Tel: 7676775624 | Mail: info@yellowandred.in

Language: EN KAN

    Follow us :


ಶೇಕಡಾ ೮೫. ೨ ೩ ರಷ್ಟು ಸುಸೂತ್ರವಾಗಿ ನಡೆದ ಮತದಾನ

Posted date: 11 May, 2023

Powered by:     Yellow and Red

ಶೇಕಡಾ ೮೫. ೨ ೩ ರಷ್ಟು ಸುಸೂತ್ರವಾಗಿ ನಡೆದ ಮತದಾನ

ಚನ್ನಪಟ್ಟಣಃ ತಾಲೂಕಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಕೇಂದ್ರದಲ್ಲಿ ಮತದಾರರು ಶಾಂತಿಯುತವಾಗಿ ಮತಚಲಾಯಿಸಿದರು. ಸ್ಥಳೀಯ ಪೋಲಿಸರು, ಅರೆಸೇನಾ ಪಡೆ ಹಾಗೂ ಚುನಾವಣಾಧಿಕಾರಿಗಳ ಸಹಯೋಗದೊಂದಿಗೆ ಸಣ್ಣಪುಟ್ಟ ತಾಂತ್ರಿಕ ದೋಷ ಹಾಗೂ ಮಾತಿನ ಚಕಮಕಿ ಹೊರತು ಪಡಿಸಿ ಯಾವುದೇ ಅಹಿತಕರ ಘಟನೆಗಳು ಜರುಗದೆ ನಿರಾತಂಕವಾಗಿ ನಡೆದಿದೆ.



ತಾಲ್ಲೂಕಿನ ಕೆಲವೊಂದು ಗ್ರಾಮಗಳಲ್ಲಿ ಮತ್ತು ನಗರದ ಕೆಲ ವಾರ್ಡ್‌ಗಳಲ್ಲಿ

ಜೆಡಿಎಸ್. ಬಿಜೆಪಿ ಕಾರ್ಯಕರ್ತರ ನಡುವೆ ಮತಗಳ ಬಗ್ಗೆ ಜಟಾ ಪಟಿ ನಡೆದ ಘಟನೆಗಳು ಸಹ ಕಂಡು ಬಂದವು.


ಮಾಜಿ ಸಚಿವ ವಿಧಾನಪರಿಷತ್ ಸದಸ್ಯ ಬಿಜೆಪಿ ಅಭ್ಯರ್ಥಿಯಾದ

ಸಿ.ಪಿ.ಯೋಗೇಶ್ವರ್ ಸ್ವಗ್ರಾಮ ಚಕ್ಕೆರೆ ಗ್ರಾಮದಲ್ಲಿ, ಮಾಜಿ ಶಾಸಕ ಎಂ.ಸಿ.ಅಶ್ವಥ್ ನಗರದಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಎಸ್ ಗಂಗಾಧರ್ ಸೋಗಾಲ ಗ್ರಾಮದಲ್ಲಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಶರತ್ ಚಂದ್ರ ವಿರೂಪಾಕ್ಷಿಪುರ ಗ್ರಾಮದಲ್ಲಿ ತಮ್ಮ ತಮ್ಮ ಮತ

ಕೇಂದ್ರಗಳಲ್ಲಿ ಮತಚಲಾಯಿಸಿದರೆ ಹಿರಿಯ ಮುಖಂಡರು.

ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳ ಪರವಾಗಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿ

ಈ ಬಾರಿ ನಮ್ಮ ಪಕ್ಷದ ಅಭ್ಯರ್ಥಿಗೆ ಅವಕಾಶ ನೀಡಿ ಎಂದು

ಕೇಳಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.


ಕಾಂಗ್ರೆಸ್. ಬಿಎಸ್‌ಪಿ

ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು. ಅಭಿಮಾನಿಗಳು ನಿಶಬ್ಧವಾಗಿ

ಮತಯಾಚನೆ ಮಾಡುತ್ತಿದ್ದರು.

ಗ್ರಾಮಾಂತರ ಪ್ರದೇಶ, ನಗರ ಪ್ರದೇಶದಲ್ಲಿ ಬೆಳಿಗ್ಗೆಯಿಂದ

ಸಂಜೆಯವರೆಗೂ ಮತಚಲಾಯಿಸಲು ಆಗಮಿಸುತ್ತಿದ್ದ

ವಿಶೇಷ ಚೇತನರು. ಹಿರಿಯ ಮುತ್ಸದ್ದಿಗಳು ಸೇರಿದಂತೆ ಮಹಿಳೆಯರಿಗೆ

ವಾಹನಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಹಾಗೂ ಪಕ್ಷದ

ಕಾರ್ಯಕರ್ತರು ಸಹ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತಚಲಾಯಿಸಲಿ

ಎಂಬ ಉದ್ಧೇಶದಿಂದ ಮತದಾರರ ಮನೆಗಳಿಗೆ ತೆರಳಿ ಅಲ್ಲಿಂದಲೆ ತಮ್ಮ

ವಾಹನಗಳ ಮೂಲಕ ಮತದಾರರನ್ನು ಕೇಂದ್ರಕ್ಕೆ

ಕರೆದುಕೊಂಡು ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಅದರಲ್ಲೂ

ಗ್ರಾಮಾಂತರಗಳಲ್ಲಿ ಬಿಜೆಪಿ. ಜೆಡಿಎಸ್. ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ

ಸಂಖ್ಯೆಯಲ್ಲಿ ಮತ ಚೀಟಿಗಳನ್ನು ಹಂಚುವ ಮೂಲಕ ತಮ್ಮ

ಅಭ್ಯರ್ಥಿಗೆ ಮತ ನೀಡಿ ಎಂದು ಮನವಿ ಮಾಡುತ್ತಿದ್ದರು.


ರಾಷ್ಟ್ರೀಯ ಪಕ್ಷದ ಮುಖಂಡರು. ಪ್ರಾದೇಶಿಕ ಪಕ್ಷದ

ಮುಖಂಡರು ಜವಾಬ್ಧಾರಿಯುತವಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ

ಬೆಳಿಗ್ಗೆಯಿಂದ ಸಂಜೆಯವರೆಗೂ ಕಾದು ಕುಳಿತು ಮತ

ಚಲಾಯಿಸುವಂತೆ ಕೋರುತ್ತಿದ್ದ ಜೊತೆಯಲ್ಲಿ ಮುಂದೆ

ಆಗಬೇಕಾಗಿರುವ ಅಭಿವೃದ್ಧಿಗಳ ಬಗ್ಗೆ ತಿಳಿಸಿ ಈ ಬಾರಿ ನಮಗೆ ಬೇಕಾಗಿರುವ ಶಾಸಕರನ್ನು ಆಯ್ಕೆ ಮಾಡುವ ಮೂಲಕ ತಾಲೂಕಿನ ಅಭಿವೃದ್ಧಿಗೆ

ಸಹಕಾರ ನೀಡಿ ಎಂದು ಎಲ್ಲಾ ಪಕ್ಷದ ಮುಖಂಡರು ಮತಚಲಾಯಿಸಲು

ಕೇಂದ್ರಕ್ಕೆ ಹೋಗುತ್ತಿದ್ದ ಮತದರರ ಮನವೊಲಿಸಲು

ಮುಂದಾಗಿದ್ದರು. ಜೊತೆಯಲ್ಲಿ ಕೆಲ ಗ್ರಾಮಗಳಲ್ಲಿ ಪಕ್ಷ ಪಕ್ಷದ

ಕಾರ್ಯಕರ್ತರ ನಡುವೆ ಪರ-ವಿರೋಧ ಘೋಷಣೆಗಳು. ವಾದ-ವಿವಾದ ಹಾಗೂ ಜಗಳ ಕೂಗಾಟ ನಡೆಯುತಿತ್ತು. ಅದೇ ಹೊತ್ತಿನಲ್ಲಿ ಪೊಲೀಸ್

ಸಿಬ್ಬಂದಿ, ಸೈನಿಕರು ಶಾಂತಿ ವೈರುದ್ಯಗಳನ್ನು ಶಾಂತಿ ಗೊಳಿಸಿ

ಶಾಂತಿಯುತವಾಗಿ ಚುನಾವಣೆ ನಡೆಯುವಂತೆ ಮಾಡುವಲ್ಲಿ ಸಫಲರಾದರು.


*ಹತ್ತಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ವಿಳಂಬ*

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಯ್ಯದ್ ವಾಡಿ, ಮೆಹದಿ ನಗರ, ಟಿಪ್ಪುನಗರ,  ಅಪ್ಪಗೆರೆ, ನೀಲಸಂದ್ರ, ನೀಲಕಂಠನಹಳ್ಳಿ, ನಾಗವಾರ, ಸೇರಿ ಸುಮಾರು ಹತ್ತಕ್ಕೂ ಹೆಚ್ಚು  ಮತಗಟ್ಟೆಗಳಲ್ಲಿ ಇವಿಎಂ ದೋಷ, ವಿವಿ ಪ್ಯಾಟ್ ಹಾಗೂ ಮತದಾರರು ಕೊನೆಗಳಿಗೆಯಲ್ಲಿ ಹೆಚ್ಚಾದ ಕಾರಣ ಬುಧವಾರ ರಾತ್ರಿ ಒಂಬತ್ತು ಗಂಟೆವರೆಗೂ ಮತದಾನವಾದ ಬಗ್ಗೆ ವರದಿಯಾಗಿದ್ದು, ಈ ಸಂಬಂಧ ತಾಲ್ಲೂಕು ಮುಖ್ಯ ಚುನಾವಣಾಧಿಕಾರಿ ‌ಮುನೇಗೌಡ ಮಾಹಿತಿ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑