Tel: 7676775624 | Mail: info@yellowandred.in

Language: EN KAN

    Follow us :


ಅಂಚೆ ಮತದಾರರಿಗೆ ಸಹಿ ಜೊತೆಗೆ ಜೆಡಿಎಸ್ ಗೆ ಮತ ನೀಡಿ ಎಂದ ಅಧಿಕಾರಿ ವಿರುದ್ಧ ದೂರು

Posted date: 04 May, 2023

Powered by:     Yellow and Red

ಅಂಚೆ ಮತದಾರರಿಗೆ ಸಹಿ ಜೊತೆಗೆ ಜೆಡಿಎಸ್ ಗೆ ಮತ ನೀಡಿ ಎಂದ ಅಧಿಕಾರಿ ವಿರುದ್ಧ ದೂರು

ಚನ್ನಪಟ್ಟಣ:

ಮತಗಟ್ಟೆಗೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಗರದ ತಾಲ್ಲೂಕು ಕಛೇರಿಯ ಆವರಣದಲ್ಲಿ ಅಂಚೆ ಮತ ಚಲಾವಣೆಯ ವೇಳೆಯಲ್ಲಿ ಪ್ರಾಂಶುಪಾಲರೊಬ್ಬರು ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ನಡುವೆ ಕೆಲಕಾಲ ಜಟಾಪಟಿ ನಡೆದ ಘಟನೆ ನಗರದ ತಾಲೂಕು ಕಚೇರಿ ಮುಂಭಾಗ ಬುಧವಾರ ನಡೆಯಿತು.


ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು ಮತ್ತು ಇನ್ನಿತರ ಸಿಬ್ಬಂದಿಗಳಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಮಂಗಳವಾರದಿಂದ ಅಂಚೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮಂಗಳವಾರ ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕಿಗೆ ಸಂಬಂಧಿಸಿದಂತೆ ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತಾದರೂ, ಅಂಚೆ ಮತದಾರರ ನಿರಾಸಕ್ತಿ ಹೆಚ್ಚಾಗಿತ್ತು. ಈ ವೇಳೆ ಅಂಚೆಮತದಾನ ಮಾಡಲು ಆಗಮಿಸಿದ ಸರ್ಕಾರಿ ನೌಕರರಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಪ್ರಾಂಶುಪಾಲ ಅಬ್ಬೂರುದೊಡ್ಡಿ ಮಹೇಶ್ ಎಂಬುವವರು ಜೆಡಿಎಸ್ ಅಭ್ಯರ್ಥಿಗೆ ಮತನೀಡುವಂತೆ ಪ್ರಚಾರ ನಡೆಸುತ್ತಿದ್ದು, ಗೆಜೆಟೆಡ್ ಅಧಿಕಾರಿ ಸಹಿ ಜೊತೆಗೆ ಬ್ಯಾಲೆಟ್ ಪೇಪರ್ ನಲ್ಲಿ ಜೆಡಿಎಸ್ ಗುರುತಿಗೆ ಗುರುತು ಮಾಡಿ ಕೊಡುತ್ತಿದ್ದರು ಎಂದು ಬಿಜೆಪಿ ಪಕ್ಷದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಏನಿದು ಆರೋಪ? ಅಂಚೆಮತದಾನ ಮಾಡುವವರು ತಮ್ಮ ಮತಪತ್ರಕ್ಕೆ ಗೆಜೆಟೆಡ್ ಅಧಿಕಾರಿಯೊಬ್ಬರಿಂದ ಸಹಿ ಪಡೆಯುವುದು  ಅಗತ್ಯ. ಕಾಲೇಜೊಂದರ ಪ್ರಾಂಶುಪಾಲರಾಗಿರುವ ಮಹೇಶ್ ಗೆಜೆಟೆಡ್ ಅಧಿಕಾರಿಯಾಗಿದ್ದು, ಅಂಚೆ ಮತಪತ್ರ ಹೊಂದಿರುವ ಕೆಲ ಸಿಬ್ಬಂದಿಗಳಿಗೆ ಸಹಿ ಹಾಕಿಕೊಡುವ ವೇಳೆ ಇವರು ಜೆಡಿಎಸ್ ಅಭ್ಯರ್ಥಿಯ ಪರ ಮತದಾನ ಮಾಡಿದ್ದಾರೆ ಎಂಬುದು ಬಿಜೆಪಿ ಆರೋಪವಾಗಿದೆ. ಮಹೇಶ್ ಅವರನ್ನು ಈ ವಿಚಾರವಾಗಿ ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು ಆಚೆ ಹೋಗುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಮಹೇಶ್ ಅವರ ರಕ್ಷಣೆಗೆ ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ ನಡೆದಿದೆ. ಜೆಡಿಎಸ್ ಮುಖಂಡರು ಮಹೇಶ್ ರವರನ್ನು ಪಾರು ಮಾಡಿದ್ದಲ್ಲದೆ ಅವರ ಕಾರನ್ನು ಸಹ ಬಲವಂತವಾಗಿ ಅನೇಕ ಕಾರ್ಯಕರ್ತರು ಸೇರಿ ಕಛೇರಿಯ ಆವರಣದಿಂದ ಹೊರಗೆ ಕಳುಹಿಸಿದ ಘಟನೆಯೂ ಸಹ ನಡೆದಿದೆ.


ಇದರಿಂದ ಕೆಲ ಕಾಲ ತಾಲೂಕು ಕಚೇರಿ ಆವರಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಿಗೊಳಿಸಿದರು.  ಪ್ರಾಂಶುಪಾಲ ಮಹೇಶ್ ಕಾರಿಗೆ ರಕ್ಷಣೆ ನೀಡಿ ಹೊರಕಳುಹಿಸುವಲ್ಲಿ ಜೆಡಿಎಸ್ ಕಾರ್ಯಕರ್ತರು ಯಶಸ್ವಿಯಾಗಿದ್ದು, ಈ ಕಾರಿನೊಳಗೆ ಚುನಾವಣೆಗೆ ಸಂಬಂಧಿಸಿದ ವಸ್ತುಗಳೇನಾದರೂ ಇರಬಹುದೇ ಎಂಬ ಗುಮಾನಿ ಸಾರ್ವಜನಿಕರಿಗೆ ಕಾಡಿದೆ.


ಜೆಡಿಎಸ್ ಮತ್ತು ಬಿಜೆಪಿ ಯಿಂದ ದೂರು!:  ಗೆಜೆಟೆಡ್ ಅಧಿಕಾರಿಯಾಗಿರುವ ಪ್ರಾಂಶುಪಾಲ ಮಹೇಶ್, ಜೆಡಿಎಸ್ ಪರವಾಗಿ ಪ್ರಚಾರ ನಡೆಸುತ್ತಿದ್ದು, ಅಂಚೆ ಮತದಾರರನ್ನು ಆ ಪಕ್ಷದ ಪರ ಮತ ಚಲಾಯಿಸುವಂತೆ ಪ್ರೇರೆಪಿಸುತ್ತಿದ್ದಾರೆ ಎಂದು ಆರೋಪಿಸಿ, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಚುನಾವಣಾಧಿಕಾರಿಗಳಾದ ಮುನೇಗೌಡ ಹಾಗೂ ತಹಸೀಲ್ದಾರ್ ಮಹೇಂದ್ರ ರವರಿಗೆ ದೂರು ಸಲ್ಲಿಸಿದ್ದು, ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑