Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನಾಂದ್ಯಂತ ವಿಶೇಷ ರೋಜ್ ಗಾರ್ ದಿವಸ್ ಆಚರಣೆ.

Posted date: 18 May, 2023

Powered by:     Yellow and Red

ತಾಲ್ಲೂಕಿನಾಂದ್ಯಂತ ವಿಶೇಷ ರೋಜ್ ಗಾರ್ ದಿವಸ್ ಆಚರಣೆ.

ಚನ್ನಪಟ್ಟಣ (ಮೇ 17): ಮಹಾತ್ಮಾಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ )ಯಡಿ ಗ್ರಾಮೀಣ ಪ್ರದೇಶದ ಜನರು ಕೂಲಿ ಕೆಲಸದ ಜೊತೆಗೆ  ವೈಯಕ್ತಿಕ ಕಾಮಗಾರಿಗಳ ಬೇಡಿಕೆ ಕೊಟ್ಟು ಯೋಜನೆಯ ಸದುಪಯೋಗ ಪಡೆಸಿಕೊಳ್ಳುವಂತೆ ಮಾಹಿತಿ ರವಾನಿಸುವ ಉದ್ದೇಶದಿಂದ ವಿಶೇಷ ರೋಜ್ ಗಾರ್ ದಿವಸ್ ಆಚರಿಸುವಂತೆ ಚನ್ನಪಟ್ಟಣ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯವರು ತಿಳಿಸಿದ್ದರಿಂದ ತಾಲ್ಲೂಕಿನ 32 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮೇ 16-17    ರಂದು ಪ್ರತಿಯೊಂದು ಗ್ರಾಮದಲ್ಲಿ ರೋಜ್ಗಾರ್ ದಿವಸ್ ಆಚರಿಸಿ ನರೇಗಾ ಯೋಜನೆಯಡಿ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರು ಮತ್ತು ಉದ್ಯೋಗ ಚೀಟಿ ದಾರರಿಗೆ ಮಾಹಿತಿ ನೀಡಿ ಕೆಲಸದ ಬೇಡಿಕೆಯ ಪಟ್ಟಿ ಪಡೆಯುವಂತೆ ಅಧಿಕೃತ ಜ್ಙಾಪನ ಪತ್ರದ ಮೂಲಕ ವಿಷಯವನ್ನು ತಿಳಿಸಿದರು ಹಾಗೂ  ಕೆಲವು ಪಂಚಾಯಿತಿಗಳ ರೋಜ್ಗಾರ್ ದಿವಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವತಃ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್ ರವರೆ ನರೇಗಾ ಯೋಜನೆಯಡಿ ಕುರಿತು ಮಾಹಿತಿ ನೀಡಿದರು.


ನರೇಗಾ ಯೋಜನೆಯಡಿ ಪ್ರತಿ ತಿಂಗಳ ಎರಡನೇ ಗುರುವಾರದಂದು ತಪ್ಪದೆ ಗ್ರಾಮ ಪಂಚಾಯಿತಿವಾರು ರೋಜ್ಗಾರ್ ದಿವಸ್ ಆಚರಿಸಿ ಬೇಡಿಕೆ ಪಟ್ಟಿ ಪಡೆಯುವಂತೆ ರಾಜ್ಯ ಮಟ್ಟದಿಂದ ಆದೇಶವಿದ್ದು ಇದಕ್ಕೆ ಪೂರಕವಾಗಿ ಇಓ ರವರು ಮೇ 16-17 ರಂದು ವಿಶೇಷ ರೋಜ್ಗಾರ್ ದಿವಸ್ ಆಚರಿಸಿ ಹೆಚ್ಚು ಬೇಡಿಕೆ ಪಟ್ಟಿ ತರುವಂತೆ ಪಂಚಾಯಿತಿ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.


೧.)ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯ ಸಂದೇಶಗಳು

1.18 ವರ್ಷ ಮೇಲ್ಪಟ್ಟ ಕುಶಲ ಕಾರ್ಮಿಕರು ಉದ್ಯೋಗಕ್ಕಾಗಿ ಉದ್ಯೋಗ ಚೀಟಿ ಹೊಂದಿ, ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಉದ್ಯೋಗ ನೀಡಲಾಗುವುದು.

 

೨.)ಉದ್ಯೋಗ ಚೀಟಿಗೆ ಅರ್ಜಿಸಲ್ಲಿಸಿದ ಕೂಡಲೇ, ಗ್ರಾಮ ಪಂಚಾಯತಿಯಿಂದ ಉಚಿತವಾಗಿ ಜಾಬ್ ಕಾರ್ಡ್ ನೀಡಲಾಗುವುದು.


೩.)ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ 

೪.)ಒಂದು ದಿನಕ್ಕೆ 316 ರೂ. ಕೂಲಿ ಪಾವತಿ 

೫.) ವಾರದ ಕೂಲಿಯನ್ನು ೧೫ ದಿನಗಳ ಒಳಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.

 

೬.) 60 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ವಿಕಲಚೇತನರಿಗೆ ಕೆಲಸದಲ್ಲಿ 50 ರಷ್ಟು ರಿಯಾಯಿತಿ.

೭.) ಸಾಧ್ಯವಾದಷ್ಟು ಮಟ್ಟಿಗೆ ಆ ಕೆಲಸವನ್ನು ಆ ಗ್ರಾಮದ ವ್ಯಾಪ್ತಿಯಲ್ಲಿ ಒದಗಿಸಬೇಕು. ಅವರು ವಾಸವಿರುವ ಗ್ರಾಮದಿಂದ 5 ಕೀ.ಮಿ ಗಿಂತ ಹೆಚ್ಚಿನ ದೂರದಲ್ಲಿ ಕೆಲಸವನ್ನು ಒದಗಿಸಿದ್ದೇ ಆದರೆ, ಅವರಿಗೆ ಕೂಲಿಯ ಶೇ 10 ರಷ್ಟನ್ನು ಹೆಚ್ಚುವರಿಯಾಗಿ ಸಾರಿಗೆ ಮತ್ತು ಜೀವನ ವೆಚ್ಚಕ್ಕಾಗಿ ಪಡೆಯಬಹುದು.

೮.)ಕೂಲಿ ಕಾರ್ಮಿಕರನ್ನು ಪ್ರೇರೆಪಿಸಿ ಕೆಲಸಕ್ಕೆ ಹಾಜರುಪಡಿಸಿದಲ್ಲಿ ಒಂದು ಮಾನವ ದಿನಕ್ಕೆ ಹೆಚ್ಚುವರಿಯಾಗಿ ಪುರುಷ ಕಾಯಕ ಬಂಧುವಿಗೆ 4 ರೂ. ಹಾಗೂ ಮಹಿಳಾ ಕಾಯಕ ಬಂಧುವಿಗೆ 5 ರೂ. ಗಳನ್ನು ನೀಡಲಾಗುವುದು. 

೯.) ನಿಮ್ಮ ಗ್ರಾಮದಲ್ಲಿ ಕೆಲಸ ಬೇಕೆಂದು ಗ್ರಾಮ ಪಂಚಾಯತಿಗೆ ಅರ್ಜಿ ನೀಡಿ ಕೆಲಸ ಪಡೆಯಬಹುದು. ಒಂದು ವೇಳೆ 15 ದಿನಗಳಲ್ಲಿ ಕೆಲಸ ಕೊಡದಿದ್ದಲ್ಲಿ ನಿರುದ್ಯೋಗ ಭತ್ಯೆ ನೀಡಲಾಗುವುದು. 

೧೦.) ಕಾಮಗಾರಿ ಸ್ಥಳದ ಸಮೀಪದಲ್ಲಿ ಸ್ವಚ್ಛವಾದ ಕುಡಿಯುವ ನೀರಿನ ವ್ಯವಸ್ಥೆ.

೧೧.) ಕೆಲಸದ ಅವಧಿಯಲ್ಲಿ ಉಂಟಾಗಬಹುದಾದ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ನೀಡಲು ಸಾಕಷ್ಟು ಸಾಮಾಗ್ರಿಗಳಿರುವ ಪ್ರಥಮ ಚಿಕಿತ್ಸೆ ಪೆಟ್ಟಿಗೆಯ ವ್ಯವಸ್ಥೆ.

೧೨.) ಕಾಮಗಾರಿ ಸ್ಥಳದಲ್ಲಿ ಆರು ವರ್ಷಕ್ಕೂ ಕಡಿಮೆ ವಯಸ್ಸಿನ, ಐದಕ್ಕಿಂತ ಹೆಚ್ಚಿನ ಮಕ್ಕಳು ಕಾರ್ಮಿಕರೊಂದಿಗೆ ಬಂದಲ್ಲಿ, ಅವರನ್ನು ನೋಡಿಕೊಳ್ಳಲು ಕಾರ್ಮಿಕರ ಪೈಕಿ ಒಬ್ಬ ಮಹಿಳೆಯನ್ನು ನೇಮಿಸಬೇಕು ಮತ್ತು ದಿನದ ಕೂಲಿಯನ್ನು ಆ ಮಹಿಳೆಗೆ ನೀಡಬೇಕು.


೧೩.) ಕಾಮಗಾರಿಯ ಸಂಬಂಧ ಯಾವುದೇ ಕಾರ್ಮಿಕರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯ ಬಂದಲ್ಲಿ ಅವರ ಔಷಧಿಯ ವೈದ್ಯಕೀಯ ಚಿಕಿತ್ಸೆ, ವಸತಿ, ಇತ್ಯಾದಿ ಉಚಿತ ವೈದ್ಯಕೀಯ ಸೌಲಭ್ಯ ಪಡೆಯಬಹುದು.

೧೪.)  ವೈದ್ಯಕೀಯ ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಪತ್ರಿದಿನಕ್ಕೆ ಕೂಲಿಯನ್ನು ದಿನ ಭತ್ಯೆ ಪಡೆಯಬಹುದು.

೧೫.)ಕಾಮಗಾರಿಯ ಕಾರಣದಿಂದಾಗಿ ಕಾರ್ಮಿಕರು ಶಾಶ್ವತವಾಗಿ ವಿಕಲಚೇತನರಾದರೆ ಅಥವಾ ಮೃತ ಪಟ್ಟರೆ ಅವರ ವಾರಸುದಾರರು ಹಣ ಪಡೆಯಬಹುದು.

ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿ ಹಾಗೂ ಸಮುದಾಯ ಕಾಮಗಾರಿ ಕೈಗೊಳಬಹುದು.


ವೈಯಕ್ತಿಕ ಕಾಮಗಾರಿಗಳ ಅಂದಾಜು ಮೊತ್ತ ಹಾಗೂ ವಿಸ್ತರಣೆ ವಿವರ 

ದನದ ಕೊಟ್ಟಿಗೆ-57,000/-  (ಉದ್ದ) 20×12(ಅಗಲ) ವಿಸ್ತರಣೆಯಲ್ಲಿ ನಿರ್ಮಾಣ 

ಮೇಕೆಶೆಡ್ಡು-70,000/-15×12, ಬದು ಒಂದು ಎಕ್ಕರೆ 13,000/-

ಸೋಕ್ ಪಿಟ್ =11,000/- ಕೈ ತೋಟ-4500/-14 ಗಿಡಗಳು,

ಕೋಳಿಶೆಡ್ಡು=60000/- 15×10, ಎರೆಹುಳು ತೊಟ್ಟಿ=20,000 /-16×5, ಕುರಿಶೆಡ್ಡು=35,000/- 15×10

ಹಿಪ್ಪು ನೇರಳೆ ನರ್ಸರಿ, ಹಿಪ್ಪು, ನೇರಳೆ ನಾಟಿ-ಜೋಡಿ ಸಾಲು, ತೆಂಗು ಪುನಶ್ಚೇತನ, ಮಾವು ಪುನಶ್ಚೇತನ, ನುಗ್ಗೆ, ಬಾಳೆ ಇತ್ಯಾದಿ. 


ಸಮುದಾಯ ಕಾಮಗಾರಿಗಳ ವಿವರ;

ಆಟದ ಮೈದಾನ ಅಭಿವೃದ್ಧಿ, ಶಾಲಾ ಕಾಂಪೌಂಡ್ ನಿರ್ಮಾಣ, ಶಾಲಾ ಕೈ ತೋಟ ನಿರ್ಮಾಣ, ಶಾಲೆಗೆ ಶೌಚಾಲಯ ನಿರ್ಮಾಣ, ಸ್ಮಶಾನ ಅಭಿವೃದ್ಧಿ, ಕೆರೆ/ ಗೋಕಟ್ಟೆ ಹೂಳೆತ್ತುವುದು, ಅಂಗನವಾಡಿ ಕೇಂದ್ರಗಳು, ಗ್ರಾಮೀಣ ಉದ್ಯಾನವನ ನಿರ್ಮಾಣ, ನಾಲಾ ಅಭಿವೃದ್ಧಿ , ಜಾನುವಾರು ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ಮಳೆ ನೀರು ಕೊಯ್ಲು, ಗ್ರಾಮೀಣ ಸಂಪರ್ಕ ರಸ್ತೆ, ಸ್ವಸಹಾಯ ಸಂಘಗಳಿಗೆ ಸಂಜೀವಿನಿ ಶೆಡ್ಡು ನಿರ್ಮಾಣ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ಇಓ ರವರು ಮಾಹಿತಿ ನೀಡಿದರು.


ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಅಭಿಯಂತರರು, ಗ್ರಾಮ ಕಾಯಕ ಮಿತ್ರರು, ಬಿ ಎಫ್ ಟಿ ಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑