Tel: 7676775624 | Mail: info@yellowandred.in

Language: EN KAN

    Follow us :


ಮುಂಗಾರು ಮಳೆಯಲ್ಲಿ ತೊಂದರೆಯಾಗದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ

Posted date: 25 May, 2023

Powered by:     Yellow and Red

ಮುಂಗಾರು ಮಳೆಯಲ್ಲಿ ತೊಂದರೆಯಾಗದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ

ರಾಮನಗರ: ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಮುಂಗಾರು ಆರಂಭದ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸನ್ನದ್ದರಾಗಿರಬೇಕು. ಈ ಕುರಿತು ಯಾರು ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.


ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾಗುವ ಭಾರಿ ಮಳೆ/ಪ್ರವಾಹ ಕುರಿತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


*ಮುನ್ನೆಚ್ಚರಿಕೆ ವಹಿಸದಿದ್ದರೆ ಪರಿಸ್ಥಿತಿ ನಿಯಂತ್ರಣ ಅಸಾಧ್ಯ*

ಯಾವುದೇ ಸಿದ್ದತೆ ಮಾಡಿಕೊಂಡಿಲ್ಲದೆ ನಿರ್ಲಕ್ಷ್ಯ ವಹಿಸುವಂತಹ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.


ರಾಮನಗರ ಜಿಲ್ಲೆಯಲ್ಲಿ ಈ ಹಿಂದೆ ಭಾರಿ ಮಳೆ/ಪ್ರವಾಹದಿಂದ ತೊಂದರೆಯಾಗಿದ್ದ ಪ್ರದೇಶಗಳನ್ನು ಪರಿಶೀಲಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಮಾಹಿತಿ ನೀಡಿದರು.


*ಕಾಳಜಿ ಕೇಂದ್ರ:*

ಮಳೆ ಹೆಚ್ಚು ಬೀಳುವ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಅಧಿಕಾರಿಗಳು ಕ್ರಮವಹಿಸಬೇಕು. ಮಂಚನಬೆಲೆ ಡ್ಯಾಂ ಸುತ್ತಮುತ್ತಲು ಹಾಗೂ ಅರ್ಕಾವತಿ ನದಿಯ ಸುತ್ತಮುತ್ತಲೂ ನದಿಯ ಪಾತ್ರಗಳಲ್ಲಿ ತೊಂದರೆಗೀಡಾಗುವ ಸಂದರ್ಭ ಎದುರಾಗಬಹುದು. ಜನರ ಸ್ಥಳಾಂತರಕ್ಕೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.


*ಕಂಟ್ರೋಲ್ ರೂಂ:*

ತಾಲ್ಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ಆರಂಭಿಸಬೇಕು. ದಿನದ 24/7 ಅವಧಿ ಕೆಲಸ ನಿರ್ವಹಿಸಬೇಕು. ಜೀವಹಾನಿ, ಬೆಳೆಹಾನಿಯಾದ ಬಗ್ಗೆ ಮಾಹಿತಿ ಬಂದಲ್ಲಿ ಸಂಬಂಧಪಟ್ಟ ತಹಶೀಲ್ದಾರರು ಪರಿಶೀಲಿಸಬೇಕು ನಂತರ ಘಟನೆ ನಡೆದ 24 ಗಂಟೆಯೊಳಗೆ ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದರು.


ಜಿಲ್ಲೆಯಲ್ಲಿ 101 ಕೆರೆಗಳಿದ್ದು, ಕೆರೆಗಳ ದಂಡೆಗಳನ್ನು ಪರೀಕ್ಷಿಸಿ ಸೋರಿಕೆ ಇದ್ದರೆ ತಕ್ಷಣ ಸರಿಪಡಿಸಬೇಕು ಎಂದರು. ತಗ್ಗು ಪ್ರದೇಶದ ಮನೆಗಳಿಗೆ ಎಚ್ಚರಿಕೆ ನೀಡಬೇಕು , ಚರಂಡಿ, ಚಾನಲ್‌ಗಳು ಸರಾಗವಾಗಿ ಮಳೆನೀರು ಹರಿದು ಹೋಗುವಂತೆ ಪರಿಶೀಲನೆ ಮಾಡಬೇಕು. ಯಾವುದೇ ದುರಸ್ಥಿಯಿದ್ದಲ್ಲಿ ಪರಿಶೀಲಿಸಿ ದುರಸ್ತಿಗೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.


ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಶಾಲೆಗಳು ಮಳೆಯಿಂದ ಸೋರುವುದನ್ನು ತಡೆಗಟ್ಟಲು ಕ್ರಮವಹಿಸಬೇಕು ಎಂದರು.


*ಆರೋಗ್ಯ ಇಲಾಖೆ:*

ಜಿಲ್ಲೆಯ ನಗರ ಹಾಗೂ ಗ್ರಾಮ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಕ್ರಮ ವಹಿಸಬೇಕು. ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ತೆರೆದು ಆರೋಗ್ಯ ತಪಾಸಣೆ, ಅಗತ್ಯ ಔಷದಿಗಳನ್ನು ಸಂಗ್ರಹ ಮಾಡಲು ಕ್ರಮವಹಿಸುವಂತೆ ತಿಳಿಸಿದರು.


*ಪರಿಹಾರ:*

ಭಾರಿ ಮಳೆ/ಪ್ರವಾಹ ಸಂದರ್ಭದಲ್ಲಿ ಯಾವುದೇ ಜೀವ ಹಾನಿಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಒಂದು ವೇಳೆ ಜೀವಹಾನಿಯಾದಲ್ಲಿ 5 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು 24 ಗಂಟೆಯೊಳಗೆ ವಿತರಿಸುವಂತೆ ಸೂಚಿಸಿದರು.


*ತೋಟಗಾರಿಕೆ ಇಲಾಖೆ:*

ಮಳೆಯಿಂದಾಗಿ ಬೆಳೆ ನಷ್ಟವಾದಲ್ಲಿ ಪ್ರತೀ ಎಕರೆಗೆ 25 ಸಾವಿರ ರೂ.ಗಳಿಂದ 28 ಸಾವಿರ ರೂ.ಗಳ ವರೆಗೆ ಪರಿಹಾರ ಮೊತ್ತವನ್ನು ಗರಿಷ್ಠ 2 ಎಕರೆಗಳಿಗೆ ಹಾಗೂ ಗರಿಷ್ಠ 50 ಸಾವಿರ ರೂ. ವಿತರಿಸಲಾಗುವುದು. ಪ್ರತೀ ತೆಂಗಿನ ಮರಕ್ಕೆ 280 ರೂ. ಪರಿಹಾರ ನೀಡಲಾಗುವುದು ಎಂದರು.


*ಕೃಷಿ ಇಲಾಖೆ:*

ಮಳೆಯಿಂದ ನಷ್ಠವಾದಲ್ಲಿ ಪ್ರತೀ ಎಕರೆಗೆ 6,800 ರೂ.ಗಳಿಂದ 13,000 ರೂ.ಗಳ ವರೆಗೆ ಗರಿಷ್ಠ 2 ಎಕರೆಗೆ ಪರಿಹಾರ ನೀಡಲಾಗುವುದು ಎಂದರು.


*ಪಶುಸಂಗೋಪನೆ:*

ಹಸು, ಎತ್ತು, ಎಮ್ಮೆ ಜೀವಹಾನಿಯಾದಲ್ಲಿ ಗರಿಷ್ಠ 37 ಸಾವಿರ ದಿಂದ ಗರಿಷ್ಠ 3 ದೊಡ್ಡಪ್ರಾಣಿಗಳಿಗೆ ಪರಿಹಾರ ಮೊತ್ತ, ಕುರಿ, ಮೇಕೆ ಸೇರಿದಂತೆ ಪ್ರತೀ ಚಿಕ್ಕ ಪ್ರಾಣಿಗಳಿಗೆ ಗರಿಷ್ಠ 4 ಸಾವಿರ ರೂ.ಗಳ ಪರಿಹಾರ ಮೊತ್ತ ಗರಿಷ್ಠ 30 ಪ್ರಾಣಿಗಳಿಗೆ ನೀಡಲಾಗುವುದು. ಕೋಳಿ, ಪಕ್ಷಿಗಳಿಗೆ ಗರಿಷ್ಠ 100 ರೂ.ಗಳಂತೆ 100 ಸಂಖ್ಯೆಯ ಪಕ್ಷಿಗಳಿಗೆ ನೀಡಲಾಗುವುದು ಎಂದರು.


*ಮನೆ:*

ಭಾರಿ ಮಳೆಯಿಂದಾಗಿ ಮನೆಗಳಿಗೆ ಸಂಪೂರ್ಣ ಹಾನಿಯಾದಲ್ಲಿ ಗರಿಷ್ಠ 1 ಲಕ್ಷದ 20 ಸಾವಿರ ರೂ.ಗಳ ಪರಿಹಾರ ನೀಡಲಾಗುವುದು. ಮನೆಗೆ ಸಣ್ಣ ಪುಟ್ಟ ಹಾನಿಯಾಗಿದಲ್ಲಿ 6 ಸಾವಿರದ 500 ರೂ.ಗಳ ಪರಿಹಾರ ನೀಡಲಾಗುವುದು ಎಂದರು.


*ಮೀನುಗಾರಿಕೆ:*

ಮಳೆಯಿಂದ ಹಾನಿಯಾದಲ್ಲಿ ಮೀನು ಹೊಂಡಗಳಿಗೆ ಪ್ರತೀ ಎಕರೆಗೆ ಗರಿಷ್ಠ 8 ಸಾವಿರದ 200 ರೂ.ಗಳ ಪರಿಹಾರ ನೀಡಲಾಗುವುದು. ಕೆರೆಗಳಲ್ಲಿ ಮೀನು ಹಿಡಿಯಲು ಬಳಸುವ ದೋಣಿ ಹಾಗೂ ಬಲೆಗಳಿಗೆ ಪರಿಹಾರ ನೀಡಲಾಗುವುದು ಎಂದರು.


*ಬೆಸ್ಕಾಂ:*

ಮಳೆಯಿಂದಾಗಿ ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆಗಳಿದ್ದು, ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬಗಳ ಕುರಿತು ತಪಾಸಣೆ ಮಾಡಿ, ವಿದ್ಯುತ್ ಅವಘಡ ಆಗದಂತೆ ಕ್ರಮ ವಹಿಸಬೇಕು. ಅಪಾಯಕಾರಿ ಮರಗಳಿದ್ದಲ್ಲಿ, ವಿದ್ಯುತ್ ಕಂಬಗಳ ಅಕ್ಕಪಕ್ಕದಲ್ಲಿರುವ ಮರಗಳ ಕೊಂಬೆಗಳನ್ನು ಕತ್ತರಿಸಿ ಯಾವುದೇ ವಿದ್ಯುತ್ ಅಡಚಣೆಯಾಗದಂತೆ ಕ್ರಮವಹಿಸಬೇಕು ಎಂದರು. ಯಾವುದೇ ವಿದ್ಯುತ್ ಸಮಸ್ಯೆಯಿದ್ದಲ್ಲಿ ಸಹಾಯವಾಣಿ ಸಂಖ್ಯೆ: 1912ಗೆ 24/7 ಕರೆ ಮಾಡಬಹುದು ಎಂದರು.


ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹಿಂದೆ ಭಾರಿ ಮಳೆಯಿಂದ ನೀರು ಸಂಗ್ರಹವಾಗುತ್ತಿದ್ದ ಸ್ಥಳಗಳನ್ನು ಗುರುತಿಸಿ ಮಳೆ ನೀರು ಸರಾಗವಾಗಿ ಹೋಗುವಂತೆ ದುರಸ್ತಿ ಮಾಡಲಾಗಿದೆ ಎಂದರು.


ಅಗ್ನಿಶಾಮಕ ಅಧಿಕಾರಿಗಳು ಅಗತ್ಯ ದೋಣಿಗಳು, ಮುಳುಗು ತಜ್ಞರು ಹಾಗೂ ಅಗತ್ಯ ಪರಿಕರಗಳೊಂದಿಗೆ ಪರಿಸ್ಥಿತಿ ನಿಭಾಯಿಸಲು ಸಿದ್ದರಿರಬೇಕು ಎಂದು ಸೂಚಿಸಿದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಬಿ.ಸಿ., ಡಿವೈಎಸ್.ಪಿ. ದಿನಕರ್ ಶೆಟ್ಟಿ, ಹಾರೋಹಳ್ಳಿ ನಗರಸಭೆ ಆಯುಕ್ತ ಹ್ಯಾರಿಸ್ ಐ.ಎ.ಎಸ್ ಹಾಗೂ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑