ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರು ಪೂರ್ಣ ಸೋತು ಹೋಗಿದ್ದಾರೆ. ಸಿ ಪಿ ಯೋಗೇಶ್ವರ್
ಚನ್ನಪಟ್ಟಣ : ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರೂ ಸಂಪೂರ್ಣವಾಗಿ ಸೋತು ಹೋಗಿದ್ದಾರೆ. ಚುನಾವಣೆಗಳು ಸಾಲುಸಾಲಾಗಿ ಬರುತ್ತವೆ. ಮುಂದಿನ ಸರ್ಕಾರದಲ್ಲೂ ಏನು ಬೇಕಾದರೂ ಘಟಿಸಬಹುದು. ಚುನಾವಣೆಯಲ್ಲಿ ಸೋತರೂ ಸಹ ನಿಮ್ಮ ಮುಂದೆ ಬಂದಿದ್ದೇನೆ. ನಾನು ಗೆಲ್ಲಲೇಬೇಕೆಂದು ಹಗಲಿರುಳು ಶ್ರಮದ ಹೋರಾಟ ರೂಪಿಸಿದವರೆಲ್ಲರಿಗೂ ನನ್ನ ನಮನಗಳನ್ನು ಸಲ್ಲಿಸಲು ತಮ್ಮ ಮುಂದೆ ಬಂದಿದ್ದೇನೆ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದರು. ಅವರು ನಗರದ ಹೊರವಲಯದಲ್ಲಿ 2023ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಪರಾಭವಗೊಂಡ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ರವರಿಂದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ವಿಶೇಷವಾಗಿ ಮತದಾರರಿಗೆ ಕೃತಜ್ಞತೆಯ ಸಭೆಯಲ್ಲಿ ಮಾತನಾಡಿದರು.
ಇದು ಕೊನೆಯ ಚುನಾವಣೆ ಅಲ್ಲಾ, ಐದು ಬಾರಿ ಶಾಸಕನಾಗಿದ್ದು, ಒಂದು ಲೋಕಸಭಾ ಚುನಾವಣೆ ಮೂರು ವಿಧಾನಸಭಾ ಚುನಾವಣೆ ಸೇರಿದಂತೆ ನಾಲ್ಕು ಬಾರಿ ಸೋತಿದ್ದೇನೆ. ಈ ಚುನಾವಣೆಯಲ್ಲಿ ಸೋತಿದ್ದರೂ ಸಹ ಅತಿ ಹೆಚ್ಚು ಮತಗಳನ್ನು ಪಡೆದಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಹಲವಾರು ಮಂದಿ ತಮ್ಮದೇ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹೋಗಬೇಕಾಗಿತ್ತು. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕಿತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಚುನಾವಣೆ ಮುಗಿದಿದೆ. ಕುಮಾರಸ್ವಾಮಿ ಈ ತಾಲ್ಲೂಕಿಗೆ ಬರಬಾರದಿತ್ತು. ನಾನು ಸೋತಿದ್ದೇನೆ. ಆದರೆ ಅವರು ಗೆದ್ದು ಸೋತಿದ್ದಾರೆ. ಜೊತೆಗೆ ತನ್ನ ಮಗನನ್ನು ಸೋಲಿಸಿದ್ದಾರೆ.
ತಾನೊಂದು ಬಗೆದರೆ ದೈವವೊಂದು ಬಗೆದೀತು ಎಂಬಂತೆ ಕುಮಾರಸ್ವಾಮಿ ಚುನಾವಣೆ ಮುಗಿದ ತಕ್ಷಣ ನಾನು ಕಿಂಗ್ ಮೇಕರ್ ಆಗುತ್ತೇನೆ. ಬಂದು ಕರೆದುಕೊಂಡು ಹೋಗುತ್ತಾರೆ ಎಂಬ ಅಹಂ ನಿಂದ ವಿದೇಶಕ್ಕೆ ಹಾರಿದ್ದರು. ಕರೆಯೋರು ಯಾರೂ ಬರದಿದ್ದರಿಂದ ಅವರೇ ಬರಬೇಕಾಯಿತು. ಅವರ ಕಿಂಗ್ ಮೇಕರ್ ಆಸೆ ಫಲಿಸಲಿಲ್ಲ. ಅದಾಗದೆ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಕೊಟ್ಟಿದ್ದಾರೆ. ಜನ ಓರ್ವ ಅಭ್ಯರ್ಥಿಯನ್ನು ಒಂದು ಬಾರಿ ಸೋಲಿಸುತ್ತಾರೆ. ಆದರೆ ಎರಡು ಬಾರಿ ಸೋಲಿಸುತ್ತಾರೆ ಎಂದರೆ ಅರಗಿಸಿಕೊಳ್ಳಲಾಗುತ್ತಿಲ್ಲಾ ಎಂದು ನೋವಿನಿಂದ ನುಡಿದರು. ನಮ್ಮ ಒಕ್ಕಲಿಗ ಜನಾಂಗದ ವ್ಯಕ್ತಿ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಾರೆ ಎಂಬ ಅಂಧಾಭಿಮಾನದಿಂದ ಮತ ನೀಡಿದ್ದರಿಂದ ನಾನು ಸೋತಿದ್ದೇನೆ ಎಂದರು.
ನಾನು ಇನ್ನೂ ಮೂರು ವರ್ಷಗಳ ಹೆಚ್ಚಿನ ಕಾಲ ವಿಧಾನ ಪರಿಷತ್ ಸದಸ್ಯನಾಗಿರುತ್ತೇನೆ. ಈ ಕಾಂಗ್ರೆಸ್ ಸರ್ಕಾರ ತೂಕದ ಸರ್ಕಾರವಾಗಿದೆ. ಹಿರಿಯರು ಗೆದ್ದಿದ್ದಾರೆ. ಸರಿದೂಗಿಸಿಕೊಂಡು ಹೋಗುವುದು ಕಷ್ಟಸಾಧ್ಯ. ಮುಂದಿನ ಐದು ವರ್ಷಗಳ ಕಾಲ ಈ ಸರ್ಕಾರ ಏನಾಗುತ್ತದೋ ಎಂಬುದನ್ನು ಹೇಳಲು ಬರುವುದಿಲ್ಲ. ನಾನು ಮುಂದೆ ಏನಾದರೂ ಆಗಬಹುದು ಎಂಬ ಆಶಾಭಾವನೆ ವ್ಯಕ್ತಪಡಿಸುವ ಮೂಲಕ ಅಭಿಮಾನಿಗಳಿಗೆ ಹರ್ಷದಾಯಕದ ಮಾತನಾಡಿದರು.
ಈ ಹಿಂದೆಯೂ ಕುಮಾರಸ್ವಾಮಿ ಚನ್ನಪಟ್ಟಣ ಕ್ಕೆ ಬಂದಿಲ್ಲ. ಮುಂದೆಯೂ ಬರುವುದಿಲ್ಲ. ನಾನು ಈ ಮಣ್ಣಿನ ಮಗ. ನನ್ನ ಕರ್ಮಭೂಮಿ. ನಾನು ಇಲ್ಲಿಯೇ ಇರುತ್ತೇನೆ. ಯುಜಿಡಿ ಯಂತಹ ಹಲವಾರು ಕೆಲಸಗಳನ್ನು ನಾನೇ ಮಾಡಬೇಕು. ಅಭಿವೃದ್ಧಿ ಮಾಡಿಯೇ ತೀರುತ್ತೇನೆ. ನಾನು ಅಂದುಕೊಂಡಿದ್ದೇನೆ ನಿಮಗೆ ನೋವಾಗಿದೆ ಅಂತ. ನೀವು ಅಂದುಕೊಂಡಿದ್ದೀರಿ ನನಗೆ ನೋವಾಗಿದೆ ಎಂದು, ಹಾಗಾಗಿ ಈ ಮಹದೇಶ್ವರ ದೇವಾಲಯದಲ್ಲೇ ನಮ್ಮ ನೋವನ್ನು ಮರೆತುಬಿಡೋಣಾ ಎಂದು ಮತದಾರರಿಗೆ ಕರೆ ನೀಡಿದರು.
ಈ ಬಾರಿ ನಾನು ಚನ್ನಪಟ್ಟಣ ಕ್ಷೇತ್ರಕ್ಕೆ ಬರುವುದಿಲ್ಲ ಎಂದು ಹೇಳಿಕೊಂಡಿದ್ದರು. ಡಿ ಕೆ ಶಿವಕುಮಾರ್ ರವರು ನೀವು ಚನ್ನಪಟ್ಟಣ ಉಳಿಸಿಕೊಳ್ಳಬೇಕು ಎಂದಿದ್ದರಿಂದ ಅವರು ಸ್ಪರ್ಧೆ ಮಾಡಿದರು. ನಿಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದರಿಂದಲೇ ರಾಜ್ಯದಲ್ಲಿ ಸೋಲನ್ನನುಭವಿಸಿದರು ಎಂದು ಜಿಲ್ಲೆಯ ಜೆಡಿಎಸ್ ನಲ್ಲಿ ಪರಾಭವಗೊಂಡ ಮತ್ತೋರ್ವ ಶಾಸಕ ಕರೆ ಮಾಡಿ ತಿಳಿಸಿದರು ಎಂದು ಮಾಗಡಿ ಕ್ಷೇತ್ರದ ಎ ಮಂಜು ರವರ ಹೆಸರೇಳದೆ ಮಾಹಿತಿ ನೀಡಿದರು. ನನಗೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಇಬ್ಬರೂ ಸಹ ನನಗೆ ಆತ್ಮೀಯ ಸ್ನೇಹಿತರಾಗಿದ್ದಾರೆ. ನನ್ನ ಕ್ಷೇತ್ರಕ್ಕೆ ಅವರು ಸಹಾಯ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲಾ ನೋವನ್ನು ಇಂದಿಗೆ ಮರೆತುಬಿಡೋಣಾ, ನನ್ನ ಸೋಲಿನಿಂದ ಹಲವಾರು ಮದ್ಯವ್ಯಸನಿಗಳಾಗಿದ್ದಾರೆ ದಯವಿಟ್ಟು ಕುಡಿತದ ಚಟದಿಂದ ಆಚೆ ಬನ್ನಿ. ನಾನು ಕ್ಷೇತ್ರ ಮರೆಯಲ್ಲಾ, ನಾವೆಲ್ಲರೂ ಒಗ್ಗೂಡಿ ಶೀಘ್ರವಾಗಿ ಮತದಾರ ಪ್ರಭುಗಳನ್ನು ಮನೆಮನೆಗೆ ಹೋಗಿ ಮಾತನಾಡಿಸೋಣಾ. ಮುಂದೆ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಜೊತೆಗೆ ಲೋಕಸಭಾ ಚುನಾವಣೆ ಬರುತ್ತಿದೆ. ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣಾ. ಈ ಸೋಲಿನಿಂದ ಯಾರೂ ಕಂಗೆಡುವುದು ಬೇಡ ಎಂದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು