ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ
ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಮೂಲಾಗ್ರ ಬದಲಾವಣೆ ಕಂಡುಕೊಳ್ಳಲು ಸಾಧ್ಯ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.
ಅವರು ಪಟ್ಟಣದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ, ಪವಿತ್ರ ಮತ್ತು ಶಿಕ್ಷಕ ಸಿದ್ದರಾಜು ಅವರ ಪುತ್ರಿ ಕುಮಾರಿ ಎಂ.ಎಸ್. ತಶ್ವಿನಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ತಶ್ವಿನಿ ಅವರು ಹತ್ತನೇ ತರಗತಿ ಪರೀಕ್ಷೆಯಲ್ಲಿ 625ಕ್ಕೆ 606 ಅಂಕಗಳನ್ನು ಗಳಿಸುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾಳೆ. ಎಳವೆಯಿಂದಲೂ ವಾಚನಾಭಿರುಚಿಯ ಜೊತೆಗೆ ಕಲೆ, ಸಾಹಿತ್ಯ ಮತ್ತು ಸಂಗೀತದಲ್ಲಿ ಸಹ ವಿಶೇಷ ಅಭಿರುಚಿ ಬೆಳೆಸಿಕೊಂಡಿದ್ದಾಳೆ.
ಇಂತಹ ಬಹುಮುಖ ಪ್ರತಿಭೆಗಳನ್ನು ಎಳವೆಯಲ್ಲಿಯೇ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ಹಲವಾರು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.
ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದುದು. ವಿದ್ಯೆಯಿಂದ ಸಕಲವನ್ನೂ ಗಳಿಸಿ, ಸಾಮಾಜಿಕ ಗೌರವಕ್ಕೆ ಪಾತ್ರರಾಗಬಹುದು. ಕುಮಾರಿ ತಶ್ವಿನಿ ಅವರ ಸಾಧನೆ, ಕಿರಿಯರಿಗೆ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಜಾನಪದ ಕಲಾವಿದ ಚೌ.ಪು. ಸ್ವಾಮಿ, ಟ್ರಸ್ಟ್ ಖಜಾಂಚಿ ಅನಿತಾ ವಿಜಯ್, ಅಚಲ ಆರ್.ವಿ., ಶಿಕ್ಷಕ ಮೊಗೇನಹಳ್ಳಿ ಸಿದ್ದರಾಜು, ಪವಿತ್ರ ಮತ್ತಿತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು