Tel: 7676775624 | Mail: info@yellowandred.in

Language: EN KAN

    Follow us :


ಅಂಚೆ ಮತದಾನ ಮಾಡಲು ಬಂದ ಅಧಿಕಾರಿಗೆ ಕುಮಾರಸ್ವಾಮಿ ಆಪ್ತ ಸಹಾಯಕನಿಂದ ಗಾಳ

Posted date: 05 May, 2023

Powered by:     Yellow and Red

ಅಂಚೆ ಮತದಾನ ಮಾಡಲು ಬಂದ ಅಧಿಕಾರಿಗೆ ಕುಮಾರಸ್ವಾಮಿ ಆಪ್ತ ಸಹಾಯಕನಿಂದ ಗಾಳ

ಚನ್ನಪಟ್ಟಣ: ನಗರದ ತಾಲ್ಲೂಕು ಕಛೇರಿಯಲ್ಲಿರುವ ಚುನಾವಣಾಧಿಕಾರಿ ಕಛೇರಿಗೆ ಅಂಚೆಮತದಾನ ಮಾಡಲು ತಾಲೂಕು ಕಚೇರಿಗೆ ಆಗಮಿಸಿದ ಸರ್ಕಾರಿ ಅಧಿಕಾರಿಯೊಬ್ಬರ ಮತಪತ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆಪ್ತ ಸಹಾಯಕ ಕೆಂಚೇಗೌಡ ಎಂಬುವವರು ಗುರುತು ಹಾಕಿ ನೀಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಬಿಜೆಪಿ ಪಕ್ಷದ ಅಭ್ಯರ್ಥಿ ಯ ಚುನಾವಣಾ ಏಜೆಂಟ್ ದಿಲೀಪ್ ರವರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.


ತಾಲ್ಲೂಕಿನಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು ಮತ್ತು ಇನ್ನಿತರ ಸಿಬ್ಬಂದಿಗಳಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಬುಧವಾರ ಅಂಚೆಮತದಾನ ಮಾಡಲು ಬಂದ ಅಧಿಕಾರಿಯೊಬ್ಬರ ಮತಪತ್ರವನ್ನು ಕುಮಾರಸ್ವಾಮಿ ಅವರ ಆಪ್ತ ಸಹಾಯಕ ಕೆಂಚೇಗೌಡ ಎಂಬುವರು ಪಡೆದುಕೊಂಡು ಅದಕ್ಕೆ ಗುರುತುಹಾಕಿ ನೀಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಸರಿಸುಮಾರು ಎರಡು ನಿಮಿಷಗಳಿಗೂ ಹೆಚ್ಚು ಕಾಲ ಅವರಿಬ್ಬರು ಚರ್ಚಿಸಿ, ಲೇಖನಿ ಮತ್ತು ಮತಪತ್ರ ಪಡೆದು ಗುರುತು ಹಾಕುತ್ತಿರುವುದು ವೀಡಿಯೋ ದಲ್ಲಿ ಕಂಡುಬರುತ್ತಿದೆ.


ತಾಲೂಕು ಕಚೇರಿ ಮಹಡಿಯ ಮುಂಭಾಗದ ಪೋರ್ಟಿಕೋ ಮೇಲೆ ನಿಂತುಕೊಂಡೇ ಕೆಂಚೇಗೌಡ ಎಂಬುವವರು ಅಧಿಕಾರಿಯ ಮತಪತ್ರವನ್ನು ಪಡೆದುಕೊಂಡು ಅದರಲ್ಲಿ ಗುರುತುಮಾಡಿ ನೀಡಿದ್ದಾರೆ. ಇವರಿಬ್ಬರು ತಾಲೂಕು ಕಚೇರಿಯ ಮೇಲೆ ನಿಂತುಕೊಂಡಿರುವ ವಿಡಿಯೋದ ತುಣುಕನ್ನು ದೂರದಿಂದ ಸೆರೆಹಿಡಿಯಲಾಗಿದೆ. ತದನಂತರ ಹೊರಬಂದ ಅಧಿಕಾರಿಯನ್ನು ತಾವು ಯಾವ ಇಲಾಖೆ ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಅವರ ಗುರುತಿನ ಚೀಟಿಯನ್ನು ಸಹ ಸೆರೆಹಿಡಿದಿರುವ ಮುಖಂಡರು ಅವರು ತೂಕ ಮತ್ತು ಅಳತೆಯ ಜಿಲ್ಲಾ ಜಿಲ್ಲಾ ಮಟ್ಟದ ಅಧಿಕಾರಿ ರಾಮಚಂದ್ರ ಟಿ ಎನ್ ಎಂಬುದಾಗಿ ಗುರುತಾಗಿದೆ.


ಈ ಸಂಬಂಧ ಚುನಾವಣಾಧಿಕಾರಿಗೆ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರ ಚುನಾವಣಾ ಏಜೆಂಟ್ ದಿಲೀಪ್ ಎಂಬುವವರು ದೂರು ನೀಡಿದ್ದು, ಕೆಂಚೇಗೌಡರಿಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ಖಚಿತ ಮಾಹಿತಿಗಳು ಮಾಹಿತಿ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑