Tel: 7676775624 | Mail: info@yellowandred.in

Language: EN KAN

    Follow us :


ಸಿಂ ಲಿಂ ನಾಗರಾಜು ಸತ್ಯಸಂಧರು, ವಾಟಾಳ್ ನಾಗರಾಜು ಅಭಿಮತ

Posted date: 11 Nov, 2023

Powered by:     Yellow and Red

ಸಿಂ ಲಿಂ ನಾಗರಾಜು ಸತ್ಯಸಂಧರು, ವಾಟಾಳ್ ನಾಗರಾಜು ಅಭಿಮತ

ಚನ್ನಪಟ್ಟಣ; ಸಿಂ ಲಿಂ ನಾಗರಾಜು ಸತ್ಯಸಂಧರು, ಯೋಗ್ಯರು, ನಂಬಿಕಸ್ತರು, ವಿವೇಕವುಳ್ಳವರು, ವಿಚಾರವಂತರು, ಸರಳಜೀವಿ ಇಂತಹವರು ನನ್ನ ಸ್ನೇಹಿತರಾಗಿ, ಒಡನಾಡಿಯಾಗಿ, ಕನ್ನಡ ಪರ ಹೋರಾಟಗಾರರಾಗಿ ಕನ್ನಡಮ್ಮನ ಸೇವೆ ಮಾಡಿದವರು. ಇಂತಹ ಹೋರಾಟಗಾರರು ಈಗ ಇಲ್ಲ, ಮುಂದೆಯೂ ಕಷ್ಟ. ಇಂತಹ ಸರಳ, ಸತ್ಯವಂತನ್ನು ನೆನೆಯುವ ಕಾರ್ಯಕ್ರಮಕ್ಕೆ ಬರಲೇಬೇಕು ಎಂಬ ಅಭಿಲಾಷೆಯಿಂದಲೆ ಬಂದು ಭಾಗವಹಿಸಿದ್ದೇನೆ ಎಂದು ಕನ್ನಡ ಪರ ಹಿರಿಯ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜು ತಿಳಿಸಿದರು. ಅವರು ಶನಿವಾರ ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ದೇವಮ್ಮ ಚಿಕ್ಕಣ್ಣ ಸಭಾಂಗಣದಲ್ಲಿ  ಸಿಂ ಲಿಂ ನಾಗರಾಜು ಪ್ರತಿಷ್ಠಾನ ಟ್ರಸ್ಟ್ ಹಮ್ಮಿಕೊಂಡಿದ್ದ ಪ್ರತಿಭಾ  ಪುರಸ್ಕಾರ ಮತ್ತು ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.


ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ವಿ ವೆಂಕಟಪ್ಪ, ಬಿ ಜೆ ಲಿಂಗೇಗೌಡರ ಸಾಲಿನಲ್ಲಿ ನಿಲ್ಲುವಂತಹ ಸತ್ಯವಂತ ಸಿಂ ಲಿಂ ನಾಗರಾಜು, ಇವರು ಮೈಸೂರಿನಲ್ಲಿ ಆರಂಭಿಸಿದ ಕನ್ನಡ ಪರ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ. ಅವರ ಮದುವೆಯನ್ನು ಸರಳವಾಗಿ, ಕುವೆಂಪು ಮಂತ್ರಮಾಂಗಲ್ಯದ ಮೂಲಕ ವಿಚಾರವಂತಿಕೆಯ ಮೂಲಕ ನಾನೇ ಮಾಡಿಸಿದೆ. ಇವರ ಹೆಸರು ಶಾಶ್ವತವಾಗಿ ಉಳಿಯಬೇಕಾದರೆ, ಯಾರ ಆಜ್ಞೆಗೂ ಕಾಯದೆ, ನಗರದ ಸಾತನೂರು ರಸ್ತೆಯಲ್ಲಿರುವ ಸರ್ಕಲ್ ನಿಂದ ಸಾತನೂರು ವರೆವಿಗೂ ಸಿಂ ಲಿಂ ನಾಗರಾಜು ಹೆಸರನ್ನಿಡುವ ಮೂಲಕ ಅವರ ಹೆಸರನ್ನು ಶಾಶ್ವತವಾಗಿಡಬೇಕೆಂದು ತಿಳಿಸಿದರು.


ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಮಾತನಾಡಿ, ಸಿಂ ಲಿಂ ರವರು ನಮ್ಮೆಲ್ಲರ ನಡುವೆ ಓಡಾಡಿದ ಅಪರೂಪದ ಕನ್ನಡಿಗರು ಮತ್ತು ಕನ್ನಡ ಪರ ಹೋರಾಟಗಾರರು. ಇವರು ಕೇವಲ ರಾಜಕೀಯ ಮಾಡದೆ, ಸರಳ ರಾಜಕೀಯ ಮಾಡುವ ಮೂಲಕ ಹೆಸರುವಾಸಿಯಾದವರು. ವ್ಯವಸಾಯದ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡಿದ್ದಾರೆ. ಇಂದು ಈ ಕಾರ್ಯಕ್ರಮಕ್ಕೆ ಕನ್ನಡದ ಕಟ್ಟಾಳು ವಾಟಾಳ್ ನಾಗರಾಜು ರವರು ಬಂದಿರುವುದೇ ಸಾಕ್ಷಿಯಾಗಿದೆ. ಇಂತಹ ಸರಳಜೀವಿಯ ಕಾರ್ಯಕ್ರಮ ನಿಲ್ಲದೆ ನಡೆಯಬೇಕು. ಕೇವಲ ಚನ್ನಪಟ್ಟಣ ಅಷ್ಟೇ ಅಲ್ಲದೆ ಕನ್ನಡಿಗರೆಲ್ಲರೂ ಸೇರಿ ಈ ಕೆಲಸವನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಕರೆ ನೀಡಿದರು.


ನಗರ ವೃತ್ತ ನಿರೀಕ್ಷಕಿ ಶೋಭಾ ಮಾತನಾಡಿ, ಸಿಂ ಲಿಂ ನಾಗರಾಜು ರವರು ಅತ್ಯಂತ ಭಾವಜೀವಿಯಾಗಿದ್ದರು. ಅವರ ಕುಟುಂಬದ ಸದಸ್ಯರು ಈ ಕಾರ್ಯಕ್ರಮದಲ್ಲಿ ಅತ್ಯಂತ ಭಾವುಕರಾಗಿದ್ಧಾರೆ. ಇಂತಹ ಮಹಾನುಭಾವ, ಸರಳಜೀವಿ ಯ ಜೊತೆಗೆ ನಾನು ಹಲವಾರು ಬಾರಿ ಮಾತನಾಡಿದ್ದೇನೆ. ಅವರ ಅಂತಿಮ ನಮನದ ಕಾರ್ಯಕ್ರಮದಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು ಅವರ ಅಂತಿಮ ದರ್ಶನ ಪಡೆಯಲು ಸಹಸ್ರಾರು ಮಂದಿಗೆ ನೆರವಾಗಿದ್ದು ನನ್ನ ಜೀವನದಲ್ಲಿ ಅವೀಸ್ಮರಣೀಯವಾಗಿದೆ ಎಂದರು.


ಸಹಕಾರ ಸಂಘಗಳ ನಿಬಂಧ ಕರಾದ ಲಕ್ಷ್ಮೀಪತಯ್ಯ ನವರು ಮಾತನಾಡಿ, ಸಿಂ ಲಿಂ ನಾಗರಾಜು ರವರ ಸಹಕಾರ ತತ್ವ ಬಹಳ ವಿಶೇಷವಾಗಿತ್ತು. ಅವರು ಕನ್ನಡ ಕಟ್ಟುವಲ್ಲಿ ಬಹಳ ಹೋರಾಟ ಮಾಡಿದ್ದಾರೆ. ಇಂತಹ ಸರಳಜೀವಿ ನಮ್ಮೊಡನೆ ಮತ್ತಷ್ಟು ಕಾಲ ಇದ್ದಿದ್ದರೆ ರಾಮನಗರ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಮತ್ತಷ್ಟು ಬೆಳೆಯಲು ಅವಕಾಶವಾಗುತ್ತಿತ್ತು ಎಂದರು.


ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಹೆಚ್ ಕೆ ವಿವೇಕಾನಂದ ರವರು, ಈ ನಾಡು, ನೆಲ ಕಂಡಂತಹ ಧೀಮಂತ ನಾಯಕ ಸಿಂ ಲಿಂ ನಾಗರಾಜು ರವರು. ಅವರ ಸರಳ ಜೀವನವೇ ನಮ್ಮೆಲ್ಲರನ್ನೂ ಅವರೆಡೆಗೆ ಸೂಜಿಗಲ್ಲಿನಂತೆ ಸೆಳೆಯಿತು. ಇಂತಹ ನಾಯಕರ ಹೆಸರಿನಲ್ಲಿ ಪ್ರತಿಷ್ಠಾನ ಮಾಡಿರುವುದು ತುಂಬಾ ಉತ್ತಮವಾದ ಕೆಲಸವಾಗಿದೆ. ಈ ಪ್ರತಿಷ್ಠಾನವು ಕೇವಲ ಕಾರ್ಯಕ್ರಮಕ್ಕಷ್ಟೇ ಸೀಮಿತವಾಗದೆ, ಅವರ ವಿಚಾರಗಳನ್ನು ತಿಳಿಸುವ, ಅವರ ಉದ್ದೇಶಗಳನ್ನು ಈಡೇರಿಸುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ಕೆಲಸ ಮಾಡಬೇಕು ಎಂದರು.


ಹಿರಿಯ ಸಹಕಾರಿ ಧುರೀಣರಾದ ಸುಧಾಕರ್ ರವರಿಗೆ ಸಿಂ ಲಿಂ ನಾಗರಾಜು ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ೧೨೫/೧೨೫ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿಂ ಲಿಂ ನಾಗರಾಜು ರವರ ಪುತ್ರ ಆದರ್ಶಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಾನಪದ ಕಲಾವಿದ ಬೇವೂರು ರಾಮಯ್ಯ ಮತ್ತು ಸಂಗಡಿಗರು ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷ ಶಂಭೂಗೌಡ ಕಾರ್ಯದರ್ಶಿ ರಜನಿ ಆದರ್ಶಕುಮಾರ್ ಮತ್ತು ಪದಾಧಿಕಾರಿಗಳು. ಡಾ ಭಗತ್ ರಾಮ್, ಕೂ ಗಿ ಗಿರಿಯಪ್ಪ, ಬೆಸಗರಹಳ್ಳಿ ಎಲ್ಲೇಗೌಡ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑