ ನಿರ್ಮಾಣ, ಡಾ. ಬಿ.ಆರ್ ಅಂಬೇಡ್ಕರ್ ಮತ್ತು ನಾಡೋಜ ಡಾ. ಸಿದ್ದಲಿಂಗಯ್ಯನವರ ಅಧ್ಯಯನ ಕೇಂದ್ರ ಸ್ಥಾಪನೆಗೆ ಮತ್ತು ಮುಂದಿನ ದಿನಗಳಲ್ಲಿ ನಿಮ್ಮ ಜೊತೆಯಲ್ಲಿ ಇರುತ್ತೇನೆಂದು ಭರವಸೆ ನೀಡಿರುವ  ಸಿ.ಪಿ ಯೋಗೇಶ್ವರ್ ರವರನ್ನು ಈ ಚುನಾವಣೆಯಲ್ಲಿ ತಾಲೂಕಿನ ದಲಿತ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಲು ತೀರ್ಮಾನಿಸಿದ್ದು ನಾವು ಕೂಡ ಸಮುದಾಯದ ಹಿತದೃಷ್ಠಿಯಿಂದ ಸಿ.ಪಿ ಯೋಗೇಶ್ವರ್‍ ರವರ ಗೆಲುವಿಗೆ ದುಡಿಯಲು ಬದ್ಧವಾಗಿದ್ದೇವೆ ಎಂದು ತಿಳಿಸಿದರು.


ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತಲೆಗೆ ಪೆಟ್ಟು ಬಿದ್ದು ರಕ್ತಗಾಯಗೊಂಡರೆ, ಚುನಾವಣಾ ಡ್ರಾಮಾ ಎಂದು ಲೇವಡಿ ಮಾಡಿದ ಕುಮಾರಸ್ವಾಮಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ದಲಿತರು ಗಾಯಗೊಂಡರೆ ಅದು ಡ್ರಾಮಾವಾಗಿ ಕಾಣುತ್ತದೆ, ಆದರೆ ಜೆಡಿಎಸ್ ಅಭ್ಯರ್ಥಿಗಳಿಗೆ ಆ ರೀತಿ ಆಗಿದ್ದರೆ ಈ ರೀತಿ ಹೇಳುತ್ತಿದ್ದರೆ, ಕುಮಾರಸ್ವಾಮಿ ಅವರು ಪ್ರತಿ ಸಭೆ ವೇದಿಕೆಗಳಲ್ಲಿ ಕಣ್ಣಿರು ಹಾಕುತ್ತಾರಲ್ಲ ಅದು ಸ್ವಾಭಾವಿಕ ಕಣ್ಣೀರೇ ಅದು ಡ್ರಾಮಾ ಅಲ್ಲವೇ ಎಂದು ಹನುಮಂತಯ್ಯ ವ್ಯಂಗ್ಯವಾಡಿದರು.  


ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮುಖಂಡರಾದ ಡಾ.ಜಿ.ಲೋಕಾನಂದ, ಶಿವರಾಮು, ಗ್ರಾಪಂ. ಸದಸ್ಯ ಎಂ. ಆರ್.ಹರೀಶ್, ಕಿರಣ್, ಪ್ರದೀಪ್ ರಾಂಪುರ, ಕೃಷ್ಣಯ್ಯ,ಎಂ. ಲೋಕೇಶ್ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑