Tel: 7676775624 | Mail: info@yellowandred.in

Language: EN KAN

    Follow us :


ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

Posted date: 08 Aug, 2023

Powered by:     Yellow and Red

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರೆ. ವೈದ್ಯಕೀಯಕ್ಕೆ ಸಂಬಂಧಿಸಿದ ಯಾವುದೇ ಪದವಿ ಪಡೆದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ತಾಲೂಕು ವೈದ್ಯಾಧಿಕಾರಿ ರಾಜು ಅವರು ಸ್ಥಳಕ್ಕೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.ಆ ಸಂದರ್ಭದಲ್ಲಿ ವೈದ್ಯರು ಮತ್ತು ರೋಗಿಗಳು ಇಲ್ಲದೆ ಆಸ್ಪತ್ರೆಗೆ ಬೀಗ ಜಡಿಯಲಾಗಿತ್ತು. ಇದನ್ನು ಗಮನಿಸಿ ಸ್ಥಳೀಯರೊಂದಿಗೆ ವಿಚಾರ ಮಾಡಿ ಅವರು ವೈದ್ಯರಲ್ಲ ಎಂಬುದನ್ನು ಖಚಿತ ಪಡಿಸಿಕೊಂಡಿದ್ದಾರೆ. 


ಆಸ್ಪತ್ರೆಗೆ ವೈದ್ಯರು ಬಂದು ಕೆಲಸ ನಿರ್ವಹಿಸಿದರೆ ತಮಗೆ ವಿಚಾರವನ್ನು ತಿಳಿಸಬೇಕಾಗಿ ರಾಜು ಅವರು ಸ್ಥಳೀಯರಿಗೆ ಮನವಿ ಮಾಡಿದ್ದಾರೆ. ಈ ಹಿಂದೆಯೂ ಸಹ ಹಲವಾರು ಬಾರಿ‌ ಸಾರ್ವಜನಿಕರು ಮೌಖಿಕ ದೂರು ನೀಡಿದ್ದು, ಗೋಪಿ ಅವರ ಪುತ್ರ ಡಾ.ವಂಸತ್ ಅವರು ಸಹ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದು ಹೊಂಗನೂರು ಗ್ರಾಮದಲ್ಲಿರುವ ಗೋಪಿ ಕ್ಲಿನಿಕ್‌‌ನನ್ನು ನಾನೇ ಮುಂದುವರೆಸುತ್ತೇನೆಂದು ವಸಂತ್ ಹೆಸರಿನಲ್ಲಿ ಪರವಾನಗಿ ಪಡೆದುಕೊಂಡು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.


ಇತ್ತೀಚಿಗೆ ಚನ್ನಪಟ್ಟಣ ನಗರಕ್ಕೆ ಅವರ ಆಸ್ಪತ್ರೆಯನ್ನು ವರ್ಗಾವಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ಹೊಂಗನೂರಿನಲ್ಲಿರುವ ಗೋಪಿ ಕ್ಲಿನಿಕ್ ಮುಚ್ಚುವುದಾಗಿ ನಗರದಲ್ಲಿ ತೆರೆದಿರುವ ಆಸ್ಪತ್ರೆಗೆ ಪರವಾನಗಿ ನೀಡಬೇಕೆಂದು ತಾಲೂಕು ವೈದ್ಯಾಧಿಕಾರಿಗಳ ಬಳಿ ಪಡೆದುಕೊಂಡಿದ್ದರು. ಸದರಿ ಆಸ್ಪತ್ರೆಯನ್ನು ಮುಚ್ಚದೆ ಅವರ ತಂದೆ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ನಡೆಸುತ್ತಿದ್ದಾರೆ. ಈ ದೂರಿನ ಮೇರೆಗೆ ಡಾ.ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಅದೇ ರೀತಿಯಲ್ಲಿ ಕೋಡಂಬಳ್ಳಿ ಗ್ರಾಮದಲ್ಲಿಯೂ ಸಹ ನಾಲ್ಕು ಕಟ್ಟಡಗಳ ಮಾಲೀಕರು ಯಾವುದೇ ಪರವಾನಗಿ ಪಡೆಯದೆ ಬಿಎ,ಎಂಎಸ್ ಪಡೆದಿರುವಂತ ವೈದ್ಯರಿಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಈ ನಾಲ್ಕು ಮಂದಿ ವೈದ್ಯರು ತಾಲೂಕು ವೈದ್ಯಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪರವಾನಗಿ ಪಡೆದಿಲ್ಲ. ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯರು ಇಲ್ಲದ ಕಾರಣ ಆ ನಾಲ್ಕು ಕ್ಲಿನಿಕ್‌ಗಳಿಗೆ ಬೀಗ ಜಡಿದು ಕಟ್ಟಡದ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಪರವಾನಗಿ ಇಲ್ಲದೆ ಯಾವುದೇ ವೈದ್ಯರು ಆಸ್ಪತ್ರೆ ತೆರೆಯಬಾರದು ಎಂದು ಹೇಳಿದ್ದಾರೆ. ಒಂದು ವೇಳೆ ವೈದ್ಯರು ಬಂದು ಕಾರ್ಯ ನಿರ್ವಹಿಸಿದರೆ ಮಾಹಿತಿ‌ ನೀಡಬೇಕೆಂದು ಸೂಚಿಸಿದ್ದಾರೆ. 


ಇತ್ತೀಚಿಗೆ ಬಿಎ,ಎಂಎಸ್ ಪದವಿ ಪಡೆದಿರುವ ಹಲವಾರು ವೈದ್ಯರು ಕೆಪಿಎಂಇ ಆಕ್ಟ್‌ನಡಿ ನೊಂದಾಯಿಸಿಕೊಳ್ಳದೆ ಕೆಲಸ ನಿರ್ವಹಿಸುತ್ತಿರುವುದು ಹೆಚ್ಚಾಗುತ್ತಿದೆ. ಬಿಎ, ಎಂಎಸ್ ಪದವಿ‌ ಆಯುರ್ವೇದಕ್ಕೆ ಸಂಬಂಧಿಸಿದ್ದು ಆಲೋಪತಿ ಔಷಧಿ ನೀಡುತ್ತಿದ್ದಾರೆ.‌ ತಾಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳು, ಪೊಲೀಸರು, ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡು ಸರಿಯಾದ ಕಾನೂನು ಕ್ರಮ ಜರುಗಿಸದೆ ಇದ್ದರೆ ರೋಗಿಗಳಿಗೆ ಜೀವ ಹೋಗುವ ಸಂಭವವಿರುತ್ತದೆ ಎಂದು ಸಾರ್ವಜನಿಕರ ಆಗ್ರಹವಾಗಿದೆ.


ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ವೈದ್ಯಾಧಿಕಾರಿ ರಾಜು ರವರು, ನಗರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಬಿಎಎಂಎಸ್ ಪದವಿ ಪಡೆದ ವೈದ್ಯರು ಖಾಸಗಿ ಕ್ಲಿನಿಕ್ ತೆರೆದು ಸೇವೆ ಮಾಡುತ್ತಿದ್ದಾರೆ. ಅವರು ಪರವಾನಗಿ ಪಡೆಯುತ್ತಿಲ್ಲ, ಪರವಾನಗಿ ಪಡೆಯಬೇಕಾದರೆ ಕೆಲವು ಮಾನದಂಡಗಳಿದ್ದು, ಅವುಗಳನ್ನು ಹೊಂದದೇ ಇರುವುದರಿಂದ ಪರವಾನಗಿ ಪಡೆಯಲು ಹಿಂಜರಿಯುತ್ತಿದ್ದಾರೆ. ಇದರಿಂದ ರೋಗಿಗಳಿಗೂ ಸಹ ತೊಂದರೆ ಯಾಗುತ್ತಿದೆ. ಇದನ್ನು ಮನಗಂಡು ಪರಿಶೀಲನೆ ನಡೆಸಿ, ವೈದ್ಯರಿಲ್ಲದ ಕಾರಣ ಕಟ್ಟಡದ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑